ಈ ವರ್ಷವೇ ಪಠ್ಯ ಪರಿಷ್ಕರಣೆ : ಶಿಕ್ಷಣ ಸಚಿವ ಮಧು ಬಂಗಾರಪ್ಪ

Date:

  • ಯಾವುದೇ ಕಾರಣಕ್ಕೂ ಪಠ್ಯದ ಕೇಸರೀಕರಣಕ್ಕೆ ಅವಕಾಶ ಕೊಡುವುದಿಲ್ಲ
  • ನಮ್ಮ ಮಕ್ಕಳು ನೈಜ, ಬ್ರಾತೃತ್ವದ ಶಿಕ್ಷಣವನ್ನೇ ಪಡೆದುಕೊಳ್ಳಬೇಕು: ಸಚಿವ

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಬೇಕೆನ್ನುವುದು ನಮ್ಮ ಸರ್ಕಾರ ಆಶಯ. ಆ ನಿಟ್ಟಿನಲ್ಲಿ ಹಿಂದಿನ ಸರ್ಕಾರದಿಂದ ಆಗಿದ್ದ ತಪ್ಪು ಮಾಹಿತಿಯುಕ್ತ ಪಠ್ಯ ಕ್ರಮಗಳನ್ನು ಈ ವರ್ಷವೇ ಪರಿಷ್ಕರಣೆ ಮಾಡುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಮಕ್ಕಳು ತಪ್ಪು ಮಾಹಿತಿಗಳನ್ನು ಕಲಿಯಬಾರದು, ಹಾಗಾಗಿ ಈ ಸಾಲಿನಲ್ಲೇ ಪಠ್ಯ ಮರು ಪರಿಷ್ಕರಣೆ ಮಾಡುತ್ತೇವೆ ಎಂದರು.

ಪಠ್ಯ ಕೇಸರೀಕರಣದ ವಿಚಾರದ ಕುರಿತಂತೆ ತಮ್ಮ ಅಭಿಪ್ರಾಯ ಹಂಚಿಕೊಂಡ ಸಚಿವ ಮಧು ಬಂಗಾರಪ್ಪ, ಶಿಕ್ಷಣದಲ್ಲಿ ಪಕ್ಷದ ಅಜೆಂಡಾಗಳನ್ನು ತರುವುದು ಸರಿಯಲ್ಲ, ದಾಖಲಿತ ಇತಿಹಾಸವನ್ನು, ಬ್ರಾತೃತ್ವದ ಶಿಕ್ಷಣವನ್ನು ನಾವು ಅವರಿಗೆ ಕೊಡಬೇಕು, ನಾವೆಲ್ಲ ಒಂದೇ ಎನ್ನುವುದನ್ನು ಅವರು ರೂಢಿಸಿಕೊಳ್ಳಬೇಕು. ಇಂತಹ ಶಿಕ್ಷಣದ ಬದಲು ದ್ವೇಷ ಬಿತ್ತುವ ಮಕ್ಕಳ ಮನಸ್ಸಿನ ಮೇಲೆ ಪರಿಣಾಮ ಬೀರುವ ಪಠ್ಯಗಳನ್ನು ಕಲಿಸುವುದು ಸರಿಯಲ್ಲ. ಯಾವುದೇ ಸರ್ಕಾರದ ಅವಧಿಯಲ್ಲೂ ಶಿಕ್ಷಣದಲ್ಲಿ ಹೇರಿಕೆ ವಿಚಾರ ಇರಬಾರದು ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪಠ್ಯ ಪರಿಷ್ಕರಣೆ ವಿಚಾರವಾಗಿ ಈಗಾಗಲೇ ಸಾಹಿತ್ಯ ವಲಯದ ಪ್ರಮುಖರೊಂದಿಗೆ ಸಭೆ ನಡೆಸಲಾಗಿದೆ. ಅವರ ಅಭಿಪ್ರಾಯ ಅನಿಸಿಕೆಗಳನ್ನು ಕ್ರೋಡೀಕರಿಸಲಾಗುತ್ತಿದೆ. ಹಾಗೆಯೇ ಅನಗತ್ಯ ಪಠ್ಯಗಳನ್ನು ಕೈ ಬಿಡಲು ನಿರ್ಧರಿಸಿರುವುದಾಗಿ ಅವರು ಹೇಳಿದರು.

ಈ ಸುದ್ದಿ ಓದಿದ್ದೀರಾ?:ಪಠ್ಯ ಪರಿಷ್ಕರಣೆಯ ಧಾವಂತ ಏಕೆ, ಋಣ ತೀರಿಸಲಿಕ್ಕಾಗಿಯೇ: ಸುನಿಲ್‌ ಕುಮಾರ್‌ ಪ್ರಶ್ನೆ

ನಮ್ಮ ಸರ್ಕಾರ ಮಕ್ಕಳ ಒಳಿತಿಗೆ ಅಗತ್ಯವಾದ ಕ್ರಮ ಕೈಗೊಳ್ಳುತ್ತದೆ. ಆಮೂಲಾಗ್ರ ಪಠ್ಯಕ್ರಮವನ್ನು ಮಕ್ಕಳು ಅನುಸರಿಸಬೇಕಿದೆ. ಈ ಹಿನ್ನೆಲೆಯಲ್ಲಿ ಪರಿಷ್ಕರಣೆ ವಿಚಾರವನ್ನು ಕ್ಯಾಬಿನೆಟ್ ನಲ್ಲಿಟ್ಟು ಚರ್ಚಿಸಿ ಮುಂದುವರೆಯಲಾಗುವುದು ಎಂದು ಹೇಳಿದರು.

ಪರಿಷ್ಕರಣೆಗೆ ಅಧಿಕೃತ ಮುದ್ರೆ ಸಿಕ್ಕರೆ ಬದಲಾಗಲಿರುವ ಪಠ್ಯ ಕ್ರಮವನ್ನು ಸಪ್ಲಿಮೆಂಟರಿ ಪ್ರತಿ ರೂಪದಲ್ಲಿ ಶಾಲೆ ಹಾಗೂ ಮಕ್ಕಳ ಕೈಗೆ ತಲುಪಿಸುವ ವ್ಯವಸ್ಥೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಸದ, ಮಾಜಿ ಕೇಂದ್ರ ಸಚಿವ ಶ್ರೀನಿವಾಸ ಪ್ರಸಾದ್‌ ಆರೋಗ್ಯ ಸ್ಥಿತಿ ಗಂಭೀರ

ಚಾಮರಾಜನಗರ ಬಿಜೆಪಿ ಸಂಸದ, ಮಾಜಿ ಕೇಂದ್ರ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರ...

ಹಾಸನ ಪೆನ್ ಡ್ರೈವ್ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ, ಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ಕೊಡಿ: ಕುಶಾಲಾ ಸ್ವಾಮಿ

ಹಾಸನ ಸೇರಿದಂತೆ ರಾಜ್ಯದಾದ್ಯಂತ ಓಡಾಡುತ್ತಿರುವ ಸಾವಿರಾರು ಅಶ್ಲೀಲ ವಿಡಿಯೋಗಳುಳ್ಳ ಪೆನ್ ಡ್ರೈವ್,...

ಬರ ಪರಿಹಾರ | ಸುಪ್ರೀಂ ಕೋರ್ಟ್ ಉಗಿದಿದ್ದನ್ನೇ ಮೋದಿ ಪ್ರಸಾದ ಎನ್ನುತ್ತಿರುವ ಬಿಜೆಪಿ!

ರಾಜ್ಯಕ್ಕೆ 3,454 ಕೋಟಿ ರುಪಾಯಿ ಬರ ಪರಿಹಾರ ಸುಪ್ರೀಮ್ ಕೋರ್ಟ್ ಕೊಟ್ಟದ್ದೇ...

ಚಾಮರಾಜನಗರ | ಮತಗಟ್ಟೆ ಧ್ವಂಸ ಮಾಡಿದ ಇಂಡಿಗನತ್ತ ಗ್ರಾಮದಲ್ಲಿ ಏ.29ರಂದು ಮರು ಮತದಾನ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ...