ಹೆಚ್‌ಡಿಕೆ ವಿರುದ್ಧ ಹಂದಿ ಪದ ಬಳಕೆ, ಎಡಿಜಿಪಿ ಚಂದ್ರಶೇಖರ್ ವಿರುದ್ಧ ವಿಜಯೇಂದ್ರ ಆಕ್ರೋಶ

Date:

Advertisements

ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಭ್ರಷ್ಟ ಹಗರಣಗಳ ಸೂತ್ರಧಾರಿ ಅಧಿಕಾರಿಗಳ ವರ್ತನೆ ಅತಿರೇಕಕ್ಕೆ ಹೋಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಎಕ್ಸ್‌ ತಾಣದಲ್ಲಿ ಈ ಬಗ್ಗೆ ಪೋಸ್ಟ್‌ ಮಾಡಿರುವ ಅವರು, “ಹೆಚ್‌ ಡಿ ಕುಮಾರಸ್ವಾಮಿಯವರು ರಾಜ್ಯದ ಮುಖ್ಯಮಂತ್ರಿಯಾಗಿದ್ದವರು. ಸದ್ಯ ಕೇಂದ್ರ ಸಚಿವರೂ ಎಂಬುದನ್ನೂ ಲೆಕ್ಕಿಸದೇ ಎಡಿಜಿಪಿ ಎಂ.ಚಂದ್ರಶೇಖರ್ ಅವರು ಬಳಸಿರುವ ಪದಗಳು ಅನುಚಿತವಾಗಿದೆ. ಕೇಂದ್ರದ ಸಚಿವರನ್ನೇ ಬೆದರಿಸಲು ಹೊರಟಿರುವ ಅವರ ವರ್ತನೆ ಪ್ರಜಾಪ್ರಭುತ್ವವನ್ನೇ ಅಣಕಿಸಿದ ಅಕ್ಷಮ್ಯ ನಡೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಧಿಕಾರಿಗಳ ಇಂತಹ ನಡವಳಿಕೆಗಳನ್ನು ಪಕ್ಷಾತೀತವಾಗಿ ಪ್ರತಿಯೊಬ್ಬರೂ ಖಂಡಿಸಲೇಬೇಕು. ಆದರೆ ವಿಪರ್ಯಾಸದ ಸಂಗತಿ ಏನೆಂದರೆ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ‘ಬೇಲಿಯೇ ಎದ್ದು ಹೊಲ ಮೇಯ್ದ’ ಪರಿಸ್ಥಿತಿಯ ಲಾಭ ಪಡೆಯುತ್ತಿರುವ ಅಧಿಕಾರಿಗಳಿಗೆ ಅಂಕುಶ ಹಾಕುವವರಿಲ್ಲದೇ ಆಡಳಿತದಲ್ಲಿ ಅರಾಜಕತೆ ಸೃಷ್ಠಿಯಾಗಿದೆ” ಎಂದಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದ್ವೇಷ ರಾಜಕಾರಣಕ್ಕೆ ದಿಟ್ಟ ಉತ್ತರದ ಅಗತ್ಯವಿದೆ

“ಗಾಂಧಿ ಜಯಂತಿಯ ಈ ದಿನ ‘ಸತ್ಯಮೇವ ಜಯತೆ’ಯ ಮೇಲೆ ಸವಾರಿ ಮಾಡುತ್ತಿರುವ ಮುಖ್ಯಮಂತ್ರಿಯ ಬಾಯಿಂದ ಈ ರಾಜ್ಯದ ಜನ ಮಹಾತ್ಮನ ಸಂದೇಶ ಕೇಳಬೇಕಿರುವುದು ದೌರ್ಭಾಗ್ಯವೇ ಸರಿ” ಎಂದು ಟೀಕಿಸಿದ್ದಾರೆ.

“ಕಾಂಗ್ರೆಸ್ ಶತಮಾನದುದ್ದಕ್ಕೂ ಗಾಂಧಿಯವರ ಹೆಸರನ್ನು ಮತ ಬ್ಯಾಂಕ್ ವೃದ್ಧಿಗೊಳಿಸಲು ಬಳಸಿಕೊಂಡಿದೆ. ಬ್ರಿಟಿಷರ ಕಪಿಮುಷ್ಠಿಯಿಂದ ಭ್ರಷ್ಟ ಅಧಿಕಾರಿಗಳ ಮುಷ್ಠಿಗೆ ಪ್ರಜಾತಂತ್ರ ವ್ಯವಸ್ಥೆಯನ್ನು ಸಿಲುಕಿಸಿ ದರ್ಪ ಪ್ರದರ್ಶಿಸುತ್ತಿರುವ ಭ್ರಷ್ಟ ಅಧಿಕಾರಿಗಳನ್ನು ಪೋಷಿಸುತ್ತಾ ಬಂದಿರುವುದು ‘ಸ್ವತಂತ್ರ ಭಾರತ’ಕ್ಕೆ ಕಾಂಗ್ರೆಸ್ ಕೊಟ್ಟ ಕೊಡುಗೆಯಾಗಿದೆ” ಎಂದು ಕುಟುಕಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X