ಪಕ್ಷಕ್ಕೆ ಸೇರುವ ಯಾರೊಬ್ಬರಿಗೂ ನಾವು ಟಿಕೆಟ್ ಭರವಸೆ ನೀಡುವುದಿಲ್ಲ: ಡಿ ಕೆ ಶಿವಕುಮಾರ್

Date:

Advertisements
  • ‘ನಂದಿನಿ ಮುಗಿಸಿ ಅಮುಲ್ ಬೆಳೆಸಲು ಬಿಜೆಪಿ ತೀರ್ಮಾನಿಸಿ’
  • ‘ನಾವು ಬಹುತೇಕ ಎಲ್ಲ ಹಾಲಿ ಶಾಸಕರಿಗೆ ಟಿಕೆಟ್ ನೀಡಿದ್ದೇವೆ’

ಕಾಂಗ್ರೆಸ್ ಪಕ್ಷಕ್ಕೆ ಯಾರನ್ನಾದರೂ ಸೇರಿಸಿಕೊಳ್ಳುವ ಮೊದಲು ನಾವು ಟಿಕೆಟ್ ನೀಡುತ್ತೇವೆ ಎನ್ನುವ ಭರವಸೆ ನೀಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಬಳಿಕ ಪಕ್ಷದೊಳಗಿನ ಬೆಳವಣಿಗೆ ಕುರಿತು ಸದಾಶಿವನಗರ ನಿವಾಸದ ಬಳಿ ಸುದ್ದಿ ಮಾಧ್ಯಮದೊಂದಿಗೆ ಮಾತನಾಡಿದ್ದಾರೆ.

“ಕಾಂಗ್ರೆಸ್ ಪಕ್ಷಕ್ಕೆ ಯಾರನ್ನಾದರೂ ಸೇರಿಸಿಕೊಳ್ಳಬೇಕಾದರೂ ನಾವು ಟಿಕೆಟ್ ನೀಡುತ್ತೇವೆ ಎನ್ನುವ ಭರವಸೆ ನೀಡುವುದಿಲ್ಲ. ಬೇಷರತ್ತಿನಿಂದ ಸೇರಿಸಿಕೊಳ್ಳುತ್ತೇವೆ. ಹಾಲಿ ಶಾಸಕರು ಬಂದರೂ ಅವರು ಕಾರ್ಯಕರ್ತರಾಗಿ ದುಡಿಯಬೇಕು ಎಂದು ಬಯಸುತ್ತೇವೆ” ಎಂದಿದ್ದಾರೆ.

“ರಾಜಕಾರಣ ಎಂದರೆ ಚದುರಂಗದಾಟ. ಬಿಜೆಪಿಯವರು ಅದನ್ನು ಆಡುತ್ತಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್‌ನವರು 224 ಕ್ಷೇತ್ರಗಳಿಗೆ ಟಿಕೆಟ್ ಘೋಷಿಸಿದ್ದಾರೆಯೇ” ಎಂದು ಪ್ರಶ್ನಿಸಿದ್ದಾರೆ.

“ನಾವು ಬಹುತೇಕ ಎಲ್ಲ ಹಾಲಿ ಶಾಸಕರಿಗೆ ಟಿಕೆಟ್ ನೀಡಿದ್ದೇವೆ. ಅಸಮಾಧಾನ ಇರುವವರನ್ನು ಕರೆದು ಮಾತನಾಡುತ್ತೇವೆ” ಎಂದಿದ್ದಾರೆ.

“ನಾವೆಲ್ಲ ಒಂದು ಕುಟುಂಬ, ಸಂಸಾರದಲ್ಲಿ ಎಲ್ಲರ ಅಭಿಪ್ರಾಯ ಕೇಳಿ, ಸಮಾಧಾನ ಮಾಡಬೇಕು” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ವೈಎಸ್‌ವಿ ದತ್ತಗೆ ತಪ್ಪಿದ ಕಾಂಗ್ರೆಸ್ ಟಿಕೆಟ್: ಅಭಿಮಾನಿಗಳಿಗೆ ಪತ್ರದ ಮೂಲಕ ಸಭೆಗೆ ಆಹ್ವಾನ

“ಮಹಾರಾಷ್ಟ್ರ ಸರ್ಕಾರ ನಮ್ಮ ರಾಜ್ಯದಲ್ಲಿ ಆರೋಗ್ಯ ವಿಮೆ ಜಾರಿ ಮಾಡುವ ಮೂಲಕ ಪಾರುಪತ್ಯ ಸಾಧಿಸಲು ಮುಂದಾಗಿದೆ. ಈ ರಾಜ್ಯದ ಹಿತ ಕಾಯುವೆ ಎಂದು ಪ್ರಮಾಣ ವಚನ ಸ್ವೀಕರಿಸಿರುವ ಬಸವರಾಜ ಬೊಮ್ಮಾಯಿ ಅವರಿಗೆ ಮಾನ ಮರ್ಯಾದೆ ಏನಾದರೂ ಇದ್ದರೆ ಕೂಡಲೇ ರಾಜೀನಾಮೆ ನೀಡಬೇಕು” ಎಂದು ಕಿಡಿಕಾರಿದ್ದಾರೆ.

“ನಮ್ಮ ರಾಜ್ಯದ ಗಡಿ ಹಳ್ಳಿಗಳಿಗೆ ಶಿವಸೇನೆ ಸರ್ಕಾರ ತಮ್ಮ ಯೋಜನೆ ಜಾರಿ ಮಾಡುತ್ತಿದೆ. ಕಲಾವಿದರು, ಸಾಹಿತಿಗಳು, ಕನ್ನಡಪರ ಹೋರಾಟಗಾರರು ಏನು ಮಾಡುತ್ತಿದ್ದಾರೆ. ನಮ್ಮ ಜನರಿಗೆ ಮಹಾರಾಷ್ಟ್ರ ಯೋಜನೆ ನೀಡಲು ಅವರು ಯಾರು? ನಮ್ಮಲ್ಲಿ ಸರ್ಕಾರ ಇಲ್ಲವೇ” ಎಂದು ಪ್ರಶ್ನಿಸಿದ್ದಾರೆ.

ಅಮುಲ್ ವಿವಾದದ ಕುರಿತು ಪ್ರತಿಕ್ರಿಯೆ ನೀಡಿದ ಡಿ ಕೆ ಶಿವಕುಮಾರ್, “ನಂದಿನಿ ಮುಗಿಸಿ ಅಮುಲ್ ಬೆಳೆಸಲು ಬಿಜೆಪಿ ತೀರ್ಮಾನಿಸಿದೆ. ಆ ಮೂಲಕ ರಾಜ್ಯದ ಹಾಲು ಉತ್ಪಾದಕ ವ್ಯವಸ್ಥೆಗೆ ಧಕ್ಕೆ ತರುವ ಪ್ರಯತ್ನ ನಡೆಯುತ್ತಿದೆ” ಎಂದು ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಒಳಮೀಸಲಾತಿ ಆದೇಶ ಕಾನೂನಾಗಲು ಸುಗ್ರೀವಾಜ್ಞೆ ಜಾರಿಗೊಳಿಸಿ: ಮಾಜಿ ಸಚಿವ ಆಂಜನೇಯ

"ಒಳಮೀಸಲಾತಿ ಆದೇಶವು ಕೇವಲ ಸರ್ಕಾರಿ ಆದೇಶವಾಗಿದ್ದು, ಅದು ಕಾನೂನಿನ ಚೌಕಟ್ಟಿಗೆ ಬರಲು...

ನೈಜ ದೇಶಭಕ್ತರು ಪಾಕ್ ವಿರುದ್ಧದ ಪಂದ್ಯ ನೋಡಿಲ್ಲ: ಬಿಜೆಪಿ, ಟೀಮ್ ಇಂಡಿಯಾವನ್ನು ಟೀಕಿಸಿದ ಸಂಜಯ್ ರಾವತ್

ಪಾಕಿಸ್ತಾನ ವಿರುದ್ಧದ ಏಷ್ಯಾ ಕಪ್ ಫೈನಲ್‌ನಲ್ಲಿ ಟೀಮ್ ಇಂಡಿಯಾ ಆಡಿದ ವಿಚಾರದಲ್ಲಿ...

ಸಿದ್ದರಾಮಯ್ಯ ಗ್ಯಾರಂಟಿ ಕಾಪಿ: ಬಿಹಾರದ ಮಹಿಳೆಯರ ಮೂಗಿಗೆ ತುಪ್ಪ ಸವರಿದ ಮೋದಿ!

ಬಿಹಾರದ ರಾಜಕೀಯ ಚದುರಂಗದಾಟದಲ್ಲಿ, ಈ ಬಾರಿಯ ಚುನಾವಣೆಯಲ್ಲಿ ಗ್ಯಾರಂಟಿ ತಂತ್ರಗಾರಿಕೆ ಚುನಾವಣೆಯನ್ನು...

ಚಿಕ್ಕಮಗಳೂರು l ಮತಗಳ್ಳತನ ವಿರುದ್ಧ ಜನಜಾಗೃತಿ ಅಭಿಯಾನ, ಪ್ರತಿಭಟನೆ; ದುರ್ಗಾಚರಣ್ ಕುಂಚೂರು

ಮತಗಳ್ಳತನದ ವಿರುದ್ಧ ದೇಶದಾದ್ಯಂತ ಸಂಚಲನ ಮೂಡಿಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕ...

Download Eedina App Android / iOS

X