ಸಂಸತ್ ಭದ್ರತಾ ಲೋಪ | ಪತ್ರಕರ್ತರ ಪ್ರಶ್ನೆಗೆ ಉದ್ಧಟತನದಿಂದ ವರ್ತಿಸಿದ ಸಂಸದ ಪ್ರತಾಪ್ ಸಿಂಹ

Date:

Advertisements

ಸಂಸತ್ತಿನ ಭದ್ರತಾ ಲೋಪ ಪ್ರಕರಣದಲ್ಲಿ ಆರೋಪಿಗಳಿಗೆ ಲೋಕಸಭೆಯ ಒಳಗಡೆ ಪ್ರವೇಶಿಸಲು ಪಾಸ್ ನೀಡಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹ, ಸಂಸತ್ ಭದ್ರತಾ ಲೋಪದ ಬಗ್ಗೆ ಪತ್ರಕರ್ತರು ಪ್ರಶ್ನಿಸಿದ್ದಕ್ಕೆ ಉದ್ಧಟತನದಿಂದ ವರ್ತಿಸಿ ಪತ್ರಿಕಾಗೋಷ್ಠಿಯಿಂದ ಎದ್ದುಹೋದ ಪ್ರಸಂಗ ನಡೆದಿದೆ.

ಮೈಸೂರಿನಲ್ಲಿ ಇಂದು (ಡಿ.29) ಮಾಧ್ಯಮಗಳ ಜೊತೆಗೆ ಮಾತನಾಡುತ್ತಿದ್ದ ವೇಳೆ, ಕೇಂದ್ರ ಸರ್ಕಾರದಿಂದ ತಮ್ಮ ಲೋಕಸಭಾ ಕ್ಷೇತ್ರಕ್ಕೆ ಬಂದ ಯೋಜನೆ ಹಾಗೂ ಅನುದಾನಗಳ ಬಗ್ಗೆ ತಿಳಿಸುತ್ತಿದ್ದರು.

“ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇ ಮಾಡಿಸಿದ್ದು ನಾನೇ. ಅದಕ್ಕೆ ಪ್ರಧಾನಿ ಮೋದಿಯವರು ಸಹಕಾರ ನೀಡಿದ್ದಾರೆ. ಮೋದಿಯವರಿಂದ ಮಾರ್ಚ್ 12,2023ರಲ್ಲಿ ಈ ಯೋಜನೆ ಉದ್ಘಾಟನೆಯಾಗಿದೆ. ಈ ನಡುವೆ ಸಚಿವ ಮಹದೇವಪ್ಪ, ಸಿದ್ದರಾಮಯ್ಯನವರು ಎಲ್ಲಿದ್ದರು?” ಎಂದು ಹೇಳುತ್ತಾ, ಸುದ್ದಿಗೋಷ್ಠಿಯಿಂದ ಹೊರಡಲು ಅನುವಾಗಿದ್ದರು.

Advertisements

ಈ ನಡುವೆ ಪತ್ರಕರ್ತರೋರ್ವರು, “ಪ್ರತಿಯೊಂದು ವಿಚಾರದಲ್ಲೂ ಮಾತನಾಡುತ್ತಿದ್ದ ಪ್ರತಾಪ್ ಸಿಂಹ ಅವರು ಸಂಸತ್‌ನ ಭದ್ರತಾ ಲೋಪದ ವಿಚಾರದಲ್ಲಿ ಯಾಕೆ 2024ರಲ್ಲಿ ಮತದಾರರು ನೋಡಿಕೊಳ್ಳುತ್ತಾರೆ ಎಂದು ಹೇಳಿಕೆ ನೀಡಿದ್ದೀರಿ?” ಎಂದು ಪ್ರಶ್ನಿಸಿದರು.

ಪತ್ರಕರ್ತನ ಬಳಿ, ನಿನ್ನ ಹೆಸರೇನು ಎಂದು ಕೇಳಿದ ಪ್ರತಾಪ್ ಸಿಂಹ, ‘ನನ್ನ ಈ ಹೇಳಿಕೆಯನ್ನು ತಗೋಬೇಡಿ, ಕ್ಯಾಮರಾ ಆಫ್ ಮಾಡಿ’ ಎಂದು ಸೂಚಿಸಿದ್ದಾರೆ.

“ಅರಿವು ಬರುವುದಕ್ಕೋಸ್ಕರ ಹೇಳುತ್ತೇನೆ” ಎಂದು ಹೇಳುವಾಗ ಕ್ಯಾಮರಾ ರೆಕಾರ್ಡಿಂಗ್ ಅಲ್ಲಿರುವುದನ್ನು ಗಮನಿಸಿ, ‘ಆಫ್ ಮಾಡಿ’ ಎಂದು ಮತ್ತೊಮ್ಮೆ ಪತ್ರಕರ್ತರಿಗೆ ಸೂಚಿಸಿದ್ದಾರೆ. ಆಮೇಲೂ ಉತ್ತರಿಸದೇ, ‘ನನಗೆ ಮೀಟಿಂಗ್ ಇದೆ’ ಎಂದು ಹೇಳಿ ಅಲ್ಲಿಂದ ನಿರ್ಗಮಿಸಿದ್ದಾರೆ.

ಅಲ್ಲದೇ, ಹೀಗೆ ಪತ್ರಿಕಾಗೋಷ್ಠಿಯಿಂದ ತೆರಳುವಾಗ, ‘ಮಾಡೋಕ್ ಕೆಲಸವಿಲ್ಲದೇ ಬರ್ತಾರೆ, ನಾನೇನ್ ಮಾಡ್ಲಿ. ಸಂಸತ್ ಪ್ರವೇಶಕ್ಕೆ ಗೊತ್ತಿರುವ ವ್ಯಕ್ತಿಯಾದ್ದರಿಂದ ಪಾಸ್ ಕೊಡಿಸಿದ್ದೆ.‌ಆತ ಹೊಗೆ ಬಾಂಬ್ ಸಿಡಿಸುತ್ತಾನೆ ಎಂದು ನನಗೆ ಗೊತ್ತಿತ್ತಾ ಎಂದು ಹೇಳಿಕೊಂಡು ಹೊರನಡೆದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಕಳವಳ ವ್ಯಕ್ತಪಡಿಸಿದ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆ(SIR) ಬಗ್ಗೆ ನೊಬೆಲ್ ಪ್ರಶಸ್ತಿ ವಿಜೇತ...

ಕರಾವಳಿಯಲ್ಲಿ ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ: ಡಿಸಿಎಂ ಡಿ ಕೆ ಶಿವಕುಮಾರ್

"ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ...

ಚಿತ್ರದುರ್ಗ | ಚಳ್ಳಕೆರೆ ನಗರದಲ್ಲಿ ರಸ್ತೆ ಗುಂಡಿಗಳ ಪೂಜೆ; ಕರ್ನಾಟಕ ರಾಷ್ಟ್ರ ಸಮಿತಿಯಿಂದ ವಿನೂತನ ಪ್ರತಿಭಟನೆ

ಚಳ್ಳಕೆರೆ ನಗರದ ಬಹುತೇಕ ವಾರ್ಡುಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ, ಅಲ್ಲದೆ ತಾಲೂಕಿನ...

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

Download Eedina App Android / iOS

X