ವಿಪಕ್ಷ ನಾಯಕನ ಆಯ್ಕೆ ಆಗದಿರಲು ಸಂತೋಷ್-ಬಿಎಸ್‌ವೈ ಆಂತರಿಕ ಯುದ್ಧ ಕಾರಣವೆ: ಕಾಂಗ್ರೆಸ್‌ ಪ್ರಶ್ನೆ

Date:

Advertisements

ವಿಧಾಸಭಾ ಚುನಾವಣೆ ಮುಗಿದು ಎರಡು ತಿಂಗಳು ಕಳೆದರೂ ಈವರೆಗೂ ಬಿಜೆಪಿ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ. ಈ ಕುರಿತು ಬಿಜೆಪಿ ತೀವ್ರ ಮುಜುಗರ ಅನುಭವಿಸುತಿದ್ದು, ಅದರ ಬೆನ್ನಲ್ಲೇ ಕಾಂಗ್ರೆಸ್‌, ಬಿಜೆಪಿಗೆ ಸರಣಿ ಪ್ರಶ್ನೆಗಳನ್ನು ಕೇಳಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ”ಚುನಾವಣೆ ಮುಗಿದು, ಸರ್ಕಾರ ರಚನೆಯಾಗಿ ಎರಡು ತಿಂಗಳಾದರೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗದಿರುವುದಕ್ಕೆ ಕಾರಣಗಳೇನು?” ಎಂದು ಪ್ರಶ್ನಿಸಿದೆ.

“ರಾಜ್ಯ ಬಿಜೆಪಿಯ ಬಗ್ಗೆ ಹೈಕಮಾಂಡಿನ ತಿರಸ್ಕಾರವೇ? 66 ಶಾಸಕರಲ್ಲಿ ಒಬ್ಬರಿಗೂ ಯೋಗ್ಯತೆ ಇಲ್ಲವೇ? ಆಂತರಿಕ ಕಚ್ಚಾಟದಲ್ಲಿ ಯಾರೊಬ್ಬರನ್ನು ಆಯ್ಕೆ ಮಾಡಲಾಗದ ತೊಳಲಾಟವೇ?” ಎಂದು ಕುಟುಕಿದೆ.

Advertisements

“ಆ ಹುದ್ದೆಯನ್ನೂ ಮಾರಾಟಕ್ಕೆ ಇಡಲಾಗಿದೆಯೇ, ಇನ್ನೂ ನಿಗದಿಪಡಿಸಿದ ಮೊತ್ತಕ್ಕೆ ಬಿಡ್ಡಿಂಗ್ ಆಗಿಲ್ಲವೇ? ನಮ್ಮ ಸರ್ಕಾರವನ್ನು ವಿರೋಧಿಸಲು ಸಕಾರಣಗಳು ಸಿಗುವುದಿಲ್ಲ ಎಂಬ ನಿರಾಸೆಯೇ?” ಎಂದು ವ್ಯಂಗ್ಯವಾಡಿದೆ.

“ಸೋಲಿನ ಆಘಾತದಿಂದ ಇನ್ನೂ ಸುಧಾರಿಸಿಕೊಂಡಿಲ್ಲವೇ? ಶಾಸನ ಸಭೆಯ ಪಟ್ಟುಗಳು, ನೀತಿ ನಿಯಮಗಳು ತಿಳಿದಿರುವಂತ ನಾಯಕರ ಕೊರತೆಯೇ? ಸಂತೋಷ್ – ಯಡಿಯೂರಪ್ಪ ಅವರ ಆಂತರಿಕ ಯುದ್ಧದ ಪರಿಣಾಮವೇ? ಕಾರಣವೇನು ಎನ್ನುವುದನ್ನಾದರೂ ರಾಜ್ಯದ ಜನತೆಗೆ ತಿಳಿಸಲಿ” ಎಂದು ಕಾಂಗ್ರೆಸ್‌ ಆಗ್ರಹಿಸಿದೆ.

ಈ ಸುದ್ದಿ ಓದಿದ್ದೀರಾ? ಆಷಾಢದ ಬಳಿಕ ನಿವಾಸ ಬದಲಾಯಿಸಲಿರುವ ಸಿಎಂ ಸಿದ್ದರಾಮಯ್ಯ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X