ವೀರಶೈವ, ಲಿಂಗಾಯತ ಒಡೆಯುವ ಕೆಲಸ ಮಾಡಬೇಡಿ: ಜಗದೀಶ್ ಶೆಟ್ಟರ್

Date:

Advertisements

ವೀರಶೈವ, ಲಿಂಗಾಯತ ಬೇರೆ ಬೇರೆ ಅನ್ನೋ ಅರ್ಥದಲ್ಲಿ ಬಿಂಬಿಸಲಾಗುತ್ತಿತ್ತು. ಎಲ್ಲರೂ ಸೇರಿ ಸ್ವತಂತ್ರ ಧರ್ಮದ ಬಗ್ಗೆ ಹೋರಾಟ ಮಾಡಿ ಅಂತ ನಾನು ಹೇಳಿದ್ದೆ. ಈಗಲೂ ನನ್ನ ಮಾತಿಗೆ ನಾನು ಬದ್ಧವಾಗಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, “ಲಿಂಗಾಯತ ಪ್ರತ್ಯೇಕ ಧರ್ಮದ ಹೆಸರಲ್ಲಿ ಒಡೆಯುವಂಥ ಕೆಲಸ ಮಾಡಬೇಡಿ. ಈ ಮಾತನ್ನು ಹಿಂದೆಯೂ ಹೇಳಿದ್ದೆ, ಈಗಲೂ ಅದನ್ನೇ ಹೇಳುತ್ತಿದ್ದೇನೆ. ಮನೆ ಒಡೆಯುವಂತಹ ಕೆಲಸ ಯಾರೂ ಮಾಡಬಾರದು” ಎಂದರು.

“ಎಲ್ಲರೂ ಸೇರಿ ಸ್ವತಂತ್ರ ಧರ್ಮದ ಬಗ್ಗೆ ಹೋರಾಟ ಮಾಡಲು ವೀರಶೈವ ಮಹಾಸಭಾ ಲೀಡ್ ತೆಗೆದುಕೊಳ್ಳಬೇಕೆಂದು ನಾನು ಹೇಳಿದ್ದೆ. ಕಾರಣ ಸಮಾಜದಲ್ಲಿ ಒಡಕು ಉಂಟಾಗುವುದು ಬೇಡ. ಸಮಾಜವನ್ನು ಒಡೆವ ಕೆಲಸ ಬೇಡ” ಎಂದು ಹೇಳಿದರು.

Advertisements

“ವೀರಶೈವ ಲಿಂಗಾಯತ ಪ್ರತ್ಯೇಕ ಮಾಡಲು ಹೊರಟಿದ್ದಕ್ಕೆ ನಾನೂ ವಿರೋಧ ಮಾಡಿದ್ದೆ. ಯಾವುದೇ ಕಾರಣಕ್ಕೂ ಸಮಾಜವನ್ನು ಒಡೆಯುವ ಪ್ರಶ್ನೆಯೇ ಇಲ್ಲ. ನಿನ್ನೆಯ ದಾವಣಗೆರೆ ಸಮಾವೇಶದಲ್ಲಿ ಕೆಲ ನಿರ್ಣಯಗಳನ್ನು ಅಂಗೀಕರಿಸಲಾಗಿದ್ದು ಅದರಂತೆ ವೀರಶೈವ ಲಿಂಗಾಯತರ ಬೇಡಿಕೆಗಳಿಗಾಗಿ ಒಗ್ಗಟ್ಟು ಪ್ರದರ್ಶಿಸಲಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಲಿಷ್ಠರೇ ಜಾತಿಗಣತಿಯನ್ನು ವಿರೋಧಿಸಿದರೆ ಬಾಯಿಲ್ಲದವರ ಪಾಡೇನು?

ಸಚಿವ ಶಿವಾನಂದ ಪಾಟೀಲ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, “ಯಾರೋ ಒಬ್ಬರು ನೀಡಿದ ಹೇಳಿಕೆಗೆ ನಾನು ಪ್ರತಿಕ್ರಿಯಿಸಲ್ಲ. ಅದನ್ನು ಅವರೇ ಹೇಳಲಿ” ಎಂದರು.

“ಹಿಜಾಬ್ ಕುರಿತ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಅವರೇ ಸ್ಪಷ್ಟನೆ ನೀಡಿದ್ದಾರೆ. ಅದನ್ನೇ ಪ್ರತಿಪಕ್ಷಗಳು ಬೇಕಿದ್ದರೆ ಅಸ್ತ್ರವನ್ನಾಗಿ ಮಾಡಿಕೊಳ್ಳಲಿ. ಅದಕ್ಕೆ ನಾನು ಜವಾಬ್ದಾರನಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X