ಖಾಸಗಿತನ, ನೀತಿ ಸಂಹಿತೆ ಉಲ್ಲಂಘಿಸುವುದು ‘ವಿಕಸಿತ ಭಾರತ’ ಸಂದೇಶ; ಕಾಂಗ್ರೆಸ್ ವಾಗ್ದಾಳಿ

Date:

Advertisements

2024ರ ಲೋಕಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಗೆ ಬಂದ ದಿನಗಳ ನಂತರ ಕೇಂದ್ರದಲ್ಲಿರುವ ನರೇಂದ್ರ ಸರ್ಕಾರವು ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ವಿರೋಧ ಪಕ್ಷಗಳು, ಸಾಮಾಜಿಕ ಕಾರ್ಯಕರ್ತಕರು ಆರೋಪಿಸಿದ್ದಾರೆ. ಕೇಂದ್ರ ಸರ್ಕಾರವು ಕಳುಹಿಸುತ್ತಿರುವ ‘ವಿಕಸಿತ ಭಾರತ’ ಯಾತ್ರೆಯು ನೀತಿ ಸಂಹಿತೆ ಉಲ್ಲಂಘನೆ ಮಾತ್ರವಲ್ಲದೆ, ಖಾಸಗಿತನಕ್ಕೆ ಧಕ್ಕೆ ಎಂದು ಆರೋಪಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಪತ್ರದ ಜೊತೆಗೆ ವಿಕಸಿತ ಭಾರತ ಸಂಪರ್ಕ ಸಂದೇಶವನ್ನು ವಾಟ್ಸಾಪ್ ಮೂಲಕ ಕಳುಹಿಸಲಾಗುತ್ತಿದೆ. ಈ ಬಗ್ಗೆ ಕಾಂಗ್ರೆಸ್ ಸಂಸದ ಶಶಿ ತರೂರ್, ಕೇಂದ್ರದ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. “ಕೇಂದ್ರ ಸರ್ಕಾರವು ಆಡಳಿತ ದುರ್ಬಳಕೆ ಮಾಡುತ್ತಿದೆ. ಬಿಜೆಪಿಯ ರಾಜಕೀಯ ಹಿತಾಸಕ್ತಿಗಾಗಿ ಜನರ ಖಾಸಗಿ ಮಾಹಿತಿಯನ್ನು ದುರ್ಬಳಕೆ ಮಾಡಿದೆ” ಎಂದು ಹೇಳಿರುವ ಶಶಿ ತರೂರ್ ಚುನಾವಣಾ ಆಯೋಗ ಈ ಬಗ್ಗೆ ಗಮನ ಹರಿಸಬೇಕು ಎಂದಿದ್ದಾರೆ.

ಇದನ್ನು ಓದಿದ್ದೀರಾ?  ಮೋದಿಯಿಂದ ಯುಎಇಯಲ್ಲಿರುವ ಭಾರತೀಯ, ಪಾಕ್‌, ಬ್ರಿಟನ್‌ ವಲಸಿಗರಿಗೆ ಅಚ್ಚರಿಯ ವಾಟ್ಸಾಪ್ ಸಂದೇಶ!

Advertisements

ಈ ಆನ್‌ಲೈನ್ ಸಂದೇಶದಲ್ಲಿ “ನನ್ನ ಪ್ರಿಯ ಕುಟುಂಬ ಸದಸ್ಯರೇ” ಎಂದು ಮೋದಿ ಸಂಭೋದಿಸುತ್ತಾರೆ. ಹಾಗೆಯೇ ಭಾರತ ಸರ್ಕಾರದ ಯೋಜನೆಗಳು ಮತ್ತು ಉಪಕ್ರಮಗಳ ಕುರಿತು ಪ್ರತಿಕ್ರಿಯೆ ಮತ್ತು ಸಲಹೆಗಳನ್ನು ಕೋರಲಾಗಿದೆ. ಇನ್ನು ಯುಎಇ ಮೂಲದ ಆಂಟೋನಿ ಜೆ ಪರ್ಮಲ್ ಲಿಂಕ್ಡಿನ್ ಪೋಸ್ಟ್ ಅನ್ನು ಕೂಡಾ ತರೂರ್ ಹಂಚಿಕೊಂಡಿದ್ದಾರೆ.

“ನಿನ್ನೆ ಯುಎಇಯಲ್ಲಿರುವ ಬೇರೆ ಬೇರೆ ದೇಶದ ಜನರ ವೈಯಕ್ತಿಕ ವಾಟ್ಸಾಪ್ ಖಾತೆಗೆ ಭಾರತದ ಪ್ರಧಾನಿ ಮೋದಿಯಿಂದ ಸಂದೇಶ ಬಂದಿದೆ. ಇದು ಖಾಸಗಿತನದ ಉಲ್ಲಂಘನೆಯಾಗಿದೆ. ಸಾವಿರಾರು ಭಾರತೀಯರೇತರ ಖಾಸಗಿ ಮೊಬೈಲ್ ಸಂಖ್ಯೆಗಳಿಗೆ ಈ ಸಂದೇಶವನ್ನು ಕಳುಹಿಸಲಾಗಿದೆ. ನಮ್ಮ ಸಂಖ್ಯೆ ಬಿಜೆಪಿ ಮತ್ತು ಭಾರತೀಯ ಸರ್ಕಾರಕ್ಕೆ ಸಿಗುವುದು ಹೇಗೆ?” ಎಂದು ಪ್ರಶ್ನಿಸಿದ್ದಾರೆ.

ವಿದೇಶದಲ್ಲಿರುವ ಭಾರತೀಯ ವಲಸಿಗರಿಗೆ ಈ ಸಂದೇಶ ಬಂದಿರುವ ಜೊತೆಗೆಯೇ ಯುಎಇಯಲ್ಲಿರುವ ಪಾಕಿಸ್ತಾನ ಮತ್ತು ಬ್ರಿಟನ್ ವಲಸಿಗರಿಗೂ ಭಾರತ ಸರ್ಕಾರದ ಈ ಸಂದೇಶ ತಲುಪಿರುವುದು ಚರ್ಚೆಗೆ ಗ್ರಾಸವಾಗಿದೆ. ಇನ್ನು ಯುಎಇ ನಿವಾಸಿಗಳಿಗೂ ಈ ವಾಟ್ಸಾಪ್ ಸಂದೇಶ ತಲುಪಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X