ಕಾಂಗ್ರೆಸ್ ಜೊತೆ ಹೋಗಲು ನಮಗೆ ಇಷ್ಟವಿಲ್ಲ: ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ ಟಿ ದೇವೇಗೌಡ

Date:

Advertisements
  • ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ಜೊತೆ ಮೈತ್ರಿ ಅನಿವಾರ್ಯ: ಜಿ.ಟಿ.ಡಿ.
  • ಕಾಂಗ್ರೆಸ್ ಹೊಡೆತ ತಡೆಯಲು ಆಗುತ್ತಿಲ್ಲ ಎಂದ ಜೆಡಿಎಸ್ ಶಾಸಕ

ಕಾಂಗ್ರೆಸ್ ಜೊತೆ ಹೋಗಲು ನಮಗೆ ಇಷ್ಟವಿಲ್ಲ. ಹಾಗಾಗಿ, ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ಜೊತೆ ಮೈತ್ರಿ ಅನಿವಾರ್ಯ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ.

ಮೈಸೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಶಾಸಕ ಜಿ.ಟಿ.ದೇವೇಗೌಡ, ಕಾಂಗ್ರೆಸ್ ಜೊತೆ ಹೋಗಲು ನಮಗೆ ಇಷ್ಟವಿಲ್ಲ. ಗುತ್ತಿಗೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋಲಿಸಬೇಕು. ಇದೇ ಕಾರಣಕ್ಕೆ ಬಿಜೆಪಿ ಜೊತೆ ಮೈತ್ರಿಗೆ ಎಲ್ಲರೂ ಒಲವು ಹೊಂದಿದ್ದಾರೆ. ಬಿಜೆಪಿ ಜೊತೆ ಸೇರಿ ಚುನಾವಣೆ ಎದುರಿಸೋಣ ಅನ್ನೋದು ಅಭಿಪ್ರಾಯ ಎಂದು ಹೇಳಿದರು.

ಚುನಾವಣೆಯನ್ನು ಒಟ್ಟಾಗಿ ಎದುರಿಸೋಣ ಎನ್ನುವುದು ಒಮ್ಮತದ ಅಭಿಪ್ರಾಯ. ಕಾಂಗ್ರೆಸ್ ಜೊತೆ ಹೋಗಲು ನಮಗೆ ಇಷ್ಟವಿಲ್ಲ. ಹೊಟ್ಟೆ ಉರಿಯಿಂದ ಎಚ್​ಡಿ ಕುಮಾರಸ್ವಾಮಿಯವರನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಿದರು. ಕಾಂಗ್ರೆಸ್ ಹೊಡೆತ ತಡೆಯಲು ಆಗುತ್ತಿಲ್ಲ. ಸೆ. 10ರಂದು ಬೆಂಗಳೂರಿನ ಅರಮನೆ ಜೆಡಿಎಸ್ ಮೈದಾನದಲ್ಲಿ ಸಮಾವೇಶ ಹಮ್ಮಿಕೊಂಡಿದ್ದೇವೆ. ಈ ಮೂಲಕ ನಮ್ಮ ಶಕ್ತಿ ಪ್ರದರ್ಶನ ಮಾಡುತ್ತೇವೆ ಎಂದರು.

Advertisements

ಮೈತ್ರಿ ಬಳಿಕ ಸ್ಥಾನಗಳ ಹಂಚಿಕೆ ಅಳತೆಗೋಲಿನಿಂದ ಮಾಡಬೇಕು. ಈ ವೇಳೆ ನಾನು ಕಾರ್ಯಕರ್ತರು, ಮುಖಂಡರ ಅಭಿಪ್ರಾಯದ ಪರ ಇರುತ್ತೇನೆ. ಈ ಹಿಂದೆ ಬಿಜೆಪಿ ಜೊತೆ ಹೋಗಿದ್ದಕ್ಕೆ ನನ್ನನ್ನೇ ಜನರು ಹುಣಸೂರಿನಲ್ಲಿ ಸೋಲಿಸಿದ್ದರು. ಈಗ ಪರಿಸ್ಥಿತಿ ಬದಲಾಗಿದೆ. ರಾಜ್ಯದಲ್ಲಿ ಜನ ಕಾಂಗ್ರೆಸ್ ವಿರುದ್ಧ ದಂಗೆ ಎದ್ದಿದ್ದಾರೆ ಎಂದು ಜಿಟಿ ದೇವೇಗೌಡ ಹೇಳಿದರು.

ಇದನ್ನು ಓದಿದ್ದೀರಾ? ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ; ಜೆಡಿಎಸ್‌ಗೆ ನಾಲ್ಕು ಕ್ಷೇತ್ರ : ಯಡಿಯೂರಪ್ಪ

“ಮುಂದಿನ ದಿನಗಳಲ್ಲಿ ಏನಾದರೂ ಮಾಡಿಕೊಳ್ಳಿ. ಆದರೆ 2024ರ ಲೋಕಸಭಾ ಚುನಾವಣೆಯಲ್ಲಿ ಮಾತ್ರ ಬಿಜೆಪಿ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳುವಂತೆ ಪಕ್ಷದ ವರಿಷ್ಠ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರಲ್ಲಿ ಕೋರಿದ್ದೇನೆ” ಎಂದು ಜಿ.ಟಿ.ದೇವೇಗೌಡ ಹೇಳಿದ್ದಾರೆ.

“ಬಹಳ ದಿನಗಳ ಚರ್ಚೆಯ ನಂತರ ಬಿಜೆಪಿ-ಜೆಡಿಎಸ್ ಮೈತ್ರಿ ಮಾತುಕತೆ ಸಫಲವಾಗಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದ್ದು, ಜೆಡಿಎಸ್‌ಗೆ ನಾಲ್ಕು ಸ್ಥಾನಗಳನ್ನು ಬಿಟ್ಟುಕೊಡಲು ಅಮಿತ್ ಶಾ ಒಪ್ಪಿದ್ದಾರೆ” ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಬೆಂಗಳೂರಿನಲ್ಲಿ ಶುಕ್ರವಾರ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X