ಪಕ್ಷಗಳ ಆಶ್ವಾಸನೆ ಪೂರೈಕೆ ಸಾಧ್ಯತೆ ಬಗ್ಗೆ ತಿಳಿಯುವ ಹಕ್ಕು ಮತದಾರರಿಗಿದೆ: ಚುನಾವಣಾ ಆಯುಕ್ತ

Date:

Advertisements

ರಾಜಕೀಯ ಪಕ್ಷಗಳು ನೀಡುವ ಚುನಾವಣಾ ಆಶ್ವಾಸನೆಗಳನ್ನು ಪೂರೈಸುವ ಕಾರ್ಯಸಾಧ್ಯತೆಯ ಬಗ್ಗೆ ಮತದಾರರಿಗೆ ತಿಳಿಯುವ ಹಕ್ಕಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಶನಿವಾರ ಹೇಳಿದ್ದಾರೆ. ಆ ಹಕ್ಕು ನ್ಯಾಯಸಮ್ಮತವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ತಮಿಳುನಾಡಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. “ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಪ್ರಣಾಳಿಕೆಗಳಲ್ಲಿ ಭರವಸೆಗಳನ್ನು ನೀಡುವ ಹಕ್ಕನ್ನು ಹೊಂದಿವೆ. ಅದೇ ರೀತಿ, ಇವುಗಳು ನಿಜವೇ ಮತ್ತು ಅವುಗಳಿಗೆ ಹಣವನ್ನು ಹೇಗೆ ನೀಡಬಹುದು ಎಂಬುದನ್ನು ತಿಳಿದುಕೊಳ್ಳುವ ಹಕ್ಕು ಮತದಾರರಿಗೆ ಇದೆ” ಎಂದು ಹೇಳಿದ್ದಾರೆ.

“ಚುನಾವಣಾ ಆಯೋಗವು ಪಕ್ಷಗಳು ತಮ್ಮ ಚುನಾವಣಾ ಭರವಸೆಗಳನ್ನು ಬಹಿರಂಗಪಡಿಸಲು ‘ಪ್ರೊಫಾರ್ಮಾ’ ಸಿದ್ಧಪಡಿಸಿದೆ. ಈ ಅಂಶವು ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ವಿಷಯಗಳಿಗೂ ಸಂಬಂಧಿಸಿರುತ್ತದೆ” ಎಂದು ತಿಳಿಸಿದ್ದಾರೆ.

Advertisements

“ಚುನಾವಣಾ ಸಮಯದಲ್ಲಿ ನಗದು ಮತ್ತು ಉಚಿತ ವಿತರಣೆಗಳಬಗ್ಗೆ ಜಾಗರೂಕರಾಗಿರಲು ಮತ್ತು ಅವುಗಳನ್ನು ತಡೆಯಲು ತನಿಖಾ ಸಂಸ್ಥೆಗಳಿಗೆ ಸೂಚಿಸಲಾಗಿದೆ. ಅಲ್ಲದೆ, ಆನ್‌ಲೈನ್ ವಹಿವಾಟಿನ ಮೇಲೆ ನಿಗಾ ಇಡಲು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾಕ್ಕೆ ಸಹ ಜವಾಬ್ದಾರಿ ವಹಿಸಲಾಗಿದೆ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

Download Eedina App Android / iOS

X