ಕೈಯಲ್ಲಿ ಧ್ವಜ ಹಿಡಿದೇ ಸಿಎಂ ಸಿದ್ದರಾಮಯ್ಯ ಅವರ ಶೂ ತೆಗೆದ ಕಾಂಗ್ರೆಸ್ ಕಾರ್ಯಕರ್ತ!

Date:

Advertisements

ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಕೈಯಲ್ಲಿ ತ್ರಿವರ್ಣ ಧ್ವಜವನ್ನು ಹಿಡಿದುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶೂಗಳನ್ನು ತೆಗೆದಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

155ನೇ ಜನ್ಮದಿನದ ಪ್ರಯುಕ್ತ ಅವರಿಗೆ ಗೌರವ ಸಲ್ಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಗಮಿಸಿದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಹಲವರು ಈ ಬಗ್ಗೆ ಆಕ್ಷೇಪ ಹೊರಹಾಕಿದ್ದಾರೆ.

“ಗುಲಾಮಗಿರಿಯ ದವಡೆಯಿಂದ ಮುಕ್ತವಾದ ಭಾರತ, ಇಂದು ವಿಶ್ವದ ಮುಂಚೂಣಿ ರಾಷ್ಟ್ರವಾಗಿದೆ. ರಾಷ್ಟ್ರಭಕ್ತಿ, ರಾಷ್ಟ್ರಧ್ವಜ, ರಾಷ್ಟ್ರ ಭಕ್ತರು ಎಂದರೆ ಕಾಂಗ್ರೆಸ್’ಗೆ ಯಾವಾಗಲೂ ಕಾಲ ಕಸ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕಿಡಿಕಾರಿದ್ದಾರೆ.

Advertisements

ಎಕ್ಸ್‌ ತಾಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಕೈಯಲ್ಲಿ ತ್ರಿವರ್ಣ ಧ್ವಜವನ್ನು ಹಿಡಿದುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶೂಗಳನ್ನು ತೆಗೆದಿರುವ ವಿಡಿಯೊ ಅನ್ನು ಹಂಚಿಕೊಂಡಿರುವ ಅವರು, “ಗುಲಾಮಗಿರಿಯನ್ನು ಆರಾಧಿಸಿಕೊಂಡು ಬಂದ ಕಾಂಗ್ರೆಸ್ಸಿಗರು ರಾಷ್ಟ್ರಧ್ವಜವನ್ನು ಗಾಂಧಿ ಜಯಂತಿಯಂದೇ ಗುಲಾಮಗಿರಿಯ ಸಂಕೇತದಂತೆ ಕಾಲಕಸವಾಗಿ ಕಂಡಿರುವುದು, ಸ್ವತಃ ಮುಖ್ಯಮಂತ್ರಿಗಳು ಅದನ್ನು ಆಕ್ಷೇಪಿಸದೆ ಉತ್ತೇಜಿಸುವ ಮಾದರಿಯಲ್ಲಿ ಉಡಾಫೆ ಪ್ರದರ್ಶಿಸಿರುವುದು ರಾಷ್ಟ್ರ ಹಾಗೂ ರಾಷ್ಟ್ರಧ್ವಜಕ್ಕೆ ಮಾಡಿದ ಅಪಮಾನವಾಗಿದೆ. ಈ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಹಾಗೂ ಕಾಂಗ್ರೆಸ್‌ ಭಾರತೀಯರ ಕ್ಷಮೆ ಕೇಳಲಿ” ಎಂದು ಆಗ್ರಹಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X