ನೋಂದಣಿ ಇಲಾಖೆಯ ಗೈಡ್‌ಲೈನ್ಸ್‌ ವ್ಯಾಲ್ಯೂ ರಿವೈಸ್ ಮಾಡುತ್ತೇವೆ: ಸಚಿವ ಕೃಷ್ಣ ಭೈರೇಗೌಡ

Date:

Advertisements
  • ಮಾರ್ಕೆಟ್ ವ್ಯಾಲ್ಯೂಗೆ ತಕ್ಕಂತೆ ಗೈಡ್‌ಲೈನ್ಸ್‌ ವ್ಯಾಲ್ಯೂ ಬದಲಾವಣೆ
  • ‘ಬದಲಾವಣೆಯಿಂದ ಜಮೀನು ಅಕ್ರಮಗಳನ್ನು ತಡೆಯಬಹುದು’

ನೋಂದಣಿ ಇಲಾಖೆಯ ಗೈಡ್‌ಲೈನ್ಸ್‌ ವ್ಯಾಲ್ಯೂ 2018 ರಿಂದ ಇದುವರೆಗೆ ರಿವೈಸ್ ಆಗಿಲ್ಲ. ಇದರಿಂದ ರೈತರಿಗೂ ಮಾರಾಟಗಾರರಿಗೂ ಅನ್ಯಾಯ ಆಗುತ್ತಿದೆ. ಗೈಡ್‌ಲೈನ್ಸ್‌ ವ್ಯಾಲ್ಯೂ ರಿವಿಷನ್ ಬಗ್ಗೆ ಸದ್ಯದಲ್ಲೇ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.

ಬೆಂಗಳೂರಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಮಾರ್ಕೆಟ್ ವ್ಯಾಲ್ಯೂಗೆ ತಕ್ಕಂತೆ ಗೈಡೆನ್ಸ್ ವ್ಯಾಲ್ಯೂ ಬದಲಾವಣೆ ಮಾಡುತ್ತೇವೆ. ಒಂದೇ ಸಲ ಹೆಚ್ಚಳ ಮಾಡಲು ಸಾಧ್ಯವಿಲ್ಲ. ನಾವಿನ್ನೂ ಕೂಡ ಅಂತಿಮ ತೀರ್ಮಾನ ತೆಗೆದುಕೊಂಡಿಲ್ಲ” ಎಂದರು.

“ನೋಂದಣಿ ಇಲಾಖೆಯಲ್ಲಿ ಕೆಲವು ಬದಲಾವಣೆ ತರಲಾಗಿದೆ. ಏಪ್ರಿಲ್‌ನಲ್ಲಿ ನೋಂದಣಿ ಪ್ರಕ್ರಿಯೆಯಲ್ಲಿ ಕಾವೇರಿ-2 ಅಳವಡಿಸಲಾಗಿದ್ದು, 251 ನೋಂದಣಿ ಕಚೇರಿಗಳಲ್ಲಿ ಇಂದು (ಜೂ.19) ಸಂಜೆಯೊಳಗೆ ಕಾವೇರಿ-2 ಜಾರಿಯಾಗಲಿದೆ” ಎಂದರು. ‘ಕಾವೇರಿ’ ಎಂಬುದು ತಂತ್ರಾಂಶದ ಹೆಸರಾಗಿದ್ದು, ಇಲಾಖೆಯ ಸೇವೆಗಳನ್ನು ಗಣಕೀಕರಣಗೊಳಿಸಲು ಈ ತಂತ್ರಾಂಶ ಬಳಸಾಗುತ್ತದೆ.

Advertisements

“ಎಲ್ಲ ದಾಖಲೆಗಳನ್ನು ಕಾವೇರಿ-2ನಲ್ಲಿ ಸಲ್ಲಿಸಬಹುದು. ಸಬ್ ರಿಜಿಸ್ಟ್ರಾರ್ ಕೂಡ ಆನ್​​ಲೈನ್‌ನ​ಲ್ಲಿ ದಾಖಲೆ ಪರಿಶೀಲಿಸುತ್ತಾರೆ. ನೋಂದಣಿ ಶುಲ್ಕವನ್ನೂ ಆನ್​​ಲೈನ್​​ನಲ್ಲೇ ಸಲ್ಲಿಕೆ ಮಾಡಬಹುದು. ಇದರಿಂದ ರಾಜ್ಯ ಸರ್ಕಾರಕ್ಕೂ ಕೂಡ ರಿಜಿಸ್ಟ್ರೇಷನ್ ಬಗ್ಗೆ ಮಾಹಿತಿ ಸಿಗಲಿದೆ. ಇದರಿಂದ ಜಮೀನು ಅಕ್ರಮಗಳನ್ನು ತಡೆಯಬಹುದು” ಎಂದರು.

ಈ ಸುದ್ದಿ ಓದಿದ್ದೀರಾ? ಕಾನೂನು ಕೈಗೆತ್ತಿಕೊಳ್ಳುವವರಿಗೆ ತಕ್ಕ ಶಾಸ್ತಿ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ

ಈಗಾಗಲೇ ಕಾವೇರಿ 1 ಚಾಲ್ತಿಯಲ್ಲಿದ್ದು, ಇದರ ನಡುವೆ ಕಾವೇರಿ 2ಗೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿ ಕಾವೇರಿ-1 ದಿನಕ್ಕೆ 60ರಷ್ಟು ನೋಂದಣಿ ಆಗಿದೆ. ಆದರೆ, ಕಾವೇರಿ 2ರಲ್ಲಿ 65ರಷ್ಟು ಆಗಿದೆ. ಒಂದು ದಿನದಲ್ಲಿ 132 ಡಾಕ್ಯುಮೆಂಟ್ ಕೂಡ ರಿಜಿಸ್ಟ್ರೇಷನ್ ಆಗಿವೆ. ಸಿಸ್ಟಮ್‌ ಸರಿ ಇದೆ ಎನ್ನುವುದಕ್ಕೆ ಇದು ಉದಾಹರಣೆ. ಹೀಗಾಗಿ ಕಾವೇರಿ-2 ಎಂಬ ಪದ್ಧತಿ ತರಲಾಗಿದೆ. ಹೀಗೆ, ಬಳ್ಳಾರಿ, ಗುಲ್ಬರ್ಗಾ,
ಚಾಮರಾಜನಗರ ಸೇರಿದಂತೆ ಹಲವೆಡೆ ಕಾವೇರಿ 2ಗೆ ಸ್ಪಂದನೆ ವ್ಯಕ್ತವಾಗುತ್ತಿದೆ” ಎಂದರು.

ಆದಾಯ ಲೆಕ್ಕಾಚಾರ

“ನೋಂದಣಿ ಪ್ರಕ್ರಿಯೆಯಿಂದ 2022ರಲ್ಲಿ 1,024 ಕೋಟಿ ರೂ. ಆದಾಯ ಬಂದಿತ್ತು. 2023ರ ಮೇ ನಲ್ಲಿ 1,357 ಕೋಟಿ ರೂ. ಆದಾಯ ಬಂದಿದೆ. ಆಡಳಿತ ಸುಧಾರಣೆ ಆಗಬೇಕು, ಜನರಿಗೆ ಸರ್ಕಾರದ ಜೊತೆಗೆ ಸಂಪರ್ಕ ಇದ್ದಾಗ ವಿಳಂಬ ಇಲ್ಲದೆ ಕೆಲಸ ಆಗಬೇಕು ಎಂಬುದು ಸರ್ಕಾರದ ಆದ್ಯತೆ. ನೋಂದಣಿ ಇಲಾಖೆಯಲ್ಲಿನ ಸಮಸ್ಯೆಗಳನ್ನು ಶೀಘ್ರ ಪರಿಹರಿಸಲಾಗುವುದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

Download Eedina App Android / iOS

X