‘ವಾದಾ ದಿಯಾ: ಪೂರಾ ಕಿಯಾ’ – ಬಿಜೆಪಿಯ ಸುಳ್ಳು ಜಾಹೀರಾತಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

Date:

Advertisements

ಮಹಾರಾಷ್ಟ್ರದ ಬಿಜೆಪಿ ‘ಕರ್ನಾಟಕ ಸರ್ಕಾರ ವಾದಾ ಕಿಯಾ: ಧೋಖಾ ದಿಯಾ’ ಎಂದು ಸುಳ್ಳು ಜಾಹಿರಾತು ನೀಡಿದೆ. ಕರ್ನಾಟಕದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಭರವಸೆ ನೀಡಿತ್ತು. ಭರವಸೆ ಈಡೇರಿಸದೇ, ಯೋಜನೆಯನ್ನೇ ಇನ್ನೂ ಆರಂಭಿಸದೆ ವಂಚಿಸಿದೆ ಎನ್ನುವ ಅರ್ಥದ ಪರಮ ಸುಳ್ಳಿನ ಜಾಹೀರಾತುಗಳನ್ನು ಪುಟಗಟ್ಟಲೆ ನೀಡಿದೆ. ನಮ್ಮದು ವಾದಾ ದಿಯಾ: ಪೂರಾ ಕಿಯಾ ಎಂದು ಸಿಎಂ ಸಿದ್ದರಾಮಯ್ಯ ಹರಿಹಾಯ್ದರು.

ಸಂಡೂರು ಚುನಾವಣಾ ಪ್ರಚಾರದ ವೇದಿಕೆಯಲ್ಲೇ ಮಾತನಾಡಿ, “ಬಿಜೆಪಿಯವರಿಗೆ ಸುಳ್ಳೇ ಮನೆ ದೇವರು. ರಾಜ್ಯದಲ್ಲಿ ಶಕ್ತಿ ಯೋಜನೆ ಸೇರಿದಂತೆ ಐದಕ್ಕೆ ಐದು ಗ್ಯಾರಂಟಿಗಳು ಯಶಸ್ವಿಯಾಗಿ ನಡೆದುಕೊಂಡು ಹೋಗುತ್ತಿದೆ. ಗೃಹಲಕ್ಷ್ಮಿಯ ಮುಂದಿನ ಕಂತಿನ ಹಣ ಒಂದೆರಡು ದಿನಗಳಲ್ಲೇ ಬಿಡುಗಡೆ ಕೂಡ ಆಗುತ್ತದೆ. ಆದರೆ ಬಿಜೆಪಿಯವರು ಸುಳ್ಳುಗಳನ್ನು ಹರಡಿಸುತ್ತಾ, ಸುಳ್ಳುಗಳನ್ನು ಹರಡುವುದಕ್ಕೇ ಕೋಟಿ ಕೋಟಿ ಖರ್ಚು ಮಾಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೋದಿ ಹೇಳಿದ್ದೇನು ? ಮಾಡಿದ್ದೇನು?

Advertisements

“ವಿದೇಶದಲ್ಲಿರುವ ಕಪ್ಪುಹಣ ತಂದು ಎಲ್ಲರ ಖಾತೆಗೆ 15 ಲಕ್ಷ ಕೊಡ್ತೀವಿ ಅಂತ ಹೇಳಿದ್ರಲ್ಲಾ ಮೋದಿಯವರೇ ಕೊಟ್ರೇನ್ರೀ? ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀನಿ ಅಂದ್ರಲ್ಲಾ ಮೋದಿಯವರೇ, ಉದ್ಯೋಗ ಸೃಷ್ಟಿ ಮಾಡಿದ್ರಾ ? ಎಲ್ರೀ ಸ್ವಾಮಿ ನಿಮ್ಮ ಅಚ್ಚೆ ದಿನ್? ರೈತರ ಆದಾಯ ದುಪ್ಪಟ್ಟು ಮಾಡ್ತೀನಿ ಅಂದ್ರಲ್ಲಾ ಮೋದಿಯವರೇ ಮಾಡಿದ್ರಾ ? ಮೋದಿ ಪ್ರಧಾನಿ ಆಗುವ ಮೊದಲು ದೇಶದ ಸಾಲ ಇದ್ದದ್ದು 54 ಲಕ್ಷ ಕೋಟಿ ಮಾತ್ರ ಇತ್ತು. ಈಗ ನಿಮ್ಮ ಅವಧಿಯಲ್ಲಿ ದೇಶದ ಸಾಲವನ್ನು 185 ಲಕ್ಷ ಕೋಟಿಗೆ ಏರಿಸಿದ್ದೀರಿ. ಇದೇನಾ ಸ್ವಾಮಿ ನಿಮ್ಮ ಅಚ್ಚೆ ದಿನ್” ಎಂದು ವ್ಯಂಗ್ಯವಾಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಕ್ಫ್ ಧರಣಿಗೂ, ಬಿಜೆಪಿ ಬಂಡಾಯಕ್ಕೂ ಶೋಭಾ ನಾಯಕಿಯಾಗಿದ್ದೇಕೆ?

ಅನ್ನಪೂರ್ಣ ಅವರನ್ನು ಗೆಲ್ಲಿಸಿ: ಮನವಿ

ಅನ್ನಪೂರ್ಣ ನನ್ನ ಆತ್ಮೀಯ ಸ್ನೇಹಿತ‌ನ ಮಗಳು. ಇವರನ್ನು ಗೆಲ್ಲಿಸಿ. ಮೂರೂವರೆ ವರ್ಷ ನಮ್ಮದೇ ಸರ್ಕಾರ ಇರತ್ತೆ. ಸಂಡೂರಿನ ಅಭಿವೃದ್ಧಿ ಜೋರಾಗತ್ತೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

“ಈ.ತುಕಾರಾಮ್ ಅವರು ಕ್ಷೇತ್ರದ ಅಭಿವೃದ್ಧಿಗಾಗಿ ಸದಾ ಕಾತರಿಸುತ್ತಾ ಕೆಲಸ ಮಾಡುವ ಶಾಸಕರಾಗಿದ್ದರು, ಈಗ ಸಂಸದರಾಗಿದ್ದಾರೆ. ಸಂಡೂರಿನಲ್ಲಿ ಈಗ ಆಗಿರುವ ಎಲ್ಲಾ ಅಭಿವೃದ್ಧಿಗಳೂ ಈ.ತುಕಾರಾಮ್ ಮತ್ತು ಸಂತೋಷ್ ಲಾಡ್ ಅವರ ಅವಧಿಯಲ್ಲಿ ಆಗಿರುವಂಥವು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X