ತುಮಕೂರು ಶಿವಕುಮಾರ ಶ್ರೀಗಳಿಗೆ ‘ಭಾರತ ರತ್ನ’ ನೀಡಲು ಪತ್ರ ಬರೆದಿದ್ದೆವು: ಸಿಎಂ ಸಿದ್ದರಾಮಯ್ಯ

Date:

“ನಾವು ಲಿಂಗೈಕ್ಯರಾಗಿರುವ ತುಮಕೂರು ಸಿದ್ಧಗಂಗಾ ಮಠದ ಶಿವಕುಮಾರ ಶ್ರೀಗಳಿಗೆ ‘ಭಾರತ ರತ್ನ’ ನೀಡುವಂತೆ ಆಗ್ರಹಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೆವು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ಇಂದು ಹಿರಿಯ ಬಿಜೆಪಿ ಮುಖಂಡ ಎಲ್‌ ಕೆ ಅಡ್ವಾಣಿ ಅವರಿಗೆ ಕೇಂದ್ರ ಸರ್ಕಾರವು ‘ಭಾರತ ರತ್ನ’ಕ್ಕೆ ಆಯ್ಕೆ ಮಾಡಿದ ಬಗ್ಗೆ ಪತ್ರಕರ್ತರು ಕೇಳಿದ ವೇಳೆ ದಾವಣಗೆರೆಯ ಎಂ.ಬಿ.ಎ. ಹೆಲಿಪ್ಯಾಡ್ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ʻಬಳ್ಳಾರಿ ಚಲೋʼ ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಬಿಜೆಪಿ ಪಾದಯಾತ್ರೆ; ಲಾಭ...

ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು ಕಾಂಗ್ರೆಸ್‌ ಬಿಜೆಪಿ ಪಕ್ಷವನ್ನು ಸಂಪೂರ್ಣವಾಗಿ ಮಣಿಸಿತ್ತು. ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್‌ ತನ್ನ ಪ್ರಾಬಲ್ಯವನ್ನು ಮುಂದುವರಿಸಿತು. ಇತ್ತೀಚೆಗೆ ನಡೆದ ಸಂಡೂರು ವಿಧಾನಸಭಾ ಕ್ಷೇತ್ರದ...

“ಎಲ್ ಕೆ ಅಡ್ವಾಣಿಯವರಿಗೆ ಕೊಟ್ಟಿರುವುದಕ್ಕೆ ನಾವೇನೂ ಬೇಡ ಅನ್ನುವುದಿಲ್ಲ. ನಾವು ಲಿಂಗೈಕ್ಯರಾಗಿರುವ ತುಮಕೂರು ಸಿದ್ಧಗಂಗಾ ಮಠದ ಶಿವಕುಮಾರ ಶ್ರೀಗಳಿಗೆ ನೀಡುವಂತೆ ಆಗ್ರಹಿಸಿ ಪತ್ರ ಬರೆದಿದ್ದೆವು” ಎಂದು ತಿಳಿಸಿದರು.

ಕನಕದಾಮದ ಈಶ್ವರಾನಂದಪುರಿ ಸ್ವಾಮೀಜಿ ಅವರಿಗೆ ಬಾಗೂರಿನಲ್ಲಿರುವ ಚನ್ನಕೇಶವ ದೇವಾಲಯದ ಗರ್ಭಗುಡಿಗೆ ಪ್ರವೇಶಿಸದಂತೆ ತಡೆದ ವಿಚಾರದ ಬಗ್ಗೆ ಕೇಳಿದಾಗ, “ನನಗೆ ಈ ಬಗ್ಗೆ ಏನೂ ಮಾಹಿತಿ ಬಂದಿಲ್ಲ. ನನ್ನ ಗಮನಕ್ಕೂ ಬಂದಿಲ್ಲ. ಗೊತ್ತಿಲ್ಲದ ವಿಚಾರಕ್ಕೆ ನಾನು ಪ್ರತಿಕ್ರಿಯಿಸುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

ಗುತ್ತಿಗೆದಾರರ ಬಿಲ್ ಪಾಸು ಮಾಡಲು ತೊಂದರೆ: ದೂರು ನೀಡಿದರೆ ತನಿಖೆ

ನಗರೋತ್ಥಾನ ಯೋಜನೆಯಡಿ ಕಾಮಗಾರಿಯ ಬಿಲ್ ಪಾಸು ಮಾಡಲು ಅಧಿಕಾರಿಗಳು ಸತಾಯಿಸುತ್ತಿರುವ ಬಗ್ಗೆ 10 ಜಿಲ್ಲೆಗಳ ಗುತ್ತಿಗೆದಾರರು ಆರೋಪಿಸಿರುವ ಬಗ್ಗೆ  ಪ್ರತಿಕ್ರಿಯೆ ನೀಡಿದ ಸಿಎಂ, “ನಗರೋತ್ಥಾನ ಯೋಜನೆಯಡಿ ಕಾಮಗಾರಿಯ ಬಿಲ್ ಪಾಸು ಮಾಡಲು ಅಧಿಕಾರಿಗಳು ಸತಾಯಿಸುತ್ತಿರುವ ಬಗ್ಗೆ ದೂರು ನೀಡಿದರೆ ತನಿಖೆ ಕೈಗೊಂಡು ಕ್ರಮ ವಹಿಸಲಾಗುವುದು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಲೋಕಸಭಾ ಚುನಾವಣೆಗೆ ಅಭ್ಯರ್ಥಿ ಗಳ ಪಟ್ಟಿ ಆದಷ್ಟು ಶೀಘ್ರದಲ್ಲಿಯೇ ಸಿದ್ಧವಾಗಲಿದೆ. ಸಮೀಕ್ಷೆ ನಡೆಯುತ್ತಿದೆ ಎಂದರು.

ಇದನ್ನು ಓದಿದ್ದೀರಾ? ಆರ್‌ಎಸ್‌ಎಸ್‌ ಹಾಗೂ ಬಿಜೆಪಿಯ ಹಿರಿಯ ಮುಖಂಡ ಎಲ್ ಕೆ ಅಡ್ವಾಣಿಗೆ ಭಾರತ ರತ್ನ: ಪ್ರಧಾನಿ ಮೋದಿ ಘೋಷಣೆ

ಲೋಕಸಭಾ ಚುನಾವಣೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮಗನಿಗೆ ಟಿಕೆಟ್ ಕೊಡುವ ಬಗ್ಗೆ ಕೇಳಿದ್ದಕ್ಕೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, “ಅವರು ಕೂಡ ಒಬ್ಬ ಟಿಕೆಟ್ ಆಕಾಂಕ್ಷಿಯಾಗಿ ಕೇಳುತ್ತಾರೆ. ಕಾಂಗ್ರೆಸ್‌ನಲ್ಲಿ ಟಿಕೆಟ್ ಕೇಳುವವರೇ ಸಂಖ್ಯೆ ಜಾಸ್ತಿಯಿರುತ್ತದೆ. ಸ್ಥಳೀಯ ನಾಯಕರು, ಬ್ಲಾಕ್ ಸಮಿತಿ ಅಧ್ಯಕ್ಷ ರು, ಶಾಸಕರು, ಸಂಸದರ ಅಭಿಪ್ರಾಯ ಪಡೆದು ಪಟ್ಟಿಯನ್ನು ಅಂತಿಮಗೊಳಿಸಲಾಗುವುದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್...

ಬ್ರಿಕ್ಸ್‌ ಶೃಂಗಸಭೆ | ಚೀನಾಗೆ ಹೆಚ್ಚಿನ ಲಾಭ, ಭಾರತಕ್ಕೆ ಸವಾಲುಗಳ ನಿರ್ವಹಣೆ: ಕಪಿಲ್ ಸಿಬಲ್

ಇತ್ತೀಚೆಗೆ ದೆಹಲಿಯಲ್ಲಿ ಮುಕ್ತಾಯಗೊಂಡ 'ಬ್ರಿಕ್ಸ್‌' ಶೃಂಗಸಭೆಯಿಂದ ಚೀನಾ ಅತ್ಯಂತ ಹೆಚ್ಚಿನ ಲಾಭವನ್ನು...

ಮತ್ತೆ ಆಪರೇಷನ್ ಕಮಲ: ಬಿಜೆಪಿ ಸೇರಲಿದ್ದಾರೆ 17 ಎನ್‌ಸಿಪಿಐ ಸಂಸದರು ಎಂದ ಬಂಡಾಯ ಸಂಸದ

ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು ನ್ಯಾಷನಲಿಸ್ಟ್...