ಮಂಡ್ಯ | ನಾಲ್ವಡಿ ಅರಸರನ್ನು ನಾವು ಸದಾ ಸ್ಮರಿಸಬೇಕು: ಸಿಎಂ ಸಿದ್ದರಾಮಯ್ಯ

Date:

Advertisements

ಮಂಡ್ಯ ಜನ ಒರಟರಂತೆ ಕಂಡರೂ, ಸಹಾಯ ಸ್ಮರಿಸುವ ಹೃದಯವಂತರು. ನಾಡಿಗೆ ಕೃಷಿ ಮೂಲಕ ಅನ್ನ ಕೊಡುವ ಅನ್ನದಾತರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಂಡ್ಯದ ಅಭಿವೃದ್ಧಿಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ ಕೊಡುಗೆ ಅಪಾರವಾದದ್ದು, ಅವರನ್ನು ನಾವು ಸದಾ ಸ್ಮರಿಸಬೇಕು ಎಂದೂ ಹೇಳಿದ್ದಾರೆ.

ಮಂಡ್ಯದಲ್ಲಿ ಕುರುಬರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೂತನ ಹಾಸ್ಟೆಲ್ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. “ನಿರ್ಮಾಣವಾಗಲಿರುವ ಹಾಸ್ಟೆಲ್‌ನಲ್ಲಿ ಕೇವಲ‌ ಕುರುಬರ ಮಕ್ಕಳಿಗೆ ಮಾತ್ರವಲ್ಲ, ಎಲ್ಲ ಜಾತಿಯ ಬಡವರಿಗೂ ಅವಕಾಶ ಇರುತ್ತದೆ. ದಾನಿಗಳು ಕೊಟ್ಟಷ್ಟು ಕೊಡಲಿ. ನಾನೂ ಸಹಾಯ ಮಾಡುತ್ತೇನೆ. ಮಂಡ್ಯದ ಜನ ಹತ್ತಾರು ವರ್ಷಗಳಿಂದ ನನಗೆ ಬಂಬಲ ಕೊಡುತ್ತಲೇ ಬರುತ್ತಿದ್ದಾರೆ” ಎಂದರು.

“ಮಂಡ್ಯದಲ್ಲಿನ ಕುರುಬರ ಹಾಸ್ಟೆಲ್ ಕಟ್ಟಡ ಶಿಥಿಲ ಆಗಿದ್ದನ್ನು ನೋಡಿದ್ದೆ. ಅನುದಾನ ಕೊಡಲು ಸರ್ಕಾರ ಸಿದ್ದವಿರುವುದಾಗಿಯೂ ಹೇಳಿದ್ದೆ. ಹಿಂದುಳಿದ ವರ್ಗದ ಮಕ್ಕಳಿಗೆ ಶಿಕ್ಷಣ ಸಿಗಬೇಕು ಎನ್ನುವ ಉದ್ದೇಶ ಈಡೇರಬೇಕಾದರೆ ಹಾಸ್ಟೆಲ್‌ಗಳ ಅಗತ್ಯವಿದೆ. ಹಳ್ಳಿಗಾಡಿನ ಮಕ್ಕಳೂ ವೈದ್ಯರು, ಎಂಜಿನಿಯರ್ ಗಳಾಗಬೇಕು. ಕೇವಲ ಒಂದು ವರ್ಗದವರು ಮಾತ್ರ ಆಗಬಾರದು, ಎಲ್ಲರಿಗೂ ಶಿಕ್ಷಣ ಸಿಗಬೇಕು” ಎಂದರು.

Advertisements

“ನಮ್ಮ ಸರ್ಕಾರ ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದೆ. ಮಾತ್ರವಲ್ಲ, ವಿದ್ಯುತ್ ಬಿಲ್, ದಂಡ ಎರಡನ್ನೂ ಮನ್ನಾ ಮಾಡಿದ್ದೇವೆ. ಇವತ್ತೇನಾದರೂ ಮಂಡ್ಯದಲ್ಲಿ ಸಕ್ಕರೆ ಕಾರ್ಖಾನೆ ಉಳಿದಿದ್ದರೆ, ವೈದ್ಯ ಕಾಲೇಜು, ಕೃಷಿ ವಿವಿ ಬಂದಿದೆ ಎಂದರೆ ಅದಕ್ಕೆ ಕಾಂಗ್ರೆಸ್ ಸರ್ಕಾರ ಮತ್ತು ಸಚಿವ ಚಲುವರಾಯಸ್ವಾಮಿ ಅವರ ಕಾಳಜಿ, ಶ್ರಮ ಕಾರಣ” ಎಂದು ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಚಿತ್ರದುರ್ಗ | ಚಳ್ಳಕೆರೆ ನಗರದಲ್ಲಿ ರಸ್ತೆ ಗುಂಡಿಗಳ ಪೂಜೆ; ಕರ್ನಾಟಕ ರಾಷ್ಟ್ರ ಸಮಿತಿಯಿಂದ ವಿನೂತನ ಪ್ರತಿಭಟನೆ

ಚಳ್ಳಕೆರೆ ನಗರದ ಬಹುತೇಕ ವಾರ್ಡುಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ, ಅಲ್ಲದೆ ತಾಲೂಕಿನ...

Download Eedina App Android / iOS

X