ವಾಲ್ಮೀಕಿ ನಿಗಮ ಅಕ್ರಮ | ನಕಲಿ ಖಾತೆ ತೆರೆದಿದ್ದ ಆರೋಪಿ ಬಂಧನ, 16 ಕೆಜಿ ಚಿನ್ನ, 10 ಕೋಟಿ ನಗದು ಜಪ್ತಿ

Date:

Advertisements

ವಾಲ್ಮೀಕಿ ನಿಗಮದ ಬಹುಕೋಟಿ ರೂಪಾಯಿ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ನಕಲಿ ಖಾತೆ ತೆರೆದಿದ್ದ ಆರೋಪಿ ಸತ್ಯನಾರಾಯಣ ವರ್ಮನನ್ನು ಹೈದರಾಬದ್​ನಲ್ಲಿ ಎಸ್ಐಟಿ ಬಂಧಿಸಿದೆ.

ಬಂಧಿತ ಆರೋಪಿ ವಿವಿಧ ಕಂಪೆನಿಗಳ ಹೆಸರಿನಲ್ಲಿ 18 ಬ್ಯಾಂಕ್ ಖಾತೆ ತೆರೆದಿದ್ದು, ಎಲ್ಲ 18 ಬ್ಯಾಂಕ್ ಖಾತೆಗಳಿಗೂ ವಾಲ್ಮೀಕಿ ನಿಗಮದಿಂದ ಹಣ ವರ್ಗಾವಣೆ ಆಗಿದೆ.

ಅಕೌಂಟ್ ನಂಬರ್ ಪರಿಶೀಲನೆ ವೇಳೆ ನಕಲಿ ಖಾತೆ ತೆರೆದಿರುವುದು ಖಚಿತವಾಗಿತ್ತು. ಇದನ್ನು ಬೆನ್ನಟ್ಟಿ ನಕಲಿ ಖಾತೆ ತೆರೆದ ವ್ಯಕ್ತಿ ಬಗ್ಗೆ ಮಾಹಿತಿ ಸಂಗ್ರಹಿಸಿದ್ದ ಎಸ್​ಐಟಿ ಆರೋಪಿ ಪತ್ತೆಗೆ ಬಲೆ ಬೀಸಿತ್ತು.

Advertisements

16 ಕೆಜಿ ಚಿನ್ನ, 10 ಕೋಟಿ ನಗದು ಜಪ್ತಿ

ಬಂಧಿತ ಆರೋಪಿ ಸತ್ಯನಾರಾಯಣ ಬಳಿಯಿಂದ 16 ಕೆಜಿ ಚಿನ್ನ, 10 ಕೋಟಿ ನಗದನ್ನು ಎಸ್‌ಐಟಿ ಜಪ್ತಿ ಮಾಡಿದೆ. ಬುಧವಾರ ಸತ್ಯನಾರಾಯಣನನ್ನು ಎಸ್​ಐಟಿ ತಂಡ ಬೆಂಗಳೂರಿಗೆ ಕರೆತರಲಿದ್ದಾರೆ.

ಏನಿದು ಪ್ರಕರಣ?

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ನಿಯಮಿತಕ್ಕೆ ಸಂಬಂಧಿಸಿದ ಬ್ಯಾಂಕ್ ಖಾತೆಯಿಂದ 18 ಖಾತೆಗಳಿಗೆ ಬರೋಬ್ಬರಿ 94.73 ಕೋಟಿ ರೂಪಾಯಿ ಅಕ್ರಮವಾಗಿ ವರ್ಗಾವಣೆಯಾಗಿತ್ತು. ಎಂಜಿ ರಸ್ತೆಯ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದಿಂದ ಹಣ ವರ್ಗಾವಣೆಯಾಗಿತ್ತು. ಅಧಿಕಾರಿ ಚಂದ್ರಶೇಖರ್‌ ಆತ್ಮಹತ್ಯೆಯಿಂದ ಇದೆಲ್ಲ ಬೆಳಕಿಗೆ ಬಂದಿದೆ.

ಈ ಸಂಬಂಧ ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿತ್ತು. ಹಗರಣ ಸಂಬಂಧ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ್, ಮಾಜಿ ಸಚಿವ ಬಿ. ನಾಗೇಂದ್ರ ಅವರ ಅಪ್ತ ಎನ್ನಲಾದ ನಾಗರಾಜ್ ನೆಕ್ಕುಂಟಿ, ನಾಗೇಶ್ವರ್ ರಾವ್ ಎಂಬುವವರನ್ನು ಈಗಾಗಲೇ ಎಸ್‌ಐಟಿ ಬಂಧಿಸಿದ್ದು ವಿಚಾರಣೆಗೆ ಒಳಪಡಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X