ಉಭಯ ಸದನಗಳಲ್ಲಿ ಗದ್ದಲ; ಮಧ್ಯಾಹ್ನದವರೆಗೆ ಅಧಿವೇಶನ ಮುಂದೂಡಿಕೆ

Date:

  • ರಾಹುಲ್‌ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿರುವ ಸೂರತ್‌ ನ್ಯಾಯಾಲಯ
  • ಶಿಕ್ಷೆಗೆ ಗುರಿಯಾಗಿರುವ ರಾಹುಲ್‌ ಅವರ ಸಂಸದ ಸ್ಥಾನ ಅನರ್ಹ ವಿಚಾರ

ಎರಡನೇ ಅವಧಿಯ ಸಂಸತ್ತು ಕಲಾಪವು ಈವರೆಗೆ ಅದಾನಿ ಹಗರಣ, ಜೆಪಿಸಿ ತನಿಖೆ, ಕಾಂಗ್ರೆಸ್ ಮುಖಂಡ ರಾಹುಲ್‌ ಗಾಂಧಿ ಕ್ಷಮೆ ವಿಚಾರದಲ್ಲಿ ಹೊಯ್ದಾಡುತ್ತಿತ್ತು. ಈಗ ಆಡಳಿತ ಪಕ್ಷಕ್ಕೆ ಹೊಸ ಅಸ್ತ್ರ ದೊರೆತಿದ್ದು, ರಾಹುಲ್ ಅನರ್ಹತೆ ವಿಚಾರವಾಗಿ ಗದ್ದಲದ ನಡುವೆ ಲೋಕಸಭೆ ಮತ್ತು ರಾಜ್ಯಸಭೆಗಳ ಕಲಾಪಗಳನ್ನು ಮುಂದೂಡಲಾಗಿದೆ.

ಸದನದಲ್ಲಿ ರಾಹುಲ್ ಶಿಕ್ಷೆ ಚರ್ಚೆ

ಸೂರತ್‌ ನ್ಯಾಯಾಲಯ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ವಿಧಿಸಿರುವ ಎರಡು ವರ್ಷಗಳ ಶಿಕ್ಷೆ ವಿಚಾರ ಸಂಸತ್ತಿನಲ್ಲಿ ಶುಕ್ರವಾರ (ಮಾರ್ಚ್‌ 24) ಸದ್ದು ಮಾಡಿದೆ. ಬೆಳಿಗ್ಗೆ 11 ಗಂಟೆಗೆ ಆರಂಭವಾದ ಲೋಕಸಭೆ ಹಾಗೂ ರಾಜ್ಯಸಭೆ ಕಲಾಪಗಳು ಆಡಳಿತ ಹಾಗೂ ಪ್ರತಿಪಕ್ಷಗಳ ನಡುವಿನ ವಾಗ್ವಾದಗಳಿಗೆ ಸಾಕ್ಷಿಯಾದವು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸೂರತ್‌ ನ್ಯಾಯಾಲಯದ ಶಿಕ್ಷೆ ಪ್ರಕಟವಾದ ಒಂದು ದಿನದ ನಂತರ ರಾಹುಲ್‌ ಗಾಂಧಿ ಅವರು ಲೋಕಸಭೆ ಕಲಾಪಕ್ಕೆ ಬೆಳಿಗ್ಗೆ ಹಾಜರಾದರು. ರಾಹುಲ್‌ ಅವರು ಭಾರತದ ಬಗ್ಗೆ ಲಂಡನ್‌ನಲ್ಲಿ ನೀಡಿದ ಹೇಳಿಕೆಗೆ ಕ್ಷಮೆಯಾಚಿಸಲು ಪ್ರತಿಪಕ್ಷಗಳು ಪಟ್ಟು ಹಿಡಿದವು. ಇದರಿಂದ ಆಡಳಿತ ಹಾಗೂ ಪ್ರತಿಪಕ್ಷಗಳ ನಡುವೆ ವಾಗ್ವಾದ ಉಂಟಾಯಿತು. ಪ್ರತಿಪಕ್ಷಗಳ ನಾಯಕರು ಬಿಜೆಪಿ ವಿರುದ್ಧ ಘೋಷಣೆ ಕೂಗಿದರು. ಬಳಿಕ ಕಲಾಪವನ್ನು ಮಧ್ಯಾಹ್ನ 12 ಗಂಟೆವರೆಗೂ ಮುಂದೂಡಲಾಯಿತು.

ಹಣಕಾಸು ಮಸೂದೆ ಮಂಡನೆ

ಮಧ್ಯಾಹ್ನ ಲೋಕಸಭೆ ಸೇರುತ್ತಿದ್ದಂತೆ ಪ್ರತಿಪಕ್ಷಗಳು ಆಡಳಿತ ಪಕ್ಷದ ವಿರುದ್ಧ ಘೋಷಣೆ ಕೂಗಿದವು. ಇದರ ನಡುವೆಯೇ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಹಣಕಾಸು ಮಸೂದೆ 2023 ಅನ್ನು ಮಂಡಿಸಿದರು.

ರಾಜ್ಯಸಭೆ ಕಲಾಪವೂ ಮುಂದೂಡಿಕೆ

ಬೆಳಿಗ್ಗೆ 11 ಗಂಟೆಗೆ ರಾಜ್ಯಸಭೆ ಆರಂಭವಾದ ನಂತರವೂ ವಿಪಕ್ಷಗಳು ಅದಾನಿ ವಿಚಾರ ಎತ್ತಿದರೆ, ಆಡಳಿತ ಪಕ್ಷ ರಾಹುಲ್‌ ವಿಚಾರ ತೆಗೆದು ಗದ್ದಲ ಎಬ್ಬಿಸಿದೆ. ಇದರಿಂದ ಬಿಜೆಪಿ ಹಾಗೂ ವಿಪಕ್ಷಗಳ ನಾಯಕರ ನಡುವೆ ತಿಕ್ಕಾಟ ಆರಂಭವಾಯಿತು.

ಈ ಹಿನ್ನೆಲೆಯಲ್ಲಿ ಸಭಾಪತಿ ಜಗದೀಪ್‌ ಧನಕರ್‌ ಅವರು ಕಲಾಪವನ್ನು ಮಧ್ಯಾಹ್ನ 2.30ರವರೆಗೂ ಮುಂದೂಡಲಾಗಿದೆ ಎಂದು ಪ್ರಕಟಿಸಿದರು.

ಆಡಳಿತ ಹಾಗೂ ಪ್ರತಿಪಕ್ಷಗಳ ನಾಯಕರು ತಮ್ಮ ಬೇಡಿಕೆಗಳ ಕುರಿತು ಚರ್ಚೆಗೆ ಒತ್ತಾಯಿಸಿ ನಿಯಮ 267ರ ಅಡಿ ನೀಡಿದ 14 ನೋಟಿಸ್‌ಗಳನ್ನು ಧನಕರ್‌ ಅವರು ತಿರಸ್ಕರಿಸಿದರು.

ಮೋದಿ ಉಪನಾಮದ ಬಗ್ಗೆ ಟೀಕೆಗೆ ಸಂಬಂಧಿಸಿ ಗುರುವಾರ (ಮಾರ್ಚ್ 23) ಸೂರತ್‌ ನ್ಯಾಯಾಲಯ ರಾಹುಲ್‌ ಗಾಂಧಿ ಅವರಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಬಳಿಕ ಆದೇಶ ಪ್ರಶ್ನಿಸಲು 30 ದಿನಗಳ ಜಾಮೀನು ಮಂಜೂರು ಮಾಡಿತ್ತು.

ಸಂಸತ್‌ ಸದಸ್ಯರೊಬ್ಬರು ಯಾವುದೇ ಅಪರಾಧದಲ್ಲಿ ಎರಡು ವರ್ಷ ಶಿಕ್ಷೆಗೆ ಒಳಗಾದರೆ ಜನಪ್ರತಿನಿಧಿ ಕಾಯಿದೆ, 1951ರ ಸೆಕ್ಷನ್ 8 (3) ರ ಪ್ರಕಾರ ಅವರು ಸಂಸತ್ತಿನಿಂದ ಅನರ್ಹತೆ ಎದುರಿಸಬಹುದು ಎನ್ನಲಾಗಿದೆ. ಉಭಯ ಸದನಗಳಲ್ಲಿ ಈ ಸಂಬಂಧ ಚರ್ಚೆ ನಡೆಯುವ ಸಾಧ್ಯತೆ ಇದೆ.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜೆಡಿಎಸ್‌ ಟಿಕೆಟ್‌ ಫೈನಲ್ | ಮಂಡ್ಯಕ್ಕೆ ಎಚ್‌ಡಿಕೆ, ಹಾಸನಕ್ಕೆ ಪ್ರಜ್ವಲ್‌, ಕೋಲಾರಕ್ಕೆ ಮಲ್ಲೇಶ್‌ ಬಾಬು

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ಗೆ 28...

ಮುಖ್ತಾರ್ ಅನ್ಸಾರಿಗೆ ಜೈಲಿನಲ್ಲಿ ‘ಸ್ಲೋ ಪಾಯ್ಸನ್’ ನೀಡಲಾಗಿದೆ; ಪುತ್ರ ಉಮರ್ ಅನ್ಸಾರಿ ಆರೋಪ

ಉತ್ತರ ಪ್ರದೇಶದ ಗ್ಯಾಂಗ್‌ಸ್ಟರ್, ರಾಜಕಾರಣಿ ಮುಖ್ತಾರ್ ಅನ್ಸಾರಿ ಗುರುವಾರ ಸಂಜೆ ಜೈಲಿನಲ್ಲಿ...

ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ವಿಶ್ವಸಂಸ್ಥೆ ಪ್ರತಿಕ್ರಿಯೆ

ವಿಶ್ವಸಂಸ್ಥೆ ಯ ಪ್ರಧಾನ ಕಾರ್ಯದರ್ಶಿ ಆನ್‌ಟೊನಿಯೋ ಗುಟೆರ್ರಸ್ ಅವರ ವಕ್ತಾರರು ಅರವಿಂದ್‌...

ಜಮ್ಮು – ಶ್ರೀನಗರದ ಹೆದ್ದಾರಿಯಲ್ಲಿ ಅಪಘಾತ: 10 ಸಾವು

ಪ್ರಾಯಣಿಕರನ್ನು ಕರೆದೊಯ್ಯುವ ಟ್ಯಾಕ್ಸಿಯೊಂದು ಕಂದಕಕ್ಕೆ ಬಿದ್ದು ಕನಿಷ್ಠ 10 ಮಂದಿ ಮೃತಪಟ್ಟ...