ರಾಷ್ಟ್ರದ್ರೋಹಿ ಮುಸ್ಲಿಮರ ವಿರುದ್ಧ ಹೊಸ ಸಂಘಟನೆ ಕಟ್ಟುತ್ತೇವೆ: ಕೆ ಎಸ್​ ಈಶ್ವರಪ್ಪ

Date:

Advertisements

ಸಮಾಜದಲ್ಲಿ ಎಲ್ಲರಿಗೂ ಅನ್ಯಾಯ ಆಗುತ್ತಿದೆ. ಅನ್ಯಾಯದ ವಿರುದ್ಧ ಹೋರಾಟ ಮಾಡಲು ಸಂಘಟನೆ ಕಟ್ಟುತ್ತಿದ್ದೇವೆ. ರಾಣಿ ಚೆನ್ನಮ್ಮ ಬ್ರಿಗೇಡ್ ಮಾಡಲು ಸಲಹೆ ಬಂದಿದೆ. ನಮ್ಮ ಸಂಘಟನೆ ಅಲ್ಪ ಸಂಖ್ಯಾತರ ವಿರುದ್ಧ ಅಲ್ಲ. ಆದರೆ, ರಾಷ್ಟ್ರದ್ರೋಹಿ ಮುಸ್ಲಿಮರ ವಿರುದ್ಧವಾಗಿರುತ್ತದೆ ಬಿಜೆಪಿಯಿಂದ ಉಚ್ಛಾಟಿತಗೊಂಡಿರುವ ಮಾಜಿ ಸಚಿವ ಕೆ ಎಸ್​ ಈಶ್ವರಪ್ಪ ಹೇಳಿದರು.

ಹುಬ್ಬಳ್ಳಿಯಲ್ಲಿ ಸೋಮವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಸಂಘಟನೆ ರಚನೆಯ ಅಂತಿಮ ನಿರ್ಣಯವನ್ನು ಬಾಗಲಕೋಟೆಯಲ್ಲಿ ಕೈಗೊಳ್ಳುತ್ತೇವೆ. ಹುಬ್ಬಳ್ಳಿಯಲ್ಲಿ ಎಲ್ಲ ಜಾತಿಯವರನ್ನು ಸೇರಿಸಿ ಮೊದಲ ಸಭೆ ಮಾಡಿದ್ದೇವೆ. ಎಲ್ಲ ರಾಜಕೀಯ ಪಕ್ಷದವರು ಸಭೆಯಲ್ಲಿ ಭಾಗಿಯಾಗಿದ್ದರು. ಸಭೆಯಲ್ಲಿ ಅನೇಕ ಸಲಹೆ ಬಂದಿವೆ” ಎಂದರು.

“ಹಿಂದುಳಿದವರಿಗೆ ನ್ಯಾಯ ಕೊಡಲು ಒಂದು ಸಂಘಟನೆ ಬೇಕಾಗಿದೆ. ಹೀಗಾಗಿ ಸ್ವಾಮೀಜಿಗಳ ಸೂಚನೆಯಂತೆ ಒಂದು ಸಂಘಟನೆ ಕಟ್ಟಲು ತೀರ್ಮಾನ ಮಾಡಿದ್ದೇವೆ. ಈ ಸಂಘಟನೆಗೆ ಎಲ್ಲ ಸಮುದಾಯಗಳ ಶ್ರೀಗಳು, ಮುಖಂಡರು ಬೆಂಬಲ ಕೊಡುತ್ತೇವೆ ಎಂದಿದ್ದಾರೆ” ಎಂದು ಹೇಳಿದರು.

Advertisements

“ಬಾಗಲಕೋಟೆಯ ಚರಂತಿ ಮಠ ಸಮುದಾಯ ಭವನದಲ್ಲಿ ಅಕ್ಟೋಬರ್ 20 ರಂದು ಕಾರ್ಯಕ್ರಮ ನಡೆಯಲಿದೆ. 30 ರಿಂದ 40 ಜನ ಸ್ವಾಮೀಜಿಗಳು ಭಾಗಿಯಾಗಲಿದ್ದಾರೆ. ಬಾಗಲಕೋಟೆ ಸಭೆ ಬಳಿಕ ಅಂತೀಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತದ ಅಪೌಷ್ಟಿಕತೆಯ ಗಂಭೀರತೆ ಕೇಂದ್ರಕ್ಕೆ ಅರಿವಾಗುವುದು ಯಾವಾಗ?

“ಹಿಂದೆ ರಾಯಣ್ಣ ಬ್ರಿಗೇಡ್ ಕಟ್ಟಿದಾಗ, ಜನ ಬೆಂಬಲ ಸಿಕ್ಕಿತ್ತು. ಆದರೆ, ಬಿ ಎಸ್​ ಯಡಿಯೂರಪ್ಪ ಅವರಿಗೆ ಸಹಿಸಿಕೊಳ್ಳಲು ಆಗದೆ ಅಮಿತ್ ಶಾ ಅವರಿಗೆ ದೂರು ಕೊಟ್ಟರು. ದೂರು ಕೊಡಲು ಕಾರಣವೇನು ಎಂದು ಬಿ ಎಸ್​ ಯಡಿಯೂರಪ್ಪ ಅವರು ಕಾರಣ ಹೇಳಿಲ್ಲ. ಸಂಘಟನೆ ಬೇಡಾ ಅಂತ ಮಾತ್ರ ಹೇಳಿದರು. ಅವತ್ತು ನಾನು ತಪ್ಪು ಮಾಡಿದೆ. ರಾಯಣ್ಣ ಬ್ರಿಗೇಡ್ ಇರಬೇಕಿತ್ತು” ಎಂದರು.

“ಅಪ್ಪ ಮಕ್ಕಳ ಹೊಂದಾಣಿಕೆಯಿಂದ ಬಿಜೆಪಿ ಮುಕ್ತಿಯಾಗಬೇಕು. ಬಿಜೆಪಿ ಶುದ್ಧೀಕರಣವಾಗಲು ಚುನಾವಣೆ ನಿಂತಿದ್ದೆ. ನಾನು ಬಿಜೆಪಿ ಸೇರಲ್ಲ, ನನಗೆ ಸಮಾಧಾನ ಆದರೆ ಮಾತ್ರ ವಾಪಸ್ ಬಿಜೆಪಿ ಸೇರುತ್ತೇನೆ. ನನ್ನ ಮಗನಿಗೆ ಹಾವೇರಿಗೆ ಟಿಕೆಟ್ ಕೊಡಿಸುತ್ತೇನೆ ಅಂತ ಹೇಳೆ​ ಯಡಿಯೂರಪ್ಪ ಮೋಸ ಮಾಡಿದರು” ಎಂದು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಸಂಸದ ಕೆ ವಿರೂಪಾಕ್ಷಪ್ಪ, ಮಾಜಿ ಸಚಿವ ಗೂಳಿಹಟ್ಟಿ ಶೇಖರ್, ಮಾಜಿ ಶಾಸಕ ರಘುಪತಿ ಭಟ್, ವೀರಭದ್ರಪ್ಪ ಹಾಲರವಿ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X