ಯಾರ ಮುಂದೆಯೂ ತಲೆಬಾಗದೆ ಇರುವುದನ್ನು ಇರಾನ್‌ನಿಂದ ಕಲಿಯಬೇಕು: ಸಂಜಯ್ ರಾವತ್

Date:

Advertisements

ಸ್ವಾಭಿಮಾನ ಮತ್ತು ಧೈರ್ಯ ಎಂದರೆ ಏನು ಎಂಬುದನ್ನು ಇರಾನ್ ತೋರಿಸಿದೆ. ಯಾರ ಮುಂದೆಯೂ ತಲೆಬಾರದೆ ಇರುವುದನ್ನು ಭಾರತವು ಇರಾನ್‌ನಿಂದ ಕಲಿಯಬೇಕು ಎಂದು ಶಿವಸೇನೆ (ಉದ್ಧವ್ ಬಣ) ಸಂಸದ ಸಂಜಯ್ ರಾವತ್ ಹೇಳಿದ್ದಾರೆ.

ಅಮೆರಿಕ ದಾಳಿಗೆ ಪ್ರತ್ಯುತ್ತರವಾಗಿ ಸೋಮವಾರ ರಾತ್ರಿ ಕತಾರ್‌ನಲ್ಲಿರುವ ಅಮೆರಿಕ ವಾಯುನೆಲೆಯ ಮೇಲೆ ಇರಾನ್ ದಾಳಿ ಮಾಡಿತು. ಟ್ರಂಪ್ ಏಕಪಕ್ಷೀಯವಾಗಿ ಕದನ ವಿರಾಮ ಘೋಷಿಸಿದ್ದನ್ನು ಅಲ್ಲಗಳೆದು, ಇಸ್ರೇಲ್ ಮೇಲೆ ದಾಳಿ ಮಾಡಿ ಬಳಿಕ ಇರಾನ್ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿತು. ಇದೆಲ್ಲದರ ಬೆನ್ನಲ್ಲೇ, ಇರಾನ್ ಬಗ್ಗೆ ಸಂಜಯ್ ರಾವತ್ ಮಾತನಾಡಿದ್ದಾರೆ.

“ಕಾಶ್ಮೀರ ಸಮಸ್ಯೆಯಾಗಲಿ ಅಥವಾ ಪಾಕಿಸ್ತಾನದೊಂದಿಗಿನ ಸಂಘರ್ಷವಾಗಲಿ, ಇರಾನ್ ಯಾವಾಗಲೂ ಭಾರತದ ಪರವಾಗಿ ನಿಂತಿದೆ. ನಾವು ಯಾವುದೇ ತೊಂದರೆಯನ್ನು ಎದುರಿಸಿದಾಗ ಇರಾನ್ ಯಾವಾಗಲೂ ಭಾರತದ ಪರವಾಗಿ ನಿಂತ ದೇಶ. ಆ ದೇಶವು ಯಾರ ಮುಂದೆಯೂ ತಲೆಬಾಗಿಲ್ಲ. ನಾವು ಇರಾನ್‌ನಿಂದ ಕಲಿಯಬೇಕು” ಎಂದು ರಾವತ್ ಹೇಳಿದ್ದಾರೆ.

Advertisements

ಈ ವರದಿ ಓದಿದ್ದೀರಾ?: ಇರಾನ್-ಇಸ್ರೇಲ್ ಸಂಘರ್ಷ | ಭಾರತದ ಬಾಸ್ಮತಿ ಬೆಳೆವ ರೈತರು-ರಫ್ತುದಾರರಿಗೆ ಸಂಕಷ್ಟ

ಸದ್ಯ, ಇಸ್ರೇಲ್-ಇರಾನ್ ನಡುವೆ ಕದನ ವಿರಾಮ ಘೋಷಣೆಯಾಗಿದೆ. ಆದಾಗ್ಯೂ, ಮಧ್ಯಪ್ರಾಚ್ಯ ರಾಷ್ಟ್ರಗಳು ತಮ್ಮ ವಾಯುಪ್ರದೇಶವನ್ನು ತಾತ್ಕಾಲಿಕವಾಗಿ ಮುಚ್ಚಿವೆ. ಪರಿಣಾಮ, ಮಧ್ಯಪ್ರಾಚ್ಯ ರಾಷ್ಟ್ರಗಳು ಮತ್ತು ಭಾರತದ ನಡುವೆ ಹಾರಾಟ ನಡೆಸಬೇಕಿದ್ದ 48 ವಿಮಾನಗಳು ರದ್ದಾಗಿವೆ. ಏತನ್ಮಧ್ಯೆ, ಮಂಗಳವಾರ, ‘ಆಪರೇಷನ್ ಸಿಂಧು’ ಅಡಿಯಲ್ಲಿ ಮಶಾದ್‌ನಿಂದ ನವದೆಹಲಿಗೆ ಬಂದ ವಿಶೇಷ ವಿಮಾನದಲ್ಲಿ ಒಟ್ಟು 292 ಭಾರತೀಯ ಪ್ರಜೆಗಳು ಇರಾನ್‌ನಿಂದ ಭಾರತಕ್ಕೆ ಮರಳಿದ್ದಾರೆ.

ಈವರೆಗೆ, ಇರಾನ್‌ನಿಂದ 2,295 ಭಾರತೀಯರನ್ನು ಭಾರತಕ್ಕೆ ಕರೆತರಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿಕೊಂಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಅಮೆರಿಕದ ‘ಅಕ್ಕರೆಯ ನ್ಯಾಯಾಧೀಶ’ ಫ್ರಾಂಕ್ ಕ್ಯಾಪ್ರಿಯೊ ನಿಧನ

ರೋಡ್ ಐಲ್ಯಾಂಡ್‌ನ ನಿವೃತ್ತ ಮುನಿಸಿಪಲ್ ನ್ಯಾಯಾಧೀಶರಾಗಿದ್ದ, ಸಾಮಾಜಿಕ ಜಾಲತಾಣಗಳಲ್ಲಿ 'ಅಕ್ಕರೆಯ ನ್ಯಾಯಾಧೀಶ'...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X