ದೇಶದಲ್ಲಿ ‘ಬ್ರ್ಯಾಂಡ್‌ ಬೆಂಗಳೂರು’ ನಂಬರ್ ಒನ್ ಆಗಿಸಬೇಕಿದೆ: ಸಿದ್ದರಾಮಯ್ಯ

Date:

  • ‘ದೇಶ ಸುಸ್ಥಿರವಾಗಿ ಬೆಳೆಯಬೇಕಾದರೆ ನಗರ-ಗ್ರಾಮೀಣ ಸುಸ್ಥಿರ ಬೆಳವಣಿಗೆ ಕಾಣಬೇಕು’
  • ‘ರಾಜ್ಯದ 316 ನಗರಗಳಿಗೆ ನಾಗರಿಕ ಸವಲತ್ತುಗಳನ್ನು ನಮ್ಮ ಸರ್ಕಾರ ಒದಗಿಸುತ್ತಿದೆ’

ದೇಶದಲ್ಲಿ ‘ಬ್ರ್ಯಾಂಡ್‌ ಬೆಂಗಳೂರು’ ನಂಬರ್ ಒನ್ ಆಗಿಸಬೇಕಿದೆ. ದೇಶ ಸುಸ್ಥಿರವಾಗಿ ಬೆಳೆಯಬೇಕಾದರೆ ನಗರ-ಗ್ರಾಮೀಣ ಭಾರತವೂ ಸುಸ್ಥಿರ ಬೆಳವಣಿಗೆ ಕಾಣಬೇಕು. ರಾಜ್ಯದ 316 ನಗರಗಳಿಗೆ ಅಗತ್ಯ ಎಲ್ಲ ನಾಗರಿಕ ಸವಲತ್ತುಗಳನ್ನು ನಮ್ಮ ಸರ್ಕಾರ ಒದಗಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ “ಮುನಿಸಿಪಾಲಿಕಾ-2023” 17 ನೇ ಅಂತಾರಾಷ್ಟ್ರೀಯ ಸಮ್ಮೇಳನ‌ ಹಾಗೂ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

“ರಾಜ್ಯದಲ್ಲಿ ಶೇ. 38 ರಷ್ಟು ಮಂದಿ ನಗರ ಪ್ರದೇಶಗಳಲ್ಲಿ‌ ನೆಲೆಸಿದ್ದಾರೆ. ಇವರೆಲ್ಲರಿಗೂ ಟ್ರಾಫಿಕ್ ಕಿರಿಕಿರಿ ಇಲ್ಲದ, ಸುಗಮ ಸಂಚಾರ, ಅಗತ್ಯ ಕಸ ವಿಲೇವಾರಿ ವ್ಯವಸ್ಥೆ, ಒಳಚರಂಡಿ ವ್ಯವಸ್ಥೆ ಸೇರಿ ನಾಗರಿಕ‌ ಸವಲತ್ತುಗಳನ್ನು ಒದಗಿಸುವುದು ಸವಾಲಿನ ಕೆಲಸ. ಇದನ್ನು ಒದಗಿಸುವುದು ಸರ್ಕಾರದ ಜವಾಬ್ದಾರಿ” ಎಂದರು.

“ನಾವು ನಗರ ಪ್ರದೇಶದ ಕುಡಿಯುವ ನೀರಿಗೆ 9 ಸಾವಿರ ಕೋಟಿ ಕೊಡಲು ನಿರ್ಧರಿಸಿರುವುದು ಸೇರಿದಂತೆ ನಗರ ಜೀವನ‌ಮಟ್ಟ ಇನ್ನಷ್ಟು ಸುಗಮಗೊಳಿಸಲು ಅಗತ್ಯ ಇರುವ ಎಲ್ಲಾ ವಲಯಗಳಿಗೂ ಸರ್ಕಾರ ಅಗತ್ಯ ಅನುದಾನ ಒದಗಿಸುತ್ತಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಉರಿಯುತ್ತಿರುವ ಬಿಜೆಪಿಯಲ್ಲಿ ಗಳ ಇರಿಯುತ್ತಿರುವ ನಾಯಕರು

“ಈ ಬಾರಿ ನಾವು ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಗಳನ್ನು ತೆರೆಯುತ್ತಿದ್ದೇವೆ. ಬೆಲೆ ಏರಿಕೆ ಹೆಚ್ಚಾಗಿದ್ದರೂ ಹಿಂದಿನ ದರದಲ್ಲೇ ಬಡವರು, ಮಧ್ಯಮ ವರ್ಗದವರಿಗೆ ಊಟ-ಉಪಾಹಾರದ ವ್ಯವಸ್ಥೆ ಕಲ್ಪಿಸಿದ್ದೇವೆ” ಎಂದು ವಿವರಿಸಿದರು.

ಡಿಸಿಎಂ ಡಿ ಕೆ ಶಿವಕುಮಾರ್, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್, ಪೌರಾಡಳಿತ ಸಚಿವ ರಹೀಮ್ ಖಾನ್, ಶಾಸಕ ತಮ್ಮಯ್ಯ, ಎಂಎಲ್ಸಿ ಎಸ್ ರವಿ, ಆಸ್ಟ್ರೇಲಿಯಾ ವ್ಯಾಪಾರ ಮತ್ತು ಹೂಡಿಕೆ ಆಯೋಗದ ಅಧ್ಯಕ್ಷೆ ಕ್ಯಾಥರಿನ್ ಗಲೇಘರ್ ನಾಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬಿಡಿಎ ಆಯುಕ್ತ ಕಮಿಷನರ್ ಜಯರಾಮ್ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಕರ್ನಾಟಕದಲ್ಲಿ 1.7 ಕೋಟಿ ಮತದಾರರ ಹೆಸರು ಡಿಲೀಟ್ ಆಗಿದೆ: ಕೆ ಸಿ ವೇಣುಗೋಪಾಲ್‌

ಕರ್ನಾಟಕದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ...

ಕರ್ನಾಟಕ SIR: ಹಿರಿಯರು, ಅನಾರೋಗ್ಯ ಪೀಡಿತರಿಗೆ ಮನೆಬಾಗಿಲಲ್ಲೇ ಪರಿಶೀಲನೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ವಿಚಾರಣೆಗೆ ಹಾಜರಾಗಲು ಸೂಚನೆ...

ಗಣೇಶೋತ್ಸವ ಕೋಮು ಸೌಹಾರ್ದದ ಸೇತುವಾಗಲಿ; ಮನುಜ ಸಂಬಂಧದ ತಂತು ಬೆಸೆಯಲಿ

ಗಣೇಶೋತ್ಸವ ಸಂಭ್ರಮ, ಭಕ್ತಿಯಿಂದ ಜನರು ಒಂದೆಡೆ ಸೇರಿ ಆಚರಿಸುವ ಹಬ್ಬ. ಆದರೆ...