ವರ್ಸೋವಾ-ಬಾಂದ್ರಾ ಸೀ ಲಿಂಕ್‌ಗೆ ಸಾವರ್ಕರ್ ಹೆಸರಿಟ್ಟು ಮಹಾರಾಷ್ಟ್ರ ಸರ್ಕಾರದಿಂದ ವಿವಾದ ಸೃಷ್ಟಿ

Date:

Advertisements

ಮಹಾರಾಷ್ಟ್ರ ಸರ್ಕಾರವು ಮುಂಬೈನ ವರ್ಸೋವಾ-ಬಾಂದ್ರಾ ಸಂಪರ್ಕ ಸೇತುವೆಗೆ ‘ಸಾವರ್ಕರ್ ಸೇತು’ ಎಂದು ಮರುನಾಮಕರಣ ಮಾಡಿ ವಿವಾದ ಸೃಷ್ಟಿಸಿದೆ.

ಮೇ 28 ರಂದು ಸಾವರ್ಕರ್ ಜನ್ಮದಿನದಂದು ಮಾತನಾಡಿದ್ದ ಮುಖ್ಯಮಂತ್ರಿ ಏಕನಾಥ ಶಿಂಧೆ, ವರ್ಸೋವಾ-ಬಾಂದ್ರಾ ಸಂಪರ್ಕ ಸೇತುವೆಗೆ ಸಾವರ್ಕರ್ ಹೆಸರಿಡುವುದಾಗಿ ಘೋಷಿಸಿದ್ದರು. ಹಾಗೆಯೇ ಮುಂಬೈ ಬಂದರು ಸಾರಿಗೆ ಸಂಪರ್ಕ ಸೇತುವೆಗೆ ಅಟಲ್ ಬಿಹಾರಿ ವಾಜಪೇಯಿ ಸ್ಮೃತಿ ನವಾ ಸೇವಾ ಅಟಲ್ ಸೇತು ಎಂದು ಮರುನಾಮಕರಣ ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಏಕರೂಪ ನಾಗರಿಕ ಸಂಹಿತೆ: ಪ್ರಧಾನಿ ಹೇಳಿಕೆ ಬೆನ್ನಲ್ಲೆ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯಿಂದ ತುರ್ತು ಸಭೆ

Advertisements

ಮುಂಬಯಿಯ ವರ್ಸೋವಾದಿಂದ ಬಾಂದ್ರಾವರೆಗೆ ಸಮುದ್ರ ಮಾಗ್ರದಲ್ಲಿ ಸಂಪರ್ಕಿಸುವ ಈ ಸೇತುವೆ ಇನ್ನೂ ನಿರ್ಮಾಣ ಹಂತದಲ್ಲಿದೆ. ಸುಮರು 17.17 ಕಿ.ಮೀ ಉದ್ದವಿದೆ. 8 ಪಥದ ಈ ಸಮುದ್ರ ಸಂಪರ್ಕ ಸೇತುವೆಯಿಂದ ಮುಂಬೈನ ಪಶ್ಚಿಮ ಎಕ್ಸ್‌ಪ್ರೆಸ್ ಹೈವೆ ಮತ್ತು ಪೂರ್ವದಲ್ಲಿರುವ ಮುಂಬೈನ ಸಬ್‌ ಅರ್ಬನ್‌ ರೈಲ್ವೆ ಮಾರ್ಗದಲ್ಲಿ ವಾಹನ ದಟ್ಟಣೆಯನ್ನು ಕಡಿಮೆ ಮಾಡಲಿದೆ.

ಕಳೆದ ಕೆಲವು ದಿನಗಳ ಹಿಂದಷ್ಟೆ ನಡೆದ 101 ನೇ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, “ಸ್ವಾತಂತ್ರ್ಯ ಚಳವಳಿಯಲ್ಲಿ ಮಾತ್ರವಲ್ಲ, ಸಾಮಾಜಿಕ ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಸಾವರ್ಕರ್ ಅವರು ಮಾಡಿದ್ದೆಲ್ಲ ಇಂದಿಗೂ ಸ್ಮರಣೀಯವಾಗಿದೆ” ಎಂದಿದ್ದರು. ಆದರೆ ವಿಪಕ್ಷಗಳು ಪ್ರಧಾನಿ ಸಾವರ್ಕರ್‌ ಬಗ್ಗೆ ಮಾಡಿದ ಭಾಷಣವನ್ನು ಖಂಡಿಸಿದ್ದವು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X