‘ಎನ್‌ಜಿಒಗಳಲ್ಲಿ ನಗರ ನಕ್ಸಲರು’ ಹೇಳಿಕೆ: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂದೆಗೆ ನೋಟಿಸ್

Date:

Advertisements

‘ಎನ್‌ಜಿಒಗಳಲ್ಲಿ ನಗರ ನಕ್ಸಲರು’ ನುಸುಳಿದ್ದಾರೆ ಮತ್ತು ಅವರು ಸರ್ಕಾರದ ವಿರುದ್ಧ ಸಕ್ರಿಯವಾಗಿ ಸುಳ್ಳು ಹರಡುತ್ತಿದ್ದಾರೆ ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಹೇಳಿಕೆ ನೀಡಿದ ಒಂದು ವಾರದ ನಂತರ ಪುಣೆ ಮೂಲದ ಸಂಘಟನೆಯೊಂದು ಅವರಿಗೆ ಲೀಗಲ್ ನೋಟಿಸ್ ಕಳುಹಿಸಿದೆ.

ಈ ರೀತಿ ಇರುವ ಎನ್‌ಜಿಒಗಳ ಹೆಸರನ್ನು ಶಿಂಧೆ ಬಹಿರಂಗಪಡಿಸಬೇಕು ಅಥವಾ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಸಂಘಟನೆ ಒತ್ತಾಯಿಸಿದೆ.

ಜೂನ್ 16ರಂದು ವಿಧಾನ ಪರಿಷತ್ತಿನ ಚುನಾವಣೆಗೆ ಸಂಬಂಧಿಸಿದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಿಂದೆ, “ನಕ್ಸಲರು ಗಡ್ಚಿರೋಲಿಯಲ್ಲಿ (ಮಹಾರಾಷ್ಟ್ರದ ಒಂದು ನಗರ) ಮಾತ್ರವಲ್ಲ, ನಗರ ನಕ್ಸಲರು ಎನ್‌ಜಿಒಗಳಿಗೆ ಪ್ರವೇಶಿಸಿದ್ದಾರೆ. ಸರ್ಕಾರದ ವಿರುದ್ಧ ವ್ಯವಸ್ಥಿತವಾಗಿ ಸುಳ್ಳು ನಿರೂಪಣೆಗಳನ್ನು ಸೃಷ್ಟಿಸಿದ್ದಾರೆ” ಎಂದು ಶಿಂದೆ ದೂರಿದ್ದರು.

Advertisements

“ಎಲ್ಲಾ ಎನ್‌ಜಿಒಗಳು ಅಲ್ಲ ಆದರೆ ಕೆಲವು ಎನ್‌ಜಿಒಗಳು ಆಡಳಿತ ವಿರೋಧಿಯಾಗಿದೆ. ಆ ಎನ್‌ಜಿಒಗಳು ನಮ್ಮ ಮೈತ್ರಿ ಸರ್ಕಾರದ ಬಗ್ಗೆ ಸಕ್ರಿಯವಾಗಿ ಸುಳ್ಳುಗಳನ್ನು ಹರಡುತ್ತಾರೆ” ಎಂದು ಶಿಂದೆ ಆರೋಪಿಸಿದ್ದರು.

ಇದನ್ನು ಓದಿದ್ದೀರಾ?  ‘ನಗರ ನಕ್ಸಲ್’ ದಂಪತಿಗಳ ದುರಂತಗಾಥೆ ಮತ್ತು ಫ್ರಾಕ್ಚರ್‍ಡ್ ಫ್ರೀಡಂ

‘ನಿರ್ಭಯ್ ಬನೊ’ (ನಿರ್ಭಯವಾಗು) ಜನಾಂದೋಲನದ ಸಕ್ರಿಯ ಸದಸ್ಯ ಎಂದು ಹೇಳಿಕೊಳ್ಳುವ ಬಾಲಕೃಷ್ಣ ಅಲಿಯಾಸ್ ಬಂಟಿ ನಿಧಾಲ್ಕರ್ ಕಳುಹಿಸಿರುವ ನೋಟಿಸ್‌ನಲ್ಲಿ, ” ಮಹಾರಾಷ್ಟ್ರ ಜನರು ಬಿಕ್ಕಟ್ಟನ್ನು ಎದುರಿಸುತ್ತಿರುವಾಗ ಮುಖ್ಯಮಂತ್ರಿಯಾಗಿರುವ ಶಿಂದೆ ಅವರು ಪ್ರತಿಯೊಂದು ವಿಷಯಕ್ಕೂ ರಾಜಕೀಯವನ್ನು ಎಳೆದು ತರುವುದು ಅನುಚಿತವಾಗಿದೆ” ಎಂದು ಹೇಳಲಾಗಿದೆ.

ನೋಟಿಸ್‌ನಲ್ಲಿ ಕೃಷಿ ಬಿಕ್ಕಟ್ಟು ಮತ್ತು ಇತರ ಸಮಸ್ಯೆಗಳ ನಡುವೆ ಹೆಚ್ಚುತ್ತಿರುವ ನಿರುದ್ಯೋಗದ ಪ್ರಸ್ತಾಪ ಮಾಡಲಾಗಿದ್ದು, ಇಂತಹ ಸಮಸ್ಯೆಗಳು ಇರುವಾಗ ಶಿಂದೆ ಆರೋಪ ಅಸಂಬದ್ಧ ಮತ್ತು ಕಾನೂನುಬಾಹಿರ. ಮುಖ್ಯಮಂತ್ರಿ ಇಂತಹ ಹೇಳಿಕೆಗಳನ್ನು ನೀಡಬಾರದಿತ್ತು ಎಂದು ಅಭಿಪ್ರಾಯಿಸಲಾಗಿದೆ.

ವಕೀಲ ಅಸೀಮ್ ಸರೋದೆ ಮೂಲಕ ಕಳುಹಿಸಲಾದ ನೋಟಿಸ್‌ನಲ್ಲಿ, “ಶಿವಸೇನೆ ನಾಯಕರು ನೀಡಿದ ಈ ಹೇಳಿಕೆಯು ನಗರ ನಕ್ಸಲರಾದ ವಿವಿಧ ಎನ್‌ಜಿಒಗಳ ಬಗ್ಗೆ ಅವರಿಗೆ ತಿಳಿದಿದೆ ಎಂದು ಸೂಚಿಸುತ್ತದೆ. ಆದ್ದರಿಂದ ಈ ಎಲ್ಲಾ ಎನ್‌ಜಿಒಗಳ ಬಗ್ಗೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಕಾನೂನು ಕ್ರಮ ಜರುಗಿಸಬೇಕು, ಸಾರ್ವಜನಿಕ ಪ್ರಕಟಣೆ ನೀಡಬೇಕು” ಎಂದು ಮನವಿ ಮಾಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X