ಕಾಂಗ್ರೆಸ್‌ ನಾಯಕರಿಂದ ವಕ್ಫ್ ಆಸ್ತಿ ಲೂಟಿ, ಹೀಗಾಗಿ ಆಸ್ತಿ ಸಂರಕ್ಷಿಸುತ್ತೇವೆ ಎಂದಿದ್ದೆವು: ಪ್ರಲ್ಹಾದ್‌ ಜೋಶಿ

Date:

ರಾಜ್ಯಾದ್ಯಂತ ವಕ್ಫ್ ಮೂಲಕ ಹೊಸ ಜಿಹಾದಿ ನಡೆದಿದೆ. ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ಸಿಗರ ನಡೆನುಡಿ ನೋಡಿದರೆ, ಇವರ ದುರುಳತನ ಅರ್ಥವಾಗುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಕಾರಿದರು.

- Advertisement -

ಸಂಡೂರಿನಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, “ಕಾಂಗ್ರೆಸ್ಸಿಗರನ್ನು ಹುಂಬರು, ತಿಳಿವಳಿಕೆ ಇಲ್ಲದವರು ಎಂದು ಕರೆಯಲು ನಾನು ತಯಾರಿಲ್ಲ. ಅವರೇನು ಮಾತನಾಡುತ್ತಾರೆಂದು ಅವರಿಗೆ ಗೊತ್ತಿದೆ. ವಕ್ಫ್ ಆಸ್ತಿ ಸಂರಕ್ಷಿಸುವುದಾಗಿ ಬಿಜೆಪಿ ಪ್ರಣಾಳಿಕೆಯಲ್ಲಿ ಹೇಳಿದೆ. ಇದ್ದ ವಕ್ಫ್ ಆಸ್ತಿಯನ್ನು ಕಾಂಗ್ರೆಸ್ಸಿನ ಹಿರಿಯ ನಾಯಕರು ಲೂಟಿ ಮಾಡಿದ್ದರು. ಬಾಡಿಗೆ, ಲೀಸ್ ಮೂಲಕ ಸಾವಿರಾರು ಕೋಟಿ ಹಣ ಪಡೆಯುತ್ತಿದ್ದರು. ಇರುವ ವಕ್ಫ್ ಆಸ್ತಿ ಸಂರಕ್ಷಿಸುವುದಾಗಿ ನಾವು ಹೇಳಿದ್ದೆವು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

“ಈಗ ವಕ್ಫ್ ಛೂ ಬಿಟ್ಟಿದ್ದಾರೆ. ನೂರಾರು ವರ್ಷಗಳ ಮಂದಿರ, ಮಠ ಹೊಡೆಯಲು ಮುಂದಾಗಿದ್ದಾರೆ. ವಿಜಯಪುರ ಜಿಲ್ಲೆಯ ಪಡಗಾನೂರು ಗ್ರಾಮದಲ್ಲಿ ಚಾಲುಕ್ಯರು ಕಟ್ಟಿದ 1500 ವರ್ಷಗಳ ಹಿಂದಿನ ದೇವಸ್ಥಾನ ವಕ್ಫ್ ಎಂದು ಘೋಷಿಸಿದ್ದಾರೆ. ಕೇವಲ ಕಾಲಂ ನಂಬರ್ 11ರಲ್ಲಿ ದಾಖಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದರು. ಕೇಳಿದರೆ ಸಮರ್ಪಕ ಉತ್ತರ ಸಿಗಲಿಲ್ಲ” ಎಂದು ಆಕ್ಷೇಪಿಸಿದರು.

“ಸೇಲ್ ಡೀಡ್ ಇಲ್ಲದೆ ವಕ್ಫ್ ಷಡ್ಯಂತ್ರ ನಡೆಸುತ್ತಿದೆ. ಕಾಂಗ್ರೆಸ್ ಪಕ್ಷ ಭಯೋತ್ಪಾದಕರ ಬಗ್ಗೆ ಮೃದು ಧೋರಣೆ ಹೊಂದಿದೆ. ಫಾರೂಕ್ ಅಬ್ದುಲ್ಲ ಭಯೋತ್ಪಾದಕರನ್ನು ಕೊಲ್ಲಬಾರದು ಎನ್ನುತ್ತಿದ್ದಾರೆ. ಪಾಕ್ ಜೊತೆ ಮಾತುಕತೆ ಮಾಡಲು ಕೋರುತ್ತಾರೆ. ಅವರ ಜೊತೆ ಇಂಡಿ ಒಕ್ಕೂಟ ಇದೆ. ಕಾಂಗ್ರೆಸ್ ಪಕ್ಷಕ್ಕೆ ಬುದ್ಧಿ ಭ್ರಮಣೆ ಆಗಿದೆಯೇ” ಎಂದು ಪ್ರಶ್ನೆ ಮಾಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಕ್ಫ್ ಧರಣಿಗೂ, ಬಿಜೆಪಿ ಬಂಡಾಯಕ್ಕೂ ಶೋಭಾ ನಾಯಕಿಯಾಗಿದ್ದೇಕೆ?

“ಕಾಂಗ್ರೆಸ್ ಪಕ್ಷವು ಅಲ್ಪಸಂಖ್ಯಾತರು ಅರ್ಥಾತ್ ಮುಸಲ್ಮಾನರ ತುಷ್ಟೀಕರಣವನ್ನೇ ಧ್ಯೇಯವನ್ನಾಗಿ ಮಾಡಿಕೊಂಡಿದೆ. ಸಿದ್ದರಾಮಯ್ಯನವರು ಮೊದಲನೇ ಅವಧಿಯಲ್ಲಿ 2013-18ರಲ್ಲಿ ನಿರ್ಬಂಧಿತ ಪಿಎಫ್‍ಐ, ಎಸ್‍ಡಿಪಿಐ, ಕೆಎಫ್‍ಡಿ ಸಿಮಿಯ ಪೂರ್ವಾವತಾರವಾದ 175 ಕೇಸುಗಳನ್ನು ವಾಪಸ್ ಪಡೆದಿದ್ದರು. ಬಳಿಕ ಈಚೆಗೆ ಅನೇಕ ಬಾರಿ ಹಿಂದೂ ಸಂಘಟನೆಗಳು, ಮಂದಿರಗಳ ಮೇಲೆ ದಾಳಿ ಆಗಿದೆ. ಆದರೆ, ಕಾಂಗ್ರೆಸ್ಸಿಗರಿಗೆ ಏನೂ ಅನಿಸುತ್ತಿಲ್ಲ. ಸೌಮ್ಯವಾಗಿ ಅವರನ್ನು ನೋಡಿಕೊಂಡಿದ್ದರು” ಎಂದು ಟೀಕಿಸಿದರು.

“ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆ ಮೇಲೆ ಆದ ದಾಳಿ ವೇಳೆ ಸ್ವಲ್ಪ ಹೆಚ್ಚು ಕಡಿಮೆ ಆಗಿದ್ದರೆ ಹಲವಾರು ಪೊಲೀಸ್ ಅಧಿಕಾರಿಗಳ ಜೀವಹಾನಿ ಆಗುತ್ತಿತ್ತೆಂದು ಪೊಲೀಸ್ ಅಧಿಕಾರಿಗಳೇ ತಿಳಿಸಿದ್ದರು. ಯುಎಪಿಎ ಕಾನೂನಿನಡಿ ಇದ್ದ ಕೇಸುಗಳನ್ನು ಹಿಂತೆಗೆದುಕೊಂಡಿದ್ದಾರೆ. ಕಾಂಗ್ರೆಸ್ಸಿನ ದಲಿತ ಶಾಸಕನ ಮನೆಯನ್ನು ಸುಟ್ಟು ಹಾಕಿದ ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣದ ಕೇಸುಗಳನ್ನು ಹಿಂಪಡೆಯಲು ಮುಂದಾಗಿದ್ದಾರೆ” ಎಂದು ದೂರಿದರು.

ಕೇಂದ್ರ ಸಚಿವ ವಿ.ಸೋಮಣ್ಣ, ಮಾಜಿ ಡಿಸಿಎಂ ಡಾ.ಅಶ್ವತ್ಥನಾರಾಯಣ್, ಮಾಜಿ ಸಂಸದ ಪ್ರತಾಪಸಿಂಹ, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಮೊದಲಾದ ಪ್ರಮುಖರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಆಪರೇಷನ್ ಕಮಲ: ಬಿಜೆಪಿ ಸೇರಲಿದ್ದಾರೆ 17 ಎನ್‌ಸಿಪಿಐ ಸಂಸದರು ಎಂದ ಬಂಡಾಯ ಸಂಸದ

ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು ನ್ಯಾಷನಲಿಸ್ಟ್...

ಉಮರ್ ಖಾಲಿದ್ ಕುರಿತ ‘ಕೈದಿ‌ ನಂ. 626710 ಈಸ್ ಪ್ರೆಸೆಂಟ್’ ಸಾಕ್ಷ್ಯಚಿತ್ರ ಪ್ರದರ್ಶನ ರದ್ದಾಗಿದ್ದು ಯಾಕೆ?

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (NLSIU) ಜವಾಹರಲಾಲ್...

ಕನಕಪುರ ವಿದ್ಯಾರ್ಥಿ ನಿಲಯಕ್ಕೆ ಸಿಎಂ ದಿಢೀರ್ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಮಸ್ಯೆಗಳ ಬಗ್ಗೆ ಚರ್ಚೆ

ಕನಕಪುರ ನಗರದ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಬಾಲಕರ ವಿದ್ಯಾರ್ಥಿ ನಿಲಯಕ್ಕೆ...

‘ದೇಶದಲ್ಲಿ ಎಲ್ಲವೂ ಸರಿಯಿದೆ ಎನ್ನುತ್ತಾರೆ ಪ್ರಧಾನಿ, ಆದರೆ ಎಲ್ಲವೂ ದುಬಾರಿಯಾಗಿದೆ’

ದೇಶದಲ್ಲಿ ದಿನಬಳಕೆಯ ವಸ್ತುಗಳ ಬೆಲೆಯಲ್ಲಿನ ಗಣನೀಯ ಏರಿಕೆ ಮತ್ತು ಕುಸಿಯುತ್ತಿರುವ ನೈಜ...