ನಾವು ಸ್ಪಷ್ಟ ಬಹುಮತ ಪಡೆಯುತ್ತೇವೆ; ಈ ಮಾತಿಗೆ ನಾನು ಈಗಲೂ ಬದ್ಧ : ಸಿಎಂ ಬೊಮ್ಮಾಯಿ

Date:

  • ಸಮೀಕ್ಷೆಗಳ ವಿಚಾರಕ್ಕೆ ಮೂಗು ಮುರಿದ ಸಿಎಂ ಬೊಮ್ಮಾಯಿ
  • ಮೋದಿಯವರ ಪ್ರಚಾರದಿಂದ ನಮಗೆ ಪ್ಲಸ್ ಆಗಿದೆ ಎಂದ ಸಿಎಂ

ಚುನಾವಣಾ ಸಮೀಕ್ಷೆಗಳು ಬೇಕಾದುದ್ದನ್ನು ಹೇಳಿಕೊಳ್ಳಲಿ. ಆದರೆ ನಾವೇ ಸ್ಪಷ್ಟ ಬಹುಮತ ಪಡೆಯುತ್ತೇವೆ. ಈ ಮಾತಿಗೆ ನಾನು ಈಗಲೂ ಬದ್ಧ ಎಂದು ಸಿಎಂ ಬೊಮ್ಮಾಯಿ ಹೇಳಿದರು.

- Advertisement -

ಹುಬ್ಬಳ್ಳಿಯ ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಇಂದು ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಪ್ರಚಾರದಿಂದ ನಮಗೆ ಪ್ಲಸ್ ಆಗಿದೆ. ನಾವು ಬಹುಮತ ಪಡೆಯುತ್ತೇವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಮತದಾನೋತ್ತರ ಸಮೀಕ್ಷೆಗಳು ಕಳೆದ ಬಾರಿ ಕಾಂಗ್ರೆಸ್ 107ಕ್ಕೂ ಅಧಿಕ ಸ್ಥಾನ ಅಂತ ಹೇಳಿದ್ದವು. ಆದರೆ ಫಲಿತಾಂಶದ ದಿನ ಅದು ಉಲ್ಟಾ ಆಯಿತು. ಈಗಲೂ ಅದೇ ನಂಬಿಕೆ ಇದೆ. ಯುವಕರು ಮತ್ತು ಮಹಿಳೆಯರು ನಮ್ಮ ಪರವಾಗಿ ಮತದಾನ ಮಾಡಿದ್ದಾರೆ. ನನಗೆ ವಿಶ್ವಾಸವಿದ್ದು, ನಾವು ಸಂಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳಿದರು.

ತಮ್ಮ ಕ್ಷೇತ್ರದ ವಿಚಾರದಲ್ಲಿ ಅಭಿಪ್ರಾಯ ಹಂಚಿಕೊಂಡ ಸಿಎಂ, ಶಿಗ್ಗಾಂವಿ ಜನತೆ ತೋರಿದ ಪ್ರೀತಿಗೆ ನಾನು ಚಿರಋಣಿ. ಹಬ್ಬದ ರೀತಿಯಲ್ಲಿ ಚುನಾವಣೆ ಆಚರಣೆ ಮಾಡಿದರು. ವಿರೋಧ ಪಕ್ಷದವರು ನನ್ನ ವಿರುದ್ಧ ಷಡ್ಯಂತ್ರ, ಅಪ್ರಚಾರ ಮಾಡಿದರು. ಇವೆಲ್ಲದರ ನಡುವೆ ನಮ್ಮ ಜನ ನನ್ನ ಕೈಹಿಡಿಯುವ ವಿಶ್ವಾಸವಿದ್ದು ಶಿಗ್ಗಾಂವಿಯಲ್ಲಿ ನಾನು ದೊಡ್ಡ ಬಹುಮತದಿಂದ ಗೆಲ್ಲುತ್ತೇನೆ ಎಂದರು.

ಇದಕ್ಕೂ ಮುನ್ನ ಸಿಎಂ ಸವದತ್ತಿಯ ಎಲ್ಲಮ್ಮನ ಗುಡ್ಡಕ್ಕೆ ಧರ್ಮಪತ್ನಿ ಚನ್ನಮ್ಮ ಜೊತೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

ಈ ಸುದ್ದಿ ಓದಿದ್ದೀರಾ?:ಕಾಂಗ್ರೆಸ್‌ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದ ಸಿದ್ದರಾಮಯ್ಯ

ಇನ್ನು ಇದೇ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪ, ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದೇ ಬರುತ್ತದೆ. ನಮಗೆ ನೂರಕ್ಕೆ ನೂರರಷ್ಟು ವಿಶ್ವಾಸವಿದೆ, ನಾವೇ ಗೆಲ್ಲುತ್ತೇವೆ. ಕರ್ನಾಟಕದ ಜನರ ನಾಡಿಮಿಡಿತ ನಮಗೆ ಗೊತ್ತಿದೆ. ಬಿಜೆಪಿಗೆ ಬಹುಮತ ಬರುತ್ತೆ, ಸರ್ಕಾರ ರಚನೆ ಮಾಡೇ ಮಾಡುತ್ತೇವೆ. ನಮ್ಮದೇ ಮೆಜಾರಿಟಿ ಬರುವ ಕಾರಣ ಜೆಡಿಎಸ್ ಜೊತೆ ಯಾವುದೇ ಮಾತುಕತೆಯಾಗಿಲ್ಲ ಎಂದಿದ್ದಾರೆ.

ಇನ್ನೊಂದೆಡೆ ರಾಜ್ಯ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದ ಹೆಚ್ಡಿ ಕುಮಾರಸ್ವಾಮಿ ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ. ಬುಧವಾರ ರಾತ್ರಿ ಆಪ್ತರ ಜೊತೆ ಬೆಂಗಳೂರಿನಿಂದ ಸಿಂಗಾಪೂರ್ ಹೆಚ್ ಡಿಕೆ ಪ್ರಯಾಣ ಬೆಳೆಸಿದ್ದಾರೆ. ಮೇ 13ರಂದು ರಾಜ್ಯಕ್ಕೆ ಮರಳಲಿರುವ ಅವರು ಸಿಂಗಾಪೂರದಲ್ಲಿ ಎರಡುದಿನಗಳ ವಿಶ್ರಾಂತಿ ಪಡೆಯಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ: ರಾಜಕೀಯ ಲಾಭ ಸಿಗುತ್ತಾ?

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು...

ರಾಜಸ್ಥಾನದ ಬುಡಕಟ್ಟು ಶಾಲೆಗಳ ದುಸ್ಥಿತಿ: ‘ಖಾಲಿ ಜಾಗ, ಕುಡಿಯುವ ನೀರಿಲ್ಲ’ – ಸಿಜೆಪಿ ಆಕ್ರೋಶ

ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿಗೆ ಪಕ್ಷಾತೀತ ವಿರೋಧ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...