ನಾಮಪತ್ರ ಸಲ್ಲಿಕೆವರೆಗೂ ಮತದಾರರ ಪಟ್ಟಿ ಪರಿಷ್ಕರಿಸಬಹುದು: ಹೈಕೋರ್ಟ್‌

Date:

  • ಶಾಸಕ ರಿಜ್ವಾನ್ ಅರ್ಷದ್ ಸಲ್ಲಿಸಿದ್ದ ಅರ್ಜಿ ವಿಚಾರಣೆ
  • ಶಾಸಕರ ವಿಷಯದಲ್ಲಿ ಚುನಾವಣಾ ಆಯೋಗಕ್ಕೆ ಸೂಚನೆ

ಚುನಾವಣೆಗಳಿಗೆ ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದವರೆಗೂ ಮತದಾರರ ಪಟ್ಟಿ ಪರಿಷ್ಕರಿಸಲು ಅವಕಾಶವಿದೆ ಎಂದು ಹೈಕೋರ್ಟ್​ ಹೇಳಿದೆ.

ತಮ್ಮ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಿದ್ದ ಚುನಾವಣಾ ಆಯೋಗದ ಕ್ರಮ ಪ್ರಶ್ನಿಸಿ ಶಾಸಕ ರಿಜ್ವಾನ್ ಅರ್ಷದ್ ಸೇರಿದಂತೆ ಮತ್ತಿತರರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಿದೆ.

“ಚುನಾವಣೆಗಳಿಗೆ ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದವರೆಗೂ ಮತದಾರರ ಪಟ್ಟಿಯನ್ನು ಪರಿಷ್ಕರಣೆ ಮಾಡುವುದಕ್ಕೆ ಅವಕಾಶವಿದೆ. ಶಾಸಕರ ಹೆಸರನ್ನೇ ಪಟ್ಟಿಯಿಂದ ಕೈಬಿಡುವ ಪ್ರಸಂಗಗಳು ಎದುರಾಗದಂತೆ ಕ್ರಮ ವಹಿಸಬೇಕು” ಎಂದು ನ್ಯಾಯಪೀಠ ಕೇಂದ್ರ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪ್ರಜಾಪ್ರತಿನಿಧಿ ಕಾಯ್ದೆ 1950ರ ಸೆಕ್ಷನ್ 22ರ ಪ್ರಕಾರ ಮತದಾರರ ಪಟ್ಟಿ ನಾಮ ನಿರ್ದೇಶನ ಮಾಡುವುದಕ್ಕಾಗಿ ಕೊನೆಯ ದಿನಾಂಕದವರೆಗೂ ತಿದ್ದುಪಡಿ ಮಾಡುವುದಕ್ಕೆ ಅನುಮತಿ ನೀಡುತ್ತದೆ. ಹೀಗಾಗಿ ಮತದಾರರ ಅಂತಿಮ ಪಟ್ಟಿ ಪ್ರಕಟವಾದ ನಂತರ ಪಟ್ಟಿಯನ್ನು ಮತ್ತಷ್ಟು ಪರಿಷ್ಕರಿಸಲು ಅವಕಾಶವಿಲ್ಲ ಎನ್ನುವ ಅರ್ಜಿದಾರರ ವಾದವನ್ನು ನ್ಯಾಯಪೀಠ ತಳ್ಳಿ ಹಾಕಿದೆ.

ಈ ಸುದ್ದಿ ಓದಿದ್ದೀರಾ? ಕನ್ನಡಿಗರೆಲ್ಲ ಒಮ್ಮತದಿಂದ ಅಮುಲ್ ಉತ್ಪನ್ನ ಖರೀದಿಸುವುದಿಲ್ಲ ಎಂಬ ಪ್ರತಿಜ್ಞೆ ಮಾಡಲಿ: ಸಿದ್ದರಾಮಯ್ಯ

ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿದ ನಂತರ ಸ್ಥಳಾಂತರಗೊಂಡವರು ಮತ್ತು ಮೃತಪಟ್ಟವರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕುವುದಕ್ಕೆ ಚುನಾವಣಾ ಆಯೋಗಕ್ಕೆ ಅವಕಾಶವಿದೆ ಎಂದು ಹೇಳಿದೆ.

ಮತದಾರರ ಪಟ್ಟಿಯಿಂದ ತಮ್ಮ ಹೆಸರು ಬಿಟ್ಟು ಹೋಗಿರುವ ವ್ಯಕ್ತಿಗಳು ಯಾವ ಸಂದರ್ಭದಲ್ಲಿ ಬೇಕಾದರೂ ತಮ್ಮ ಹೆಸರನ್ನು ನೋಂದಣಿ ಅಧಿಕಾರಿಯ ಮುಂದೆ ಅರ್ಜಿ ಸಲ್ಲಿಸಿ ಸೇರ್ಪಡೆ ಮಾಡಿಕೊಳ್ಳಬಹುದಾಗಿದೆ ಎಂದು ಹೈಕೋರ್ಟ್‌ ಹೇಳಿದೆ.

ಶಿವಾಜಿನಗರ ವಿಧಾನ ಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಇತರ ಕ್ಷೇತ್ರಗಳಲ್ಲಿ ವಾಸಿಸುವ ಮತದಾರರ ಹೆಸರುಗಳು ಸೇರ್ಪಡೆಗೊಂಡಿವೆ ಎಂಬುದಾಗಿ ಈ ಹಿಂದೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆಯಾಗಿತ್ತು.

ಈ ಸಂಬಂಧ ನ್ಯಾಯಾಲಯದ ಸೂಚನೆ ಮೇರೆಗೆ ಚುನಾವಣಾ ಆಯೋಗ ಪತ್ರಿಕಾ ಪ್ರಕಟಣೆಯ ಹೊರಡಿಸಿತ್ತು. ಆಗ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಅವರ ಹೆಸರು ಮತದಾರರ ಪಟ್ಟಿಯಿಂದ ಕಣ್ಮರೆಯಾಗಿತ್ತು. ಇದನ್ನು ಪ್ರಶ್ನಿಸಿ ರಿಜ್ವಾನ್ ಅರ್ಷದ್ ಸೇರಿದಂತೆ ಕ್ಷೇತ್ರದ ಮತದಾರರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ಪರಿಶೀಲನೆ ನಡೆಸಿದ ನ್ಯಾಯಾಲಯ ಈ ತೀರ್ಪು ನೀಡಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗದಲ್ಲಿ ಈಶ್ವರಪ್ಪನವರ ಸ್ಪರ್ಧೆಯಿಂದ ಏನೂ ಪರಿಣಾಮ ಆಗಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆ...

ನೀತಿ ಸಂಹಿತೆ ಉಲ್ಲಂಘನೆ; ಇಬ್ಬರು ಪ್ರಭಾವಿ ನಾಯಕರ ವಿರುದ್ಧ ಎಫ್‌ಐಆರ್ ದಾಖಲು

ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಕಾವು ಜೋರಾಗಿದೆ. ಏ.26 ರಂದು ಕರ್ನಾಟಕದಲ್ಲಿ ಮೊದಲ...

ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ, ಹೀಗಾಗಿ ಜೋಶಿ ವಿರುದ್ಧ ಸ್ಪರ್ಧೆ: ಯತ್ನಾಳ್ ಆರೋಪ

ದಿಂಗಾಲೇಶ್ವರ ಸ್ವಾಮೀಜಿಗೆ ಎಲ್ಲಿಂದಲೋ ಪೇಮೆಂಟ್ ಬಂದಿದೆ. ಹೀಗಾಗಿಯೇ ಅವರು ಧಾರವಾಡ ಲೋಕಸಭಾ...

ದೇಶದ ಜನರು ಬಿಜೆಪಿಗೆ ಖಾಲಿ ಚೊಂಬು ನೀಡಲಿದ್ದಾರೆ: ರಣದೀಪ್ ಸಿಂಗ್ ಸುರ್ಜೇವಾಲ

ಬರ ಪರಿಹಾರ ವಿಳಂಬ, ತೆರಿಗೆ ಹಂಚಿಕೆಯಲ್ಲಿನ ಅನ್ಯಾಯ ಖಂಡಿಸಿ ಪ್ರಧಾನಿ ನರೇಂದ್ರ...