ವಾಲ್ಮೀಕಿ ನಿಗಮ ಅಕ್ರಮ | ಎಸ್ಐಟಿ ಹೆಸರಲ್ಲಿ ಪ್ರಕರಣ ಮುಚ್ಚಿಹಾಕುವ ಹುನ್ನಾರ ಫಲಿಸುವುದಿಲ್ಲ: ಆರ್‌ ಅಶೋಕ್‌

Date:

Advertisements

ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ದಿನಕ್ಕೊಂದು ಗಂಭೀರ ಸ್ವರೂಪ ಪಡೆದುಕೊಳ್ಳುತ್ತಲೇ ಇದ್ದು, ಇಡಿ ದಾಳಿ, ಮಾಜಿ ಸಚಿವ ಬಿ.ನಾಗೇಂದ್ರ ಹಾಗು ನಿಗಮದ ಮಾಜಿ ಅಧ್ಯಕ್ಷ ಬಸನಗೌಡ ದದ್ದಲ್ ಎಸ್ಐಟಿ ವಿಚಾರಣೆಗೆ ಗೈರಾಗಿರುವುದು ಮತ್ತಷ್ಟು ಅನುಮಾನಗಳಿಗೆ ಇದೆ ಮಾಡಿಕೊಟ್ಟಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌ ಅಶೋಕ್‌ ಆರೋಪಿಸಿದ್ದಾರೆ.

ಎಕ್ಸ್‌ ತಾಣದಲ್ಲಿ ಈ ಕುರಿತು ಪೋಸ್ಟ್‌ ಮಾಡಿರುವ ಅವರು, ಸಿಎಂ ಸಿದ್ದರಾಮಯ್ಯನವರೇ, ಆರೋಪಿಗಳು ಎಸ್ಐಟಿ ವಿಚಾರಣೆಗೆ ಗೈರಾಗುತ್ತಿರುವುದು ಯಾಕೆ? ವಿಚಾರಣೆಗೆ ಹಾಜರಾದರೆ ನಿಮ್ಮ ಹೆಸರು ಬಾಯಿ ಬಿಡುತ್ತಾರೆ ಎನ್ನುವ ಭಯವೇ” ಎಂದು ಪ್ರಶ್ನಿಸಿದರು.

“ಎಸ್ಐಟಿ ಹೆಸರಿನಲ್ಲಿ ಈ ಪ್ರಕರಣವನ್ನ ಮುಚ್ಚಿಹಾಕುವ ನಿಮ್ಮ ಹುನ್ನಾರ ಫಲಿಸುವುದಿಲ್ಲ. ಸತ್ಯ ಹೊರಬರುವರೆಗೂ, ದಲಿತರ ದುಡ್ಡು ತಿಂದ ತಿಮಿಂಗಿಲಗಳಿಗೆ ಶಿಕ್ಷೆ ಆಗುವವರೆಗೂ ನಾವು ಸುಮ್ಮನಿರುವುದಿಲ್ಲ” ಎಂದಿದ್ದಾರೆ.

Advertisements

“₹4,000 ಕೋಟಿ ಮೌಲ್ಯದ ಮುಡಾ ಭೂಹಗರಣ ತಮ್ಮ ಕುತ್ತಿಗೆಗೆ ಬರುತ್ತಿದ್ದಂತೆ ಗಲಿಬಿಲಿಗೊಂಡಿರುವ ಸಿಎಂ ಸಿದ್ದರಾಮಯ್ಯ ನವರು ಹೇಗಾದರೂ ಮಾಡಿ ಸಾಕ್ಷಿ ನಾಶ ಮಾಡಬೇಕು ಎಂಬ ಸಂಚು ಹೂಡಿ ಕಡತಗಳನ್ನ ನಾಶ ಮಾಡಲು ಹೊರಟಿದ್ದಾರೆ” ಎಂದು ದೂರಿದ್ದಾರೆ.

“ಸಿಎಂ ಸಿದ್ದರಾಮಯ್ಯನವರೇ, ತಮ್ಮ ಡೋಂಗಿ ಸಮಾಜವಾದಿ ಮುಖವಾಡ ಕಳಚಿ ಬಿದ್ದಿದೆ. ತಮ್ಮ ಭ್ರಷ್ಟಾಚಾರದ ಕರ್ಮಕಾಂಡ ಬಟಾ ಬಯಲಾಗಿದೆ. ಅಧಿಕಾರ ದುರ್ಬಳಕೆ ಮಾಡಿಕೊಂಡು ಕಡತಗಳನ್ನ ನಾಶ ಮಾಡಬಹುದು, ಆದರೆ ಸತ್ಯವನ್ನ ಎಂದಿಗೂ ನಾಶ ಮಾಡಲು ಆಗುವುದಿಲ್ಲ. ನೆನಪಿಡಿ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

Download Eedina App Android / iOS

X