ಉಪಜಾತಿಗಳಿಗೆ ಸಿಗದ ಮೀಸಲು ಸೌಲಭ್ಯ ಗೊಂದಲ ನಿವಾರಿಸಲು ಕೇಳಿದ್ದೇವೆ: ಎಂ ಬಿ ಪಾಟೀಲ್ ಸ್ಪಷ್ಟನೆ

Date:

Advertisements

ಒಂದೇ ಜಾತಿಗೆ ಸೇರಿದ ಉಪಜಾತಿಗಳಿಗೆ ಮೀಸಲು ಸೌಲಭ್ಯ ಸಿಗುವುದಕ್ಕೆ ಸಂಬಂಧಿಸಿದಂತೆ ಗೊಂದಲಗಳಿವೆ. ಇದನ್ನು ಸರಿಪಡಿಸಿ ಎಂದಷ್ಟೇ ನಾವು ಮುಖ್ಯಮಂತ್ರಿಯವರಲ್ಲಿ ಕೇಳಿಕೊಂಡಿದ್ದೇವೆ ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಸೋಮವಾರ ಸ್ಪಷ್ಟಪಡಿಸಿದರು.

ವೈಜ್ಞಾನಿಕ ಜಾತಿಗಣತಿಗಾಗಿ ಆಗ್ರಹಿಸಿ ‘ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ’ ವತಿಯಿಂದ ನೀಡಲಾಗಿರುವ ಮನವಿಗೆ ಸಹಿ ಮಾಡಿರುವವರ ಪೈಕಿ ಒಬ್ಬರಾದ ಸಚಿವ ಎಂ ಬಿ ಪಾಟೀಲರನ್ನು ಸುದ್ದಿಗಾರರು ಈ ಬಗ್ಗೆ ಕೇಳಿದಾಗ ಅವರು ಪ್ರತಿಕ್ರಿಯಿಸಿದರು.

“ಇರುವ ಸಮಸ್ಯೆಗಳನ್ನು ಗಮನಕ್ಕೆ ತರುವುದರಲ್ಲಿ ಯಾವುದೇ ತಪ್ಪು ಇಲ್ಲ. ಉದಾಹರಣೆಗೆ, ಲಿಂಗಾಯತರಲ್ಲಿ ಗಾಣಿಗ, ಸಾದರ ಹೀಗೆ 50ಕ್ಕೂ ಹೆಚ್ಚು ಉಪಜಾತಿಗಳು ಇದ್ದು ಅವರಿಗೆ ಲಿಂಗಾಯತ-ಗಾಣಿಗ, ಲಿಂಗಾಯತ- ಸಾದರ ಎಂದು ನಮೂದಿಸಿದ್ದರೆ 2ಎ ಪ್ರವರ್ಗದಡಿ ಮೀಸಲಾತಿ ಸಿಗುವುದಿಲ್ಲ. ಈ ಕಾರಣಕ್ಕೆ ಅವರೆಲ್ಲ ಹಿಂದೂ-ಗಾಣಿಗ ಹಿಂದೂ-ಸಾದರ ಎಂದು ನಮೂದಿಸಿಕೊಳ್ಳುತ್ತಾರೆ. ಇಂತಹ ಸಮಸ್ಯೆಗಳನ್ನು ಸರಿಪಡಿಸಲು ನಾವು ಮುಖ್ಯಮಂತ್ರಿ ಅವರನ್ನು ಕೋರಿದ್ದೇವೆ. ಈ ತೊಂದರೆಗಳ ಬಗ್ಗೆ ಅವರಿಗೂ ಗೊತ್ತಿದೆ” ಎಂದು ವಿವರಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜಕೀಯ ಸಂಸ್ಕೃತಿಯನ್ನು ಅಧೋಗತಿಗೆ ತಳ್ಳುತ್ತಿರುವ ಬಿಜೆಪಿ ಅಂತಃಕಲಹ

“ಇಂತಹ ತೊಡಕುಗಳು ಒಕ್ಕಲಿಗ ಜನಾಂಗ ಸೇರಿದಂತೆ ಬೇರೆ ಸಮುದಾಯಗಳಿಗೂ ಇರಬಹುದು. ಇದ್ದರೆ, ಅವನ್ನು ಕೂಡ ಸರಿಪಡಿಸುವುದರಲ್ಲಿ ತಪ್ಪೇನಿಲ್ಲ” ಎಂದು ಸಚಿವರು ಅಭಿಪ್ರಾಯಪಟ್ಟರು.

“ಕಾಂಗ್ರೆಸಿನಲ್ಲಿ ‘ಒಬ್ಬ ವ್ಯಕ್ತಿ, ಒಂದು ಹುದ್ದೆ’ ನೀತಿ ಅನುಸರಿಸುವ ಸಾಧ್ಯತೆ ಬಗ್ಗೆ ಕೇಳಿದಾಗ, ಅದರ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ತೆಗೆದುಕೊಳ್ಳುತ್ತಾರೆ. ಬೇರೆಯವರಿಗೂ ಅವಕಾಶ ಸಿಗಲಿ ಎಂಬ ಕಾರಣಕ್ಕೆ ವರಿಷ್ಠರು ತೀರ್ಮಾನ ತೆಗೆದುಕೊಂಡಾಗ ಅದಕ್ಕೆ ತಕ್ಕಂತೆ ನಾವು ನಡೆದುಕೊಳ್ಳಬೇಕಾಗುತ್ತದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

Download Eedina App Android / iOS

X