‘ಲಂಚ ಭಾಗ್ಯ’ ಯೋಜನೆ ನಿಮ್ಮ ಮುಂದಿನ ಹೆಜ್ಜೆ; ಸಿದ್ದರಾಮಯ್ಯಗೆ ವಿಜಯೇಂದ್ರ ತಿರುಗೇಟು

Date:

Advertisements
  • ಬರದ ನಡುವೆ ಸಚಿವ ಶಿವಾನಂದ ಪಾಟೀಲರಿಂದ ಮೋಜು-ಮಸ್ತಿ: ವಿಜಯೇಂದ್ರ
  • ಕಪ್ಪು ಹಣದ ಖಜಾನೆ ಇರುವಲ್ಲಿ ದಾಳಿ ನಡೆಸದೇ ಬಡವರ ಮನೆ ಶೋಧಿಸಲಾದೀತೆ?

ರಾಜ್ಯದಲ್ಲಿ ಬರ ಕಾಡುತ್ತಿದೆ. ರೈತಾಪಿ ವರ್ಗ ಕಂಗಾಲಾಗಿ ಕುಳಿತಿದೆ, ಜನತೆ ಸಂಕಷ್ಟ ಎದುರಿಸುತ್ತಿದೆ ಇಂಥಾ ಪರಿಸ್ಥಿತಿಯಲ್ಲಿ ಸಚಿವ ಶಿವಾನಂದ ಪಾಟೀಲರು ಮೋಜು-ಮಸ್ತಿಯ ಕಾರ್ಯಕ್ರಮದ ನಡುವೆ ಕಾಂಚಾಣದ ಚೆಲ್ಲಾಟದಲ್ಲಿ ಮೈಮರೆತು ಕುಳಿತಿದ್ದಾರೆ ಎಂದು ಶಾಸಕ ಬಿ ವೈ ವಿಜಯೇಂದ್ರ ಟೀಕಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಅವರು, “ರೋಮ್ ಹೊತ್ತಿ ಉರಿಯುತ್ತಿದ್ದಾಗ ರೋಮನ್ ದೊರೆ ನೀರೊ ಪಿಟೀಲು ಬಾರಿಸುತ್ತಿದ್ದ ಎಂಬಂತೆ ವರ್ತಿಸುವ ಕಾಂಗ್ರೆಸ್ ‘ಕೈ’ಲಿ ಕರ್ನಾಟಕ ರಾಜ್ಯ ನಲುಗುತ್ತಿದೆ. ಕುರುಡು ಕಾಂಚಾಣ ಕುಣಿಯುತಲಿತ್ತು. ಕಾಂಗ್ರೆಸ್ ಮಂತ್ರಿಗಳ ಕಾಲಿಗೆ ಬಿದ್ದು ಒದ್ದಾಡುತಲಿತ್ತೋ” ಎಂದು ವ್ಯಂಗ್ಯವಾಡಿದ್ದಾರೆ.

ಐಟಿ ದಾಳಿ ವಿಚಾರವಾಗಿಯೂ ಪ್ರತಿಕ್ರಿಯಿಸಿರುವ ಅವರು, “ಕಪ್ಪು ಹಣದ ಖಜಾನೆ ಇರುವಲ್ಲಿ ದಾಳಿ ನಡೆಸದೇ ಬಡವರ ಮನೆ ಶೋಧಿಸಲಾದೀತೆ? ಕಲಾವಿದರ ಸಂಭಾವನೆಯಿಂದಲೂ ಕಮಿಷನ್ ವಸೂಲಿ ದಂಧೆಗಿಳಿದಿರುವ ನಿಮ್ಮ ಸರ್ಕಾರದ ಆಡಳಿತದ ಹೀನಾಯ ಭ್ರಷ್ಟ ಮುಖ ಜನರ ಮುಂದೆ ತೆರೆದು ಕೊಂಡಿದೆ. ಸದ್ಯದ ಬೆಳವಣಿಗೆಗಳನ್ನು ಗಮನಿಸಿದರೆ ‘ಲಂಚ ಭಾಗ್ಯ’ ಯೋಜನೆ ನಿಮ್ಮ ಮುಂದಿನ ಹೆಜ್ಜೆ ‘ಪರ್ಸೆಂಟೇಜ್’ ನಿಗದಿ ನಿಮ್ಮ ಮುಂದಿನ ಗುರಿ ಎಂಬುದು ಖಾತ್ರಿಯಾಗುತ್ತಿದೆ” ಎಂದು ಆರೋಪಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತದ ಹಸಿದ ಹೊಟ್ಟೆಗಳು ಹೇಳುತ್ತಿರುವ ಕುಬೇರರ ಕಥೆ

“ರಾಜ್ಯದಲ್ಲಿ ನಡೆದ ಆದಾಯ ತೆರಿಗೆ ಶೋಧ ಕಾರ್ಯವನ್ನು ಮುಖ್ಯಮಂತ್ರಿ ಸ್ಥಾನದಲ್ಲಿರುವ ನೀವು ಸ್ವಾಗತಿಸಬೇಕಿತ್ತು, ಆದರೆ ಉದ್ಯಮಿಗಳು, ಗುತ್ತಿಗೆದಾರರ ವಕ್ತಾರರಂತೆ ಮಾತನಾಡಿ ಶೋಧಕಾರ್ಯವನ್ನು ಚುನಾವಣಾ ಹಿನ್ನಲೆಗೆ ಹೋಲಿಸಿರುವುದನ್ನು ನೋಡಿದರೆ ‘ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಂಡನಂತೆ’ ಎಂಬ ಗಾದೆ ಮಾತು ನೆನಪಿಗೆ ತರಿಸುತ್ತಿದೆ, ಸರ್ಕಾರಿ ತನಿಖಾ ಸಂಸ್ಥೆಗಳ ನೈತಿಕ ಸ್ಥೈರ್ಯ ಕಸಿಯುವ ‘ಹತಾಶೆ’ ನಿಮ್ಮ ಮಾತುಗಳಲ್ಲಿ ವ್ಯಕ್ತವಾಗುತ್ತಿದೆ” ಎಂದು ಕುಟುಕಿದ್ದಾರೆ.

“ಜೈಲು ಭಾಗ್ಯ ಕಂಡ ಹಾಗೂ ಕಾಣಬೇಕಿರುವ ಅನೇಕರು ನಿಮ್ಮ ಪಕ್ಷ ಹಾಗೂ ಸರ್ಕಾರದಲ್ಲಿರುವುದನ್ನು ಮರೆತು ನೀವು ಮಾನ್ಯ ಯಡಿಯೂರಪ್ಪನವರ ಹೆಸರು ಉಲ್ಲೇಖಿಸುತ್ತಿದ್ದೀರಿ, ವ್ಯವಸ್ಥಿತ ರಾಜಕೀಯ ಚಕ್ರವ್ಯೂಹ ಭೇದಿಸಿ ನ್ಯಾಯಾಂಗ ಹೋರಾಟದ ಮೂಲಕ ನ್ಯಾಯದ ಶ್ರೀರಕ್ಷೆ ಪಡೆದು ಮತ್ತೆ ಜನತಾ ನ್ಯಾಯಾಲಯದಲ್ಲಿ ಜನಾಶೀರ್ವಾದದಿಂದ ಮುಖ್ಯಮಂತ್ರಿ ಸ್ಥಾನ ಮುಡಿಗೇರಿಸಿಕೊಂಡ ಬಿ ಎ‌ಸ್‌ ಯಡಿಯೂರಪ್ಪ ಅವರ ಇತಿಹಾಸ ನೀವು ಮರೆತಂತೆ ಮಾತನಾಡುವುದು ನಿಮಗೆ ಘನತೆ ತರದು” ಎಂದು ತಿರುಗೇಟು ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X