ಚುನಾವಣಾ ಬಾಂಡ್ | ಪ್ರಧಾನಿ ಮೋದಿಯವರಿಗೆ ಅಷ್ಟೊಂದು ಭಯ ಯಾಕೆ: ಜೈರಾಮ್ ರಮೇಶ್ ಪ್ರಶ್ನೆ

Date:

Advertisements

ಚುನಾವಣಾ ಬಾಂಡ್‌ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಮತ್ತೆ ಮುಗಿಬಿದ್ದಿರುವ ಕಾಂಗ್ರೆಸ್‌, ಅವರ ಮೌನವನ್ನು ಪ್ರಶ್ನಿಸಿದೆ.

ಬುಧವಾರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸುದೀರ್ಘ ಟ್ವೀಟ್ ಮಾಡಿದ್ದು, “ಆಶ್ಚರ್ಯಕರ ಎಂಬಂತೆ ಪ್ರಧಾನಿಯವರು ಬುಧವಾರ ನವದೆಹಲಿಯಲ್ಲೇ ನೆಲೆಸಿದ್ದಾರೆ. ಆದರೆ ಹೊಸ ಉದ್ಘಾಟನೆಗಳಿಗೆ, ಮರುಬ್ರಾಂಡಿಂಗ್‌ಗೆ ಅಥವಾ ಹಿಂದಿನ ಕೆಲಸಕ್ಕಾಗಿ ಕ್ರೆಡಿಟ್ ಪಡೆಯಲು ಮೋದಿಯವರು ದೇಶಾದ್ಯಂತ ಪ್ರವಾಸ ಮಾಡುತ್ತಿಲ್ಲ ಯಾಕೆ? ಎಂದು ಕೇಳಿದ್ದಾರೆ.

ಈಗ ರದ್ದಾಗಿರುವ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದ ಸಂಸ್ಥೆಗಳು ಮತ್ತು ಅವುಗಳನ್ನು ಸ್ವೀಕರಿಸಿದ ರಾಜಕೀಯ ಪಕ್ಷಗಳ ವಿವರಗಳನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಒಂದು ದಿನದ ನಂತರ ಸರ್ಕಾರದ ವಿರುದ್ಧ ರಮೇಶ್ ವಾಗ್ದಾಳಿ ನಡೆಸಿದ್ದಾರೆ.

Advertisements

ಟ್ವೀಟ್‌ನಲ್ಲಿ ಸರಣಿ ಪ್ರಶ್ನೆ ಕೇಳಿರುವ ಜೈರಾಮ್ ರಮೇಶ್, ಯಾವ ರಾಜಕೀಯ ಪಕ್ಷಕ್ಕೆ ಯಾರು ಎಷ್ಟು ದೇಣಿಗೆ ನೀಡಿದ್ದಾರೆ ಎಂಬುದನ್ನು ಬಹಿರಂಗಪಡಿಸುವುದನ್ನು ತಡೆಯಲು ಅಥವಾ ವಿಳಂಬ ಮಾಡಲು ಮೋದಿ ಸರ್ಕಾರವು ಎಸ್‌ಬಿಐ ಮೂಲಕ ಸತತವಾಗಿ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದು, ಪ್ರಧಾನ ಮಂತ್ರಿಗಳು ಯಾಕಾಗಿ ಹೆದರುತ್ತಿದ್ದಾರೆ? ಚುನಾವಣಾ ಬಾಂಡ್‌ಗಳ ಅಂಕಿ-ಅಂಶಗಳು ಯಾವ ಹೊಸ ಹಗರಣವನ್ನು ಬಹಿರಂಗಪಡಿಸುತ್ತವೆ ಎಂದೋ? ಅವರು ಕೇಳಿದ್ದು, ತಮ್ಮ ಸರ್ಕಾರವು ಮೂಲಭೂತ ಜವಾಬ್ದಾರಿಗಳ ಬಗ್ಗೆಯೂ ಉತ್ತರಿಸಬೇಕು ಎಂದು ಆಗ್ರಹಿಸಿದ್ದಾರೆ.

“ಇಡಿ, ಸಿಬಿಐ ಅಥವಾ ಐಟಿ ಇಲಾಖೆಯಿಂದ ದಾಳಿ ಅಥವಾ ತನಿಖೆ ನಡೆಸಿದ ಬಳಿಕ 30 ಕಂಪನಿಗಳಿಂದ 335 ಕೋಟಿ ದೇಣಿಗೆಗಳು ಬಂದಿದೆ. ಇವುಗಳು ಬಿಜೆಪಿಗೆ ಏಕೆ ದೇಣಿಗೆ ನೀಡಿವೆ? ಇಡಿ-ಸಿಬಿಐ-ಐಟಿ ತನಿಖೆಯ ಬೆದರಿಕೆಯ ಮೂಲಕ ಬಿಜೆಪಿ ಈ ಸಂಸ್ಥೆಗಳನ್ನು ಬೆದರಿಸಿ ಅವರಿಂದ ದೇಣಿಗೆ ವಸೂಲಿ ಮಾಡುತ್ತಿದೆಯೇ? ಎಂದು ಪ್ರಶ್ನಿಸಿದ್ದಾರೆ.

ಸೆಬಿಯು ನಾಲ್ಕು ಕಂಪೆನಿಗಳನ್ನು ಶೆಲ್ ಕಂಪೆನಿ ಎಂದು ಘೋಷಿಸಿತ್ತು. ಈ ನಾಲ್ಕು ಶೆಲ್ ಕಂಪನಿಗಳಿಂದ 4.9 ಕೋಟಿ ರೂಪಾಯಿಗಳನ್ನು ಬಿಜೆಪಿ ಏಕೆ ಸ್ವೀಕರಿಸಿದೆ. ಈ ಕಂಪನಿಗಳ ಮೂಲಕ ಯಾರ ಕಪ್ಪುಹಣವನ್ನು ಬಿಜೆಪಿಗೆ ತಲುಪಿಸಲಾಗಿದೆ? ಎಂದು ಜೈರಾಮ್ ರಮೇಶ್ ತಮ್ಮ ಪೋಸ್ಟ್‌ನಲ್ಲಿ ಕೇಳಿದ್ದಾರೆ.

2019 ರ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ಸಂಸತ್ತಿನಲ್ಲಿ ಅಂಗೀಕರಿಸಿದ ನಾಲ್ಕು ವರ್ಷಗಳ ನಂತರ ಸರ್ಕಾರವು ನಿಯಮಗಳನ್ನು ತಿಳಿಸುತ್ತಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ರಮೇಶ್, ಸಂಸದೀಯ ವ್ಯವಹಾರಗಳ ಕೈಪಿಡಿ ಮತ್ತು ಸರ್ಕಾರದ ಎಲ್ಲ ಸ್ಥಾಪಿತ ಮಾನದಂಡಗಳ ಪ್ರಕಾರ ಯಾವುದೇ ಕಾಯ್ದೆಗೆ ನಿಯಮಗಳಿವೆ. ಅದರ ಅಂಗೀಕಾರದ ಆರು ತಿಂಗಳೊಳಗೆ ರೂಪಿಸಬೇಕಿತ್ತು. ಪೌರತ್ವ ತಿದ್ದುಪಡಿ ಕಾಯ್ದೆಗೆ ನಿಯಮಗಳನ್ನು ರೂಪಿಸಲು ಮೋದಿ ಸರ್ಕಾರವು ನಾಲ್ಕು ವರ್ಷ ಮತ್ತು ಮೂರು ತಿಂಗಳು ಏಕೆ ತೆಗೆದುಕೊಂಡಿತು? ಲೋಕಸಭೆ ಚುನಾವಣೆಗೂ ಕೆಲವು ದಿನಗಳು ಇರುವಾಗ ನಿಯಮಗಳು ಏಕೆ ಅನುಕೂಲಕರವಾಗಿ ಹೊರಬಂದಿವೆ? ರಮೇಶ್ ಪ್ರಶ್ನಿಸಿದ್ದಾರೆ.

“ಪ್ರಜಾಪ್ರಭುತ್ವ ಸಂಸ್ಥೆಗಳ ಸುಗಮ ಕಾರ್ಯನಿರ್ವಹಣೆಯು ಸರ್ಕಾರದ ಮೊದಲ ಮತ್ತು ಪ್ರಮುಖ ಆದ್ಯತೆ. ಆದರೆ, ಲೋಕಸಭಾ ಚುನಾವಣೆಗೆ ಕೆಲವೇ ದಿನಗಳಿರುವಾಗ ಕೇವಲ ಒಬ್ಬನೇ ಚುನಾವಣಾ ಆಯುಕ್ತರನ್ನು ಹೊಂದುವ ಹಂತಕ್ಕೆ ಚುನಾವಣಾ ಆಯೋಗ ತಲುಪಿದ್ದು ಹೇಗೆ? ಚುನಾವಣಾ ಆಯುಕ್ತ ಅರುಣ್ ಗೋಯೆಲ್ ಏಕಾಏಕಿ ರಾಜೀನಾಮೆ ನೀಡಿದ್ದು ಏಕೆ? ಎಂದು ಸುದೀರ್ಘ ಟ್ವೀಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಪ್ರಧಾನಿ ನರೇಂದ್ರ ಮೋದಿಯವರು ಉತ್ತರಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X