ಕೊಡಗು | ಜನಸಾಮಾನ್ಯರು ಮತ್ತು ಕೃಷಿಕರ ಶ್ರೇಯೋಭಿವೃದ್ದಿ ನಮ್ಮ ಆಧ್ಯತೆ: ಸಚಿವ ಚಲುವರಾಯಸ್ವಾಮಿ

Date:

ವೈಜ್ಞಾನಿಕ ಕೃಷಿ, ಸಮರ್ಪಕ ಯಾಂತ್ರೀಕರಣ, ಸಮಗ್ರ ಬೇಸಾಯ ಪದ್ದತಿ ಅಳವಡಿಕೆಯು ರೈತರ ಆರ್ಥಿಕತೆ ಹೆಚ್ಚಿಸಲಿದೆ. ಜನಸಾಮಾನ್ಯರು ಮತ್ತು ಕೃಷಿಕರ ಶ್ರೇಯೋಭಿವೃದ್ದಿ ನಮ್ಮ ಸರ್ಕಾರದ ಆಧ್ಯತೆಯಾಗಿದೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ.

- Advertisement -

ಕೊಡಗು ಜಿಲ್ಲೆಯ ಪೊನ್ನಂಪೇಟೆಯ ಕೂರ್ಗ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ನಡೆಯುತ್ತಿರುವ ಮೂರು ದಿನಗಳ ‘ಕೃಷಿ ಯಂತ್ರ ಮೇಳ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ರಾಜ್ಯ ಸರ್ಕಾರವು ಕೃಷಿಕರ ಅನುಕೂಲಕ್ಕಾಗಿ 600ಕ್ಕೂ ಹೆಚ್ಚು ಯಂತ್ರಧಾರೆ ಕೇಂದ್ರಗಳನ್ನು ತೆರದಿದೆ. ಮುಂದಿನ‌ ದಿನಗಳಲ್ಲಿ ಇನ್ನಷ್ಟು ಹೆಚ್ಚು ಯಂತ್ರೀಕರಣಕ್ಕೆ ಪ್ರೋತ್ಸಾಹ ಯೋಜನೆ ಜಾರಿಗೆ ತರಲಾಗುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ರಾಜ್ಯದಲ್ಲಿ ಹೈಟೆಕ್ ಕಟಾವು ಹಬ್ ಸ್ಥಾಪನೆಗೆ 50 ಕೋಟಿ ರೂ. ಮೀಸಲಿರಿಸಲಾಗಿದೆ. 70:30ರ ಸಹಾಯಧನ- ಬಂಡವಾಳ ಹೂಡಿಕೆ ಅನುಪಾತದಲ್ಲಿ ರೈತರೇ ಇದನ್ನು ಸ್ಥಾಪಿಸಿ ನಡೆಸಬಹುದಾಗಿದೆ” ಎಂದು ಸಚಿವರು ಹೇಳಿದರು.

“ಈ ಬಾರಿ ಬರ ಪರಿಸ್ಥಿತಿ ತಲೆದೋರಿದ್ದು, ಕಾವೇರಿ ನೀರಿನ ಹಂಚಿಕೆ ಸಮಸ್ಯೆಯೂ ಉದ್ಭವವಾಗಿದೆ. ಕೇಂದ್ರಕ್ಕೆ ಬೆಳೆ ಪರಿಹಾರಕ್ಕಾಗಿ ಮನವಿ ಸಲ್ಲಿಸಿದ್ದೇವೆ. ರಾಜ್ಯ ಸರ್ಕಾರ ರೈತರ ಹಿತ ಕಾಯಲು ಬದ್ದವಾಗಿದೆ” ಎಂದು ಅವರು ಹೇಳಿದರು.

“ನಮ್ಮ ಸರ್ಕಾರ ಅಧಿಕಾರಿಕ್ಕೆ ಬಂದು‌ ನಾಲ್ಕು ತಿಂಗಳಲ್ಲಿ ನಾವು ನೀಡಿದ ಭರವಸೆ ಈಡೇರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ಜನ‌ಪರ ಯೋಜನೆಗಳನ್ನು ಜಾರಿಗೆ ತರುತ್ತಿದ್ದೇವೆ. ರೈತರಿಗೆ 5 ಲಕ್ಷ ರೂ.ಗಳವರಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡಲಾಗುತ್ತಿದೆ. ಸ್ತ್ರೀ ಶಕ್ತಿ, ಸ್ವಸಹಾಯ ಸಂಘಗಳಿಗೂ ಆರ್ಥಿಕ ‌ನೆರವು ಒದಗಿಸುತ್ತಿದೆ” ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ ನಿರೂಪಣೆ

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ,...

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....