- ಉಪ ರಾಷ್ಟ್ರಪತಿ ಭೇಟಿ ಮಾಡಿ ಸೌಹಾರ್ದ ಮಾತುಕತೆ ನಡೆಸಿದ ಖಾದರ್
- ದೆಹಲಿ ಪ್ರವಾಸದ ವೇಳೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ
ಸಭಾಧ್ಯಕ್ಷರಾಗಿ ಕಾರ್ಯ ಸಲ್ಲಿಸುವಷ್ಟು ದಿನ ಸದನದ ಘನತೆ, ಗೌರವ ಎತ್ತಿ ಹಿಡಿಯುವ ಕಾರ್ಯ ಮಾಡಿ ಎಂದು ಕರ್ನಾಟಕ ವಿಧಾನಸಭೆ ನೂತನ ಸ್ಪೀಕರ್ ಯು ಟಿ ಖಾದರ್ ಅವರಿಗೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಸಲಹೆ ನೀಡಿದರು.
ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಸ್ಪಿಕರ್ ಯು.ಟಿ. ಖಾದರ್ ಅವರು ಇದೇ ಮೊದಲ ಭಾರಿಗೆ ದೆಹಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಭೇಟಿ ಮಾಡಿ ಸೌಹಾರ್ದ ಮಾತುಕತೆ ನಡೆಸಿದರು.
ಈ ವೇಳೆ ಮಾತನಾಡಿದ ಉಪರಾಷ್ಟ್ರಪತಿಗಳು, ಖಾದರ್ ಕರ್ನಾಟಕ ರಾಜ್ಯ ವಿಧಾನಸಭೆಯ ಸ್ಪೀಕರ್ ಹುದ್ದೆಯನ್ನು ಕಿರಿಯ ವಯಸ್ಸಿನಲ್ಲಿ ವಹಿಸಿಕೊಂಡಿರುವುದು ಶ್ಲಾಘನೀಯ ಎಂದರು.
ಈ ಚಿಕ್ಕ ವಯಸ್ಸಿನಲ್ಲೇ ಸಭಾಧ್ಯಕ್ಷರಾಗಿ ಸೇವೆ ಸಲ್ಲಿಸಲು ಅವಕಾಶ ಸಿಕ್ಕಿರುವುದು ಸುದೈವ. ಸ್ಪೀಕರ್ ಹುದ್ದೆಯಲ್ಲಿ ನಿಮಗೆ ಸಿಗುವ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಅನುಭವ, ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ಅವರು ಸಲಹೆ ನೀಡಿದರು.
ಈ ಸುದ್ದಿ ಓದಿದ್ದೀರಾ?:ಸಂಘಪರಿವಾರದ ಹೇಡಿಗಳಿಗೆ ಪಠ್ಯದಲ್ಲಿ ಜಾಗವಿಲ್ಲ: ಬಿಕೆ ಹರಿಪ್ರಸಾದ್
ಸಭಾಧ್ಯಕ್ಷರಾಗಿ ಕಾರ್ಯ ಸಲ್ಲಿಸುವಷ್ಟು ದಿನ ಸದನದ ಘನತೆ, ಗೌರವ ಎತ್ತಿಹಿಡಿದು ಶಾಸಕರ ಹಾಗೂ ರಾಜ್ಯದ ಜನರ ಮನಗೆಲ್ಲಿ ಎಂದ ಅವರು, ಕರ್ನಾಟಕ ರಾಜ್ಯದ ಜನರ ಸಂಸ್ಕೃತಿ, ಆಚಾರ ವಿಚಾರದ ಬಗ್ಗೆ ನನಗೆ ಅಪಾರ ಗೌರವವಿದ್ದು ಶಾಸನ ಸಭೆಯ ನಡವಳಿಕೆಯ ಯಾವುದೇ ಮಾರ್ಗದರ್ಶನಕ್ಕಾಗಿ ನಾನು ನಿಮ್ಮೊಂದಿಗೆ ಇದ್ದೇನೆ ಎಂದು ಹೇಳಿದರು.