ಗಾಂಧಿ, ಅಂಬೇಡ್ಕರ್ ಹೆಸರಲ್ಲಿ ಜಾತ್ರೆ ಮಾಡುತ್ತೇವೆ, ನಮ್ಮ ಜಾತ್ರೆಗೂ ಅರ್ಥವಿದೆ: ಡಿಸಿಎಂ ಡಿ ಕೆ ಶಿವಕುಮಾರ್‌

Date:

Advertisements

ಗಾಂಧೀಜಿ ಹಾಗೂ ಕಾಂಗ್ರೆಸ್ ಕೊಟ್ಟ ಅಹಿಂಸೆಯ ಆದರ್ಶವನ್ನು ವಿಶ್ವ ಒಪ್ಪಿದೆ. ಇದನ್ನು ಉಳಿಸಿಕೊಂಡು, ಮುಂದಿನ ಪೀಳಿಗೆಗೆ ತಿಳಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಬೆಳಗಾವಿಯ ಸರ್ಕಿಟ್ ಹೌಸ್ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿ, “ಗಾಂಧೀಜಿ ಅವರ ತತ್ವ ಆದರ್ಶಗಳು, ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನ ಉಳಿಸಬೇಕು. ಇದು ಕೇವಲ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ ಅಲ್ಲ, ದೇಶದ ಕಾರ್ಯಕ್ರಮ. ಗಾಂಧೀಜಿ ಅವರು ನಮ್ಮೊಂದಿಗೆ ಇಲ್ಲದಿದ್ದರೂ, ತತ್ವ ಸಿದ್ಧಾಂತಗಳ ಮೂಲಕ ಸದಾ ಜೀವಂತವಾಗಿರುತ್ತಾರೆ. ಗಾಂಧೀಜಿ ಅವರ ಪರಂಪರೆಯನ್ನು ನಾವು ಮುಂದುವರಿಸಿಕೊಂಡು ಹೋಗಬೇಕು” ಎಂದರು.

“ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮಗಳನ್ನು ಮುಂದೂಡಲಾಗಿತ್ತು. ಹೀಗಾಗಿ ಇಂದು ಜೈ, ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ನಡೆಸುತ್ತಿದ್ದೇವೆ. ಈ ಕಾರ್ಯಕ್ರಮದ ಮೂಲಕ ಕರ್ನಾಟಕ ಹಾಗೂ ಬೆಳಗಾವಿ ಇತಿಹಾಸದ ಪುಟ ಸೇರಲಿವೆ” ಎಂದು ಹೇಳಿದರು.

Advertisements

“ಗಾಂಧೀಜಿ ಅವರು ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು, ನಂತರ ಅಂಬೇಡ್ಕರ್ ಅವರು ನಮಗೆ ಸಂವಿಧಾನ ಕೊಟ್ಟರು. ಇವರ ತತ್ವ ಆದರ್ಶ, ಸಾಮಾಜಿಕ ನ್ಯಾಯ ಉಳಿಸಲು ಇಂದಿನ ಸಮಾವೇಶ ಅಗತ್ಯವಾಗಿದೆ. ಸ್ವಾತಂತ್ರ್ಯ ಬಂದ ನಂತರ ದೇಶಕ್ಕೆ ಪ್ರಜಾಪ್ರಭುತ್ವ ವ್ಯವಸ್ಥೆ ನೀಡಲಾಗಿದ್ದು, ಅದರಿಂದಲೇ ನಾವು ಇಂದು ನಾಯಕರಾಗಿದ್ದೇವೆ. ಇದನ್ನು ಉಳಿಸಿಕೊಳ್ಳಲು ನಾವು ಇಂದು ಸೇರಿದ್ದೇವೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕುಸಿಯುತ್ತಿರುವ ಸಾಮ್ರಾಜ್ಯದ ಹೊಸ ಅಧಿಪತಿ ಡೊನಾಲ್ಡ್ ಟ್ರಂಪ್

ಗಾಂಧಿ, ಅಂಬೇಡ್ಕರ್ ಹೆಸರಲ್ಲಿ ಜಾತ್ರೆ ಮಾಡುತ್ತಿದ್ದೇವೆ

ಗಾಂಧಿ ಹಾಗೂ ಅಂಬೇಡ್ಕರ್ ಹೆಸರಲ್ಲಿ ಕಾಂಗ್ರೆಸ್ ಜಾತ್ರೆ ಮಾಡುತ್ತಿದೆ ಎಂಬ ಬಿಜೆಪಿ ನಾಯಕರ ಟೀಕೆ ಬಗ್ಗೆ ಕೇಳಿದಾಗ, “ಹೌದು, ನಾವು ಜಾತ್ರೆ ಮಾಡುತ್ತಿದ್ದೇವೆ. ಇಲ್ಲ ಎಂದವರು ಯಾರು? ಒಳ್ಳೆಯದಾಗಬೇಕು, ಸಂಸ್ಕೃತಿ ಉಳಿಯಲು ಜಾತ್ರೆ ಮಾಡಲಾಗುತ್ತದೆ. ಸಂಕ್ರಾಂತಿ ಸಮಯದಲ್ಲಿ ಹೊಸ ಸಂಕ್ರಮಣ, ಹೊಸ ಹುರುಪು ರೈತರ ಬದುಕಿಗೆ ಒಳ್ಳೆಯದಾಗಲಿ ಎಂದು ಮಾಡುತ್ತಾರೆ. ಅದೇ ರೀತಿ ಗಾಂಧೀಜಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ನೂರು ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ನಾವು ಜಾತ್ರೆ ಮಾಡುತ್ತಿದ್ದೇವೆ” ಎಂದು ಹೇಳಿದರು.

ಬಿಜೆಪಿಗರಿಗೆ ಸ್ವಾತಂತ್ರ ಹೋರಾಟ, ತ್ಯಾಗ ಬಲಿದಾನದ ಬಗ್ಗೆ ಗೊತ್ತಿಲ್ಲ

“ನಾನು ಬಿಜೆಪಿ ನಾಯಕರ ಟೀಕೆಗಳ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ಅವರಿಗೆ ಸ್ವಾತಂತ್ರ್ಯ ಚಳುವಳಿ ಎಂದರೆ ಏನು ಎಂಬುದೇ ಗೊತ್ತಿಲ್ಲ. ಈ ಚಳುವಳಿಯಲ್ಲಿ ಕಾಂಗ್ರೆಸಿಗರು ಮಾಡಿದ ತ್ಯಾಗ ಬಲಿದಾನಗಳ ಬಗ್ಗೆ ಅವರಿಗೆ ಅರಿವಿಲ್ಲ. ಗೋಡ್ಸೆ ಸಿದ್ಧಾಂತ ಪಕ್ಷದವರಿಂದ ನಾವು ಮಾತು ಕೇಳಬೇಕಿಲ್ಲ. ಈ ದೇಶಕ್ಕೆ ಗಾಂಧೀಜಿ, ಇಂದಿರಾಗಾಂಧಿ, ರಾಜೀವ್ ಗಾಂಧಿ ಅವರ ಪ್ರಾಣತ್ಯಾಗ, ಸೋನಿಯಾ ಗಾಂಧಿ ಅವರ ಅಧಿಕಾರ ತ್ಯಾಗದ ಬಗ್ಗೆ ನಮಗೆ ಗೊತ್ತಿದೆ” ಎಂದರು.

ಕಾರ್ಯಕ್ರಮದ ಮೂಲಕ ಪಕ್ಷದಲ್ಲಿ ಒಗ್ಗಟ್ಟು ಮೂಡುವುದೇ ಎಂದು ಕೇಳಿದಾಗ, “ನಿಮಗೆ ತಲೆ ಕೆಟ್ಟಿದೆ. ನೀವು ಮಾಧ್ಯಮಗಳು ನಿಮ್ಮದೇ ಆದ ಘನತೆ ಗಳಿಸಿದ್ದೀರಿ. ನಮ್ಮಲ್ಲಿ ಒಗ್ಗಟ್ಟಿಲ್ಲ ಎಂದು ಹೇಳಿದವರು ಯಾರು? ಯಾರೋ ಹೇಳಿದ ಮಾತುಗಳಿಗೆ ನಾನು ಉತ್ತರ ನೀಡಲು ಆಗುವುದಿಲ್ಲ. ಯುವ ಪತ್ರಕರ್ತರು, ನಿಮ್ಮಲ್ಲಿರುವ ಹಿರಿಯರಿಂದ ಸರಿಯಾಗಿ ತರಬೇತಿ ಪಡೆಯಿರಿ” ಎಂದು ಮಾಧ್ಯಮದವರಿಗೆ ಕಿವಿಮಾತು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X