ವಿಜಯೇಂದ್ರ ನಮ್ಮ ಪಕ್ಷದ ನಾಯಕರಲ್ಲ, ಬಿಎಸ್‌ವೈ ವಿಶ್ರಾಂತಿ ಪಡೆಯಲಿ: ಶಾಸಕ ರಮೇಶ ಜಾರಕಿಹೊಳಿ

Date:

Advertisements

ಭಾರತೀಯ ಜನತಾ ಪಕ್ಷಕ್ಕೆ ‘ಭ್ರಷ್ಟ’ ಎಂಬ ಲೇಬಲ್ ತಂದುಕೊಟ್ಟಿದ್ದೇ ಬಿ ವೈ ವಿಜಯೇಂದ್ರ. ಅವರು ಅಧ್ಯಕ್ಷರಾಗಿದ್ದಕ್ಕೆ ನನ್ನ ವಿರೋಧವಿದೆ. ಆದರೆ, ವಿಜಯೇಂದ್ರ ನಮ್ಮ ಪಕ್ಷದ ನಾಯಕರಲ್ಲ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ಅಥಣಿಯಲ್ಲಿ ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, “ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ವಿಜಯೇಂದ್ರ ಅವರನ್ನು ಎಂದಿಗೂ ಒಪ್ಪಲು ಸಾಧ್ಯವಿಲ್ಲ. ಪಕ್ಷದಲ್ಲಿ ಜ್ಯೂನಿಯರ್ ಆಗಿರುವ ಅವರಿಗೆ ಯಾವ ಸಿದ್ಧಾಂತ ಗೊತ್ತಿಲ್ಲ. ಮುಂದಿನ ಅಧ್ಯಕ್ಷ ಯಾರು ಎಂಬುದನ್ನು ಪಕ್ಷದ ವರಿಷ್ಠರು ತೀರ್ಮಾನಿಸಲಿ” ಎಂದರು.

“ವಿಜಯೇಂದ್ರ ಬಗ್ಗೆ ಅಷ್ಟೇ ನನ್ನ ವಿರೋಧ. ಬಿ ಎಸ್‌ ಯಡಿಯೂರಪ್ಪ ಅವರನ್ನು ಎಂದಿಗೂ ವಿರೋಧಿಸುವುದಿಲ್ಲ. ಅವರು ಪಕ್ಷದ ಪ್ರಶ್ನಾತೀತ ನಾಯಕ. ಅನಂತಕುಮಾರ ನಿಧನರಾದ ನಂತರ ನಮ್ಮ ಪಕ್ಷದಲ್ಲಿ ಯಾರೂ ಪ್ರಬಲ ನಾಯಕರಾಗಿ ಬೆಲೆಯಲಿಲ್ಲ” ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ?  ದಿನ ಸಂಪಾದಕೀಯ | ಮಮತಾ ರಾಜೀನಾಮೆ – ಭಾವನಾತ್ಮಕ ರಾಜಕೀಯವೇಕೆ?

“ರಾಜ್ಯದಲ್ಲಿ 120ರಿಂದ 130 ಸ್ಥಾನ ಗೆಲ್ಲಿಸಿಕೊಂಡು ಬರುವ ಶಕ್ತಿ ನಮ್ಮಲ್ಲಿದೆ. 15ರಿಂದ 20 ಜನರಿಗೆ ಸಾಮೂಹಿಕವಾಗಿ ನಾಯಕತ್ವ ಕೊಡಿ. ಇಂಥ ಕೆಲಸ ಮಾಡುವಂತೆ ಟಾಸ್ಕ್‌ ಕೊಡಿ. ಅದರಲ್ಲಿ ವಿಫಲವಾದರೆ, ಪಕ್ಷದ ಹೊರಹಾಕಿ ಎಂದಿದ್ದೇವೆ. ಯಡಿಯೂರಪ್ಪ ಅವರಿಗೆ ವಯಸ್ಸಾಗಿದ್ದು, ವಿಶ್ರಾಂತಿ ಅಗತ್ಯವಿದೆ. ಸಲಹೆ ಬೇಕಾದರೆ ಅವರ ಮನೆಗೆ ಹೋಗುತ್ತೇವೆ” ಎಂದರು ತಿಳಿಸಿದರು.

ಬಿಜೆಪಿ ನಾಯಕರೊಂದಿಗೆ ಆರ್‌ಎಸ್‌ಎಸ್‌ನವರು ಸಭೆ ನಡೆಸಿದ ವಿಚಾರಕ್ಕೆ ಪ್ರತಿಕ್ರಿಯಿಸಿ, “ಸಭೆಯಲ್ಲಿ ಏನು ಚರ್ಚಿಸಲಾಯಿತು. ಮುಖಂಡರು ಯಾರನ್ನು ಬೈದರು ಎಂದು ಹೇಳಲು ಬರುವುದಿಲ್ಲ. ಆದರೆ, ಬಿಜೆಪಿ ಆಡಳಿತವನ್ನು ಒಬ್ಬರ ಕೈಯಲ್ಲಿ ಕೊಡುವುದು ಬೇಡ ಎಂದಿದ್ದೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X