ನಮ್ಮ ನಂದಿನಿ ಸಂಸ್ಥೆಯ ಬ್ಯ್ರಾಂಡ್‌ಗೆ ಏನು ಕಡಿಮೆಯಾಗಿದೆ : ಡಿ ಕೆ ಶಿವಕುಮಾರ್

Date:

  • ‘ಪೊಲೀಸರು ಬಿಜೆಪಿ ಏಜೆಂಟ್‌ ಆಗಿದ್ದಾರೆ’
  • ‘ಅತಿಕ್ರಮಣ ತಡೆಯಲು ಬಿಜೆಪಿಗೆ ಆಗುತ್ತಿಲ್ಲ’

ನಮ್ಮ ನಂದಿನಿ ಸಂಸ್ಥೆಯ ಬ್ಯ್ರಾಂಡ್‌ಗೆ ಏನು ಕಡಿಮೆಯಾಗಿದೆ? ಗುಜರಾತಿನಿಂದ ಇಲ್ಲಿಗೆ ತಂದು ಮಾರಾಟ ಮಾಡುತ್ತಿರುವುದೇಕೆ? ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.

- Advertisement -

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು ಅಮುಲ್ ವಿವಾದದ ಕುರಿತು ಮಾತನಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

“ನಂದಿನಿ ನಮ್ಮ ರೈತರ ಸಂಸ್ಥೆ. ರಾಜ್ಯದ 80 ಲಕ್ಷ ರೈತರು ಅಧಿಕೃತವಾಗಿ ಸಹಕಾರ ಸಂಸ್ಥೆ ಸದಸ್ಯತ್ವ ಪಡೆದು ಹಾಲು ಉತ್ಪಾದನೆ ಮಾಡುತ್ತಿದ್ದಾರೆ. ಈಗ ಅವರಿಗೆ ಕಡಿಮೆ ಬೆಲೆ ನೀಡುತ್ತಿದ್ದಾರೆ. ಜಾನುವಾರುಗಳ ಮೇವಿನ ಬೆಲೆ ಹೆಚ್ಚಾಗಿದ್ದರೂ ಹಾಲಿನ ದರ ಹೆಚ್ಚಳ ಮಾಡಿ ಅವರಿಗೆ ನೆರವು ನೀಡಲು ಆಗಿಲ್ಲ” ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ.

“ರೈತರ ಆದಾಯ ಡಬಲ್ ಮಾಡುತ್ತೇವೆ ಎಂದು ಹೇಳಿದ್ದ ಬಿಜೆಪಿ ಅದನ್ನು ಮಾಡುತ್ತಿಲ್ಲ. ನಮ್ಮ ನಂದಿನಿ ಸಂಸ್ಥೆಯ ಬ್ಯ್ರಾಂಡ್ ಗೆ ಏನು ಕಡಿಮೆಯಾಗಿದೆ? ಗುಜರಾತಿನಿಂದ ಇಲ್ಲಿಗೆ ತಂದು ಮಾರಾಟ ಮಾಡುತ್ತಿರುವುದೇಕೆ?” ಎಂದು ಪ್ರಶ್ನಿಸಿದ್ದಾರೆ.

“ನಮ್ಮ ರೈತರಿಗೆ ನಾವು ಬೆಂಬಲ ಬೆಲೆ ನೀಡಿ ಅವರ ರಕ್ಷಣೆ ಮಾಡಬೇಕಾಗಿದೆ. ಇದೇ ಕಾರಣಕ್ಕೆ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಬೇಕು. ಬಿಜೆಪಿ ಸರ್ಕಾರ, ಸಹಕಾರಿ ಸಚಿವರಿಗೆ ಈ ಅಮುಲ್‌ ಉತ್ಪನ್ನಗಳ ಅತಿಕ್ರಮಣವನ್ನು ತಡೆಯಲು ಸಾಧ್ಯವಾಗುತ್ತಿಲ್ಲ. ಬಿಜೆಪಿಯವರು ಈ ವಿಚಾರವಾಗಿ ಕೈಗೆ ಬಳೆ ತೊಟ್ಟುಕೊಂಡಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚುನಾವಣೆ 2023 | ಕಣದಲ್ಲಿ ‘ಕಲಿ’ಗಳು – ಜಾಲತಾಣದಲ್ಲಿ ‘ಸೈಬರ್ ವಾರಿಯರ್‌’ಗಳ ಸಮರ

“ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂದು ಅವರ ಪಕ್ಷದ ನಾಯಕರಿಗೇ ಅರಿವಾಗಿದೆ. ಇದೇ ಕಾರಣಕ್ಕೆ ಪದೆ ಪದೇ ಬಿಜೆಪಿ ಕೇಂದ್ರ ನಾಯಕರು ರಾಜ್ಯ ಪ್ರವಾಸ ಮಾಡುತ್ತಿದ್ದಾರೆ” ಎಂದು ವ್ಯಂಗ್ಯವಾಡಿದ್ದಾರೆ.

“ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೇಲೆ ಇಡಿ ದುರ್ಬಳಕೆ ಮಾಡಿಕೊಳ್ಳಲು ಪಿತೂರಿ ನಡೆಯುತ್ತಿದೆ. ಚುನಾವಣೆ ಸಮಯದಲ್ಲಿ ನೇಮಕ ಮಾಡಿರುವ ಪೊಲೀಸ್ ಅಧಿಕಾರಿಗಳು ಬಿಜೆಪಿ ಏಜೆಂಟರಂತೆ ಕೆಲಸ ಮಾಡುತ್ತಿದ್ದಾರೆ” ಎಂದು ಡಿ ಕೆ ಶಿವಕುಮಾರ್ ಆರೋಪಿಸಿದ್ದಾರೆ.

ಸತ್ಯಮೇವ ಜಯತೆ ಕಾರ್ಯಕ್ರಮದ ಬಗ್ಗೆ ಮಾತನಾಡಿದ ಅವರು, “ಪಕ್ಷದ ಅಭ್ಯರ್ಥಿ ತೀರ್ಮಾನ ವಿಚಾರವಾಗಿ ನಮಗೆ ಸ್ವಲ್ಪ ಕಾಲಾವಕಾಶ ಬೇಕಾಗಿದೆ. ದೆಹಲಿ ನಾಯಕರು ನಮಗೆ ದಿನಾಂಕ ತಿಳಿಸಿದ ನಂತರ ನಾವು ಕಾರ್ಯಕ್ರಮ ಮಾಡುತ್ತೇವೆ’ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜಸ್ಥಾನ | ಬಿಜೆಪಿಗೆ ಮುಖಭಂಗ; ಮಾಜಿ ಸಿಎಂ ಭದ್ರಕೋಟೆ ಭೇದಿಸಿದ ಕಾಂಗ್ರೆಸ್

ರಾಜಸ್ಥಾನದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ...

ಭಾರತದ ಇತರ ಭಾಷೆಗಳನ್ನು ಗೌರವಿಸಿ, ರಕ್ಷಿಸಿದಾಗ ಮಾತ್ರ ಹಿಂದಿಯ ಪ್ರಗತಿಗೆ ಅರ್ಥ: ಅಮಿತ್ ಶಾ

ಭಾರತೀಯ ಇತರ ಭಾಷೆಗಳ ಗೌರವ, ಪ್ರಚಾರ ಮತ್ತು ರಕ್ಷಣೆಯನ್ನು ಖಚಿತಪಡಿಸಿಕೊಳ್ಳುವ ಮೂಲಕ...

ಬಂಗಾಳದ 252 ಮದರಸಾಗಳು ಬಂದ್; ಭಯೋತ್ಪಾದಕರ ಆಶ್ರಯತಾಣ ಎಂದ ಸಚಿವ: ಬಿಜೆಪಿ ಸರ್ಕಾರಕ್ಕೆ ಮುಸ್ಲಿಮರೇ ಗುರಿಯೇ?

ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರವು ರಾಜ್ಯಾದ್ಯಂತ ಕಾರ್ಯಾಚರಣೆ ನಡೆಸುತ್ತಿರುವ ಮದರಸಾಗಳ...

ಬಿಜೆಪಿಯಲ್ಲಿ ಆಂತರಿಕ ಕುಸ್ತಿ; ಪ್ರತಾಪ್ ಸಿಂಹ – ನಾಗೇಂದ್ರ‌ ಬೀದಿ ಕಾಳಗ

ಮೈಸೂರು ಜಿಲ್ಲೆಯ ಟಿ. ನರಸೀಪುರ ಗಣೇಶೋತ್ಸವ ಮೆರವಣಿಗೆ ವಿಚಾರವಾಗಿ ಇನ್ಸ್‌ಪೆಕ್ಟರ್ ಧನಂಜಯ್‌...