ಕುಮಾರಸ್ವಾಮಿ ದತ್ತಮಾಲೆ ಹೇಳಿಕೆಗೆ ಚಪ್ಪಾಳೆ ತಟ್ಟಿದ ವಿಎಚ್‌ಪಿ

Date:

Advertisements

ಸಂದರ್ಭ ಬಂದರೆ ದತ್ತಮಾಲೆಯನ್ನೂ ಹಾಕುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಭಾನುವಾರ ಚಿಕ್ಕಮಗಳೂರಿನಲ್ಲಿ ಹೇಳಿದ್ದಾರೆ. ಅವರ ಹೇಳಿಕೆಯನ್ನು ವಿಶ್ವ ಹಿಂದು ಪರಿಷತ್ ಸ್ವಾಗತಿಸಿದೆ. ದತ್ತಮಾಲೆ ಧರಿಸುವ ನಿರ್ಧಾರ ಸ್ವಾಗತಾರ್ಹ ಎಂದಿದೆ.

ಪಕ್ಷದ ಹೆಸರಿನಲ್ಲಿಯೇ ‘ಜಾತ್ಯತೀತ’ತೆ ಇಟ್ಟುಕೊಂಡಿದ್ದ ಕುಮಾರಸ್ವಾಮಿ ಅವರು ಇದೀಗ ಹಿಂದುತ್ವವಾದ ಅಥವಾ ಧರ್ಮ ರಾಜಕಾರಣದ ಸೋಗು ಹಾಕಿಕೊಳ್ಳುತ್ತಿದ್ದಾರೆ. ಬಿಜೆಪಿ ಮತ್ತು ಬಲಪಂಥೀಯ ವಾದವನ್ನು ವಿರೋಧಿಸುತ್ತಿದ್ದ ಅವರು, ಈಗ ಬಿಜೆಪಿಯೊಂದಿಗೆ ಕೈ ಜೋಡಿದ್ದಾರೆ. ಬಲಪಂಥೀಯ ವಾದವನ್ನು ಬೆಂಬಲಿಸುತ್ತಿದ್ದಾರೆ. ಅಲ್ಲದೆ, ಚಿಕ್ಕಮಗಳೂರಿನ ಬಾಬಾ ಬುಡನ್‌ಗಿರಿಯಲ್ಲಿ ದತ್ತಮಾಲೆಯನ್ನೂ ಹಾಕಿಕೊಳ್ಳುತ್ತೇನೆ ಎಂದೂ ಹೇಳಿದ್ದಾರೆ.

ಅವರ ಹೇಳಿಕೆಯನ್ನು ಸ್ವಾಗತಿಸಿರುವ ವಿಎಚ್‌ಪಿ ಮುಖಂಡ ರಘು, “ಕುಮಾರಸ್ವಾಮಿ ಅವರು ದತ್ತಮಾಲೆ ಧರಿಸಲು ನಿರ್ಧರಿಸುವುದು ಸ್ವಾಗತಾರ್ಹ. ನಿಮ್ಮ ರಾಜಕೀಯ ಭವಿಷ್ಯ ಬದಲಾಗಲಿದ್ದು, ಇನ್ನಷ್ಟು ಶಕ್ತಿ ನೀಡಲಿ ಎಂದು ದತ್ತಾತ್ರೇಯ ಸ್ವಾಮಿಯಲ್ಲಿ ಬೇಡುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

Advertisements

ಧರ್ಮವನ್ನು ಮೀರಿ ಹಿಂದು-ಮುಸ್ಲಿಮರು ಒಟ್ಟಿಗೆ ಪೂಜಿಸುವ ಬಾಬಾ ಬುಡನ್‌ಗಿರಿಯನ್ನು ದತ್ತಪೀಠ ಮಾಡಲು ಹಿಂದುತ್ವವಾದಿ ಕೋಮು ಸಂಘಟನೆಗಳು ಹವಣಿಸುತ್ತಿವೆ. ಹಲವಾರು ವರ್ಷಗಳಿಂದ ಬಾಬಾ ಬುಡನ್‌ಗಿರಿ ವಿಚಾರ ವಿವಾದದಲ್ಲಿದೆ. ಈ ನಡುವೆ, ಡಿಸೆಂಬರ್ 17 ರಿಂದ 26ರವರೆಗೆ ಬಾಬಾ ಬುಡನ್‌ಗಿರಿಯಲ್ಲಿ ದತ್ತಮಾಲಾ ಅಭಿಯಾನವನ್ನು ಹಿಂದುತ್ವಾವಾದಿ ಕೋಮು ಸಂಘಟನೆಗಳು ಆಯೋಜಿಸಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Download Eedina App Android / iOS

X