ವಾಲ್ಮೀಕಿ ನಿಗಮ ಹಗರಣ: ಇ.ಡಿ ವಶಕ್ಕೆ ಶಾಸಕ ನಾಗೇಂದ್ರ

Date:

Advertisements

ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂ. ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಬಳ್ಳಾರಿ ಗ್ರಾಮೀಣ ಕಾಂಗ್ರೆಸ್ ಶಾಸಕ ಬಿ ನಾಗೇಂದ್ರ ಅವರನ್ನು ಇ.ಡಿ ಅಧಿಕಾರಿಗಳು ಶುಕ್ರವಾರ ಬೆಳಗ್ಗೆ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿ ವಶಕ್ಕೆ ಪಡೆದುಕೊಂಡರು.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ಪ್ರಕರಣದಲ್ಲಿ ಈಗಾಗಲೇ ಸಿಬಿಐ ಸಹ ತನಿಖೆ ನಡೆಸಿದೆ. ಇದರ ಬೆನ್ನಲ್ಲೇ ಏಕಾಏಕಿ ಇ.ಡಿ ಅಧಿಕಾರಿಗಳು ಬುಧವಾರ ಕಾಂಗ್ರೆಸ್ ಶಾಸಕರಾದ ನಾಗೇಂದ್ರ ಮತ್ತು ಬಸನಗೌಡ ದದ್ದಲ್ ನಿವಾಸಗಳ ಮೇಲೆ ದಾಳಿ ಮಾಡಿ, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದರು.

ಬುಧವಾರ ಬೆಳ್ಳಂಬೆಳಗ್ಗೆ ರಾಯಚೂರು ಗ್ರಾಮೀಣ ಶಾಸಕರಾದ ಬಸನಗೌಡ ದದ್ದಲ್ ಹಾಗೂ ಬಳ್ಳಾರಿ ಗ್ರಾಮೀಣ ಶಾಸಕರಾದ ನಾಗೇಂದ್ರ ನಿವಾಸದ ಮೇಲೆ ಇ.ಡಿ ಅಧಿಕಾರಿಗಳು ದಾಳಿ ಮಾಡಿದ್ದು, ಬಳಿಕ ಅಧಿಕಾರಿಗಳು ಬೆಂಗಳೂರಿನಲ್ಲಿ ನಾಗೇಂದ್ರ ಆಪ್ತ ಸಹಾಯ ಹರೀಶ್ ಎಂಬುವರನ್ನು ವಶಕ್ಕೆ ಪಡೆದುಕೊಂಡು, ವಿಚಾರಣೆ ನಡೆಸಿದ್ದರು. ಈ ವೇಳೆ ಹರೀಶ್ ನೀಡಿದ ಕೆಲ ಮಾಹಿತಿ ಆಧಾರದ ಮೇಲೆ ಶಾಸಕ ನಾಗೇಂದ್ರ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Advertisements

ಈ ದಿನ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಮನಗರ ಜಿಲ್ಲೆ ಹೆಸರು ಬದಲಾವಣೆ ಯಾರಿಗಾಗಿ, ಏತಕ್ಕಾಗಿ?

ಶಾಸಕ ನಾಗೇಂದ್ರ ವಿರುದ್ಧ ಸಚಿವರ ಪರವಾಗಿ ಒತ್ತಡ ಹಾಕಿ ಹಣದ ವಹಿವಾಟು ನಡೆಸಿದ ಆರೋಪ ಕೇಳಿ ಬಂದಿದೆ. ಹೈದರಾಬಾದ್‌ನ ಸತ್ಯನಾರಾಯಣ ವರ್ಮಾನಿಂದ ಬಂದಿದ್ದ ಹಣ ನಾಗೇಂದ್ರ ಪಿಎ ಹರೀಶ್‌ಗೆ ತಲುಪಿತ್ತು ಎನ್ನಲಾಗಿದೆ. ಅಲ್ಲದೆ ಏಪ್ರಿಲ್ ತಿಂಗಳಿನ ಎರಡನೇ ವಾರ ಪದ್ಮನಾಭನಿಂದ ಹರೀಶ್‌ 25 ಲಕ್ಷ ರೂ. ಹಣ ಪಡೆದಿದ್ದನು. ಈ ಬಗ್ಗೆ ಪಿಎ ಹರೀಶ್‌ಗೆ ಹಣ ನೀಡಿದ್ದಾಗಿ ಖುದ್ದು ಪದ್ಮನಾಭ್ ಹೇಳಿಕೆ ನೀಡಿದ್ದರು.

ನಾಗೇಂದ್ರ ಪರ ಹವಾಲಾ ಹಣ ಮತ್ತು ಚಿನ್ನದ ಬಿಸ್ಕೆಟ್‌ ಪಡೆದ ಆರೋಪ ಇದ್ದು, ಮಾಜಿ ಸಚಿವ ನಾಗೇಂದ್ರ ಪರ 50 ರಿಂದ 60 ಕೋಟಿ ವ್ಯವಹಾರ ನಡೆದಿದೆ ಎನ್ನುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಹೆಚ್ಚಿನ ವಿಚಾರಣೆ ನಡೆಸಲು ಹರೀಶ್‌ ಅವರನ್ನು ಇ.ಡಿ ವಶಕ್ಕೆ ಪಡೆದುಕೊಂಡಿದ್ದರು. ಇದೀಗ ಇ.ಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಮೊದಲು ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ ನಡೆದಿರುವುದು ಬೆಳಕಿಗೆ ಬಂದ ನಂತರ ವಿಪಕ್ಷಗಳು ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿದ್ದವು. ನಂತರ ನಾಗೇಂದ್ರ ಅವರು ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X