ಈ ವರ್ಷವೇ ಪಠ್ಯ ಪರಿಷ್ಕರಣೆ : ಶಿಕ್ಷಣ ಸಚಿವ ಮಧು ಬಂಗಾರಪ್ಪ

Date:

Advertisements
  • ಯಾವುದೇ ಕಾರಣಕ್ಕೂ ಪಠ್ಯದ ಕೇಸರೀಕರಣಕ್ಕೆ ಅವಕಾಶ ಕೊಡುವುದಿಲ್ಲ
  • ನಮ್ಮ ಮಕ್ಕಳು ನೈಜ, ಬ್ರಾತೃತ್ವದ ಶಿಕ್ಷಣವನ್ನೇ ಪಡೆದುಕೊಳ್ಳಬೇಕು: ಸಚಿವ

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಬೇಕೆನ್ನುವುದು ನಮ್ಮ ಸರ್ಕಾರ ಆಶಯ. ಆ ನಿಟ್ಟಿನಲ್ಲಿ ಹಿಂದಿನ ಸರ್ಕಾರದಿಂದ ಆಗಿದ್ದ ತಪ್ಪು ಮಾಹಿತಿಯುಕ್ತ ಪಠ್ಯ ಕ್ರಮಗಳನ್ನು ಈ ವರ್ಷವೇ ಪರಿಷ್ಕರಣೆ ಮಾಡುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಮಕ್ಕಳು ತಪ್ಪು ಮಾಹಿತಿಗಳನ್ನು ಕಲಿಯಬಾರದು, ಹಾಗಾಗಿ ಈ ಸಾಲಿನಲ್ಲೇ ಪಠ್ಯ ಮರು ಪರಿಷ್ಕರಣೆ ಮಾಡುತ್ತೇವೆ ಎಂದರು.

ಪಠ್ಯ ಕೇಸರೀಕರಣದ ವಿಚಾರದ ಕುರಿತಂತೆ ತಮ್ಮ ಅಭಿಪ್ರಾಯ ಹಂಚಿಕೊಂಡ ಸಚಿವ ಮಧು ಬಂಗಾರಪ್ಪ, ಶಿಕ್ಷಣದಲ್ಲಿ ಪಕ್ಷದ ಅಜೆಂಡಾಗಳನ್ನು ತರುವುದು ಸರಿಯಲ್ಲ, ದಾಖಲಿತ ಇತಿಹಾಸವನ್ನು, ಬ್ರಾತೃತ್ವದ ಶಿಕ್ಷಣವನ್ನು ನಾವು ಅವರಿಗೆ ಕೊಡಬೇಕು, ನಾವೆಲ್ಲ ಒಂದೇ ಎನ್ನುವುದನ್ನು ಅವರು ರೂಢಿಸಿಕೊಳ್ಳಬೇಕು. ಇಂತಹ ಶಿಕ್ಷಣದ ಬದಲು ದ್ವೇಷ ಬಿತ್ತುವ ಮಕ್ಕಳ ಮನಸ್ಸಿನ ಮೇಲೆ ಪರಿಣಾಮ ಬೀರುವ ಪಠ್ಯಗಳನ್ನು ಕಲಿಸುವುದು ಸರಿಯಲ್ಲ. ಯಾವುದೇ ಸರ್ಕಾರದ ಅವಧಿಯಲ್ಲೂ ಶಿಕ್ಷಣದಲ್ಲಿ ಹೇರಿಕೆ ವಿಚಾರ ಇರಬಾರದು ಎಂದು ಹೇಳಿದರು.

Advertisements

ಪಠ್ಯ ಪರಿಷ್ಕರಣೆ ವಿಚಾರವಾಗಿ ಈಗಾಗಲೇ ಸಾಹಿತ್ಯ ವಲಯದ ಪ್ರಮುಖರೊಂದಿಗೆ ಸಭೆ ನಡೆಸಲಾಗಿದೆ. ಅವರ ಅಭಿಪ್ರಾಯ ಅನಿಸಿಕೆಗಳನ್ನು ಕ್ರೋಡೀಕರಿಸಲಾಗುತ್ತಿದೆ. ಹಾಗೆಯೇ ಅನಗತ್ಯ ಪಠ್ಯಗಳನ್ನು ಕೈ ಬಿಡಲು ನಿರ್ಧರಿಸಿರುವುದಾಗಿ ಅವರು ಹೇಳಿದರು.

ಈ ಸುದ್ದಿ ಓದಿದ್ದೀರಾ?:ಪಠ್ಯ ಪರಿಷ್ಕರಣೆಯ ಧಾವಂತ ಏಕೆ, ಋಣ ತೀರಿಸಲಿಕ್ಕಾಗಿಯೇ: ಸುನಿಲ್‌ ಕುಮಾರ್‌ ಪ್ರಶ್ನೆ

ನಮ್ಮ ಸರ್ಕಾರ ಮಕ್ಕಳ ಒಳಿತಿಗೆ ಅಗತ್ಯವಾದ ಕ್ರಮ ಕೈಗೊಳ್ಳುತ್ತದೆ. ಆಮೂಲಾಗ್ರ ಪಠ್ಯಕ್ರಮವನ್ನು ಮಕ್ಕಳು ಅನುಸರಿಸಬೇಕಿದೆ. ಈ ಹಿನ್ನೆಲೆಯಲ್ಲಿ ಪರಿಷ್ಕರಣೆ ವಿಚಾರವನ್ನು ಕ್ಯಾಬಿನೆಟ್ ನಲ್ಲಿಟ್ಟು ಚರ್ಚಿಸಿ ಮುಂದುವರೆಯಲಾಗುವುದು ಎಂದು ಹೇಳಿದರು.

ಪರಿಷ್ಕರಣೆಗೆ ಅಧಿಕೃತ ಮುದ್ರೆ ಸಿಕ್ಕರೆ ಬದಲಾಗಲಿರುವ ಪಠ್ಯ ಕ್ರಮವನ್ನು ಸಪ್ಲಿಮೆಂಟರಿ ಪ್ರತಿ ರೂಪದಲ್ಲಿ ಶಾಲೆ ಹಾಗೂ ಮಕ್ಕಳ ಕೈಗೆ ತಲುಪಿಸುವ ವ್ಯವಸ್ಥೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X