ಬಿಜೆಪಿ ಸದನದಲ್ಲಿ ಜನರ ಸಮಸ್ಯೆ ಚರ್ಚಿಸದೆ ಹೊರಗೆ ಹೋರಾಟ ಮಾಡಿದರೇನು ಪ್ರಯೋಜನ:‌ ಡಿಕೆ ಪ್ರಶ್ನೆ

Date:

Advertisements

ರಾಜ್ಯದ ಜನ 65 ಬಿಜೆಪಿ ಶಾಸಕರನ್ನು ಆಯ್ಕೆ ಮಾಡಿರುವುದು ವಿಧಾನಸಭೆಯಲ್ಲಿ ಜನರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲೆಂದು. ಆದರೆ ಇವರು ಸದನದಲ್ಲಿ ಚರ್ಚೆ ಮಾಡದೇ ಹೊರಗೆ ಹೋರಾಟ ಮಾಡಿದರೆ ಏನು ಪ್ರಯೋಜನ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಬುಧವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ‌ ನೀಡಿದ ಅವರು, “ಬಿಜೆಪಿಯವರ‌ ನಡವಳಿಕೆಯಿಂದ ಅವರ ಪಕ್ಷದಲ್ಲಿ ಒಮ್ಮತವಿಲ್ಲ‌ ಎಂಬುದು ಸ್ಪಷ್ಟವಾಗಿ ತಿಳಿಯುತ್ತದೆ” ಎಂದು ಹೇಳಿದರು.

“ಬಿಜೆಪಿ ಆರ್. ಅಶೋಕ್ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಮಾಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷರೂ ವಿಧಾನಸಭೆಯಲ್ಲಿ ಇದ್ದಾರೆ. ಸರ್ಕಾರ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಸುವರ್ಣಸೌಧ ಕಟ್ಟಿಸಿರುವುದು ಉತ್ತರ ಕರ್ನಾಟಕದ ಸಮಸ್ಯೆಗಳು, ಬರ ಪರಿಸ್ಥಿತಿ ಹಾಗೂ ಸರ್ಕಾರದ ವೈಫಲ್ಯಗಳ ಬಗ್ಗೆ ಸದನದಲ್ಲಿ ಧ್ವನಿ ಎತ್ತಬೇಕು. ಅವರ ಆಚಾರ, ವಿಚಾರ, ಜನಪರ ಧ್ವನಿಯನ್ನು ಸದನದಲ್ಲಿ ವ್ಯಕ್ತಪಡಿಸಬೇಕು. ಅದನ್ನು ಬಿಟ್ಟು ಹೊರಗೆ ಹೋರಾಟ ಮಾಡುತ್ತೇನೆ ಎಂದರೆ ಯಾರು‌ ಕೇಳುತ್ತಾರೆ? ಅದರಿಂದ ಏನು ಪ್ರಯೋಜನ?” ಎಂದರು.

Advertisements

“ಯಡಿಯೂರಪ್ಪ ಅವರು ಸಹ ಯಾವುದಾದರೂ ಕ್ಷೇತ್ರ ಆಯ್ಕೆ ಮಾಡಿಕೊಂಡು, ಸದನಕ್ಕೆ‌ ಬಂದು‌ ಮಾತನಾಡಲಿ. ನಮಗೆ ಯಾವುದೇ ಅಭ್ಯಂತರವಿಲ್ಲ. ಬಿಜೆಪಿ ಪಕ್ಷದಲ್ಲಿನ ಸಮನ್ವಯತೆ ಕೊರತೆ, ಆ ಪಕ್ಷದ ದೌರ್ಬಲ್ಯ ಮತ್ತು ವೈಫಲ್ಯ ಎದ್ದು ಕಾಣುತ್ತಿದೆ” ಎಂದು ಕಿವಿಮಾತು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X