ಭಾರತೀಯ ಜನತಾ ಪಕ್ಷಕ್ಕೆ ‘ಭ್ರಷ್ಟ’ ಎಂಬ ಲೇಬಲ್ ತಂದುಕೊಟ್ಟಿದ್ದೇ ಬಿ ವೈ ವಿಜಯೇಂದ್ರ. ಅವರು ಅಧ್ಯಕ್ಷರಾಗಿದ್ದಕ್ಕೆ ನನ್ನ ವಿರೋಧವಿದೆ. ಆದರೆ, ವಿಜಯೇಂದ್ರ ನಮ್ಮ ಪಕ್ಷದ ನಾಯಕರಲ್ಲ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಅಥಣಿಯಲ್ಲಿ ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, “ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ವಿಜಯೇಂದ್ರ ಅವರನ್ನು ಎಂದಿಗೂ ಒಪ್ಪಲು ಸಾಧ್ಯವಿಲ್ಲ. ಪಕ್ಷದಲ್ಲಿ ಜ್ಯೂನಿಯರ್ ಆಗಿರುವ ಅವರಿಗೆ ಯಾವ ಸಿದ್ಧಾಂತ ಗೊತ್ತಿಲ್ಲ. ಮುಂದಿನ ಅಧ್ಯಕ್ಷ ಯಾರು ಎಂಬುದನ್ನು ಪಕ್ಷದ ವರಿಷ್ಠರು ತೀರ್ಮಾನಿಸಲಿ” ಎಂದರು.
“ವಿಜಯೇಂದ್ರ ಬಗ್ಗೆ ಅಷ್ಟೇ ನನ್ನ ವಿರೋಧ. ಬಿ ಎಸ್ ಯಡಿಯೂರಪ್ಪ ಅವರನ್ನು ಎಂದಿಗೂ ವಿರೋಧಿಸುವುದಿಲ್ಲ. ಅವರು ಪಕ್ಷದ ಪ್ರಶ್ನಾತೀತ ನಾಯಕ. ಅನಂತಕುಮಾರ ನಿಧನರಾದ ನಂತರ ನಮ್ಮ ಪಕ್ಷದಲ್ಲಿ ಯಾರೂ ಪ್ರಬಲ ನಾಯಕರಾಗಿ ಬೆಲೆಯಲಿಲ್ಲ” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ದಿನ ಸಂಪಾದಕೀಯ | ಮಮತಾ ರಾಜೀನಾಮೆ – ಭಾವನಾತ್ಮಕ ರಾಜಕೀಯವೇಕೆ?
“ರಾಜ್ಯದಲ್ಲಿ 120ರಿಂದ 130 ಸ್ಥಾನ ಗೆಲ್ಲಿಸಿಕೊಂಡು ಬರುವ ಶಕ್ತಿ ನಮ್ಮಲ್ಲಿದೆ. 15ರಿಂದ 20 ಜನರಿಗೆ ಸಾಮೂಹಿಕವಾಗಿ ನಾಯಕತ್ವ ಕೊಡಿ. ಇಂಥ ಕೆಲಸ ಮಾಡುವಂತೆ ಟಾಸ್ಕ್ ಕೊಡಿ. ಅದರಲ್ಲಿ ವಿಫಲವಾದರೆ, ಪಕ್ಷದ ಹೊರಹಾಕಿ ಎಂದಿದ್ದೇವೆ. ಯಡಿಯೂರಪ್ಪ ಅವರಿಗೆ ವಯಸ್ಸಾಗಿದ್ದು, ವಿಶ್ರಾಂತಿ ಅಗತ್ಯವಿದೆ. ಸಲಹೆ ಬೇಕಾದರೆ ಅವರ ಮನೆಗೆ ಹೋಗುತ್ತೇವೆ” ಎಂದರು ತಿಳಿಸಿದರು.
ಬಿಜೆಪಿ ನಾಯಕರೊಂದಿಗೆ ಆರ್ಎಸ್ಎಸ್ನವರು ಸಭೆ ನಡೆಸಿದ ವಿಚಾರಕ್ಕೆ ಪ್ರತಿಕ್ರಿಯಿಸಿ, “ಸಭೆಯಲ್ಲಿ ಏನು ಚರ್ಚಿಸಲಾಯಿತು. ಮುಖಂಡರು ಯಾರನ್ನು ಬೈದರು ಎಂದು ಹೇಳಲು ಬರುವುದಿಲ್ಲ. ಆದರೆ, ಬಿಜೆಪಿ ಆಡಳಿತವನ್ನು ಒಬ್ಬರ ಕೈಯಲ್ಲಿ ಕೊಡುವುದು ಬೇಡ ಎಂದಿದ್ದೇವೆ” ಎಂದರು.