ಯಡಿಯೂರಪ್ಪರನ್ನು ಯಾರು, ಯಾಕೆ ಕೆಳಗಿಳಿಸಿದರು ಎಂಬುದು ಇದುವರೆಗೂ ಗೊತ್ತಿಲ್ಲ: ಜಿ ಟಿ ದೇವೇಗೌಡ

Date:

ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಅವರನ್ನು ಅಧಿಕಾರದಿಂದ ಯಾಕೆ ಕೆಳಗೆ ಇಳಿಸಿದ್ದರು ಮತ್ತು ಯಾರು ಇಳಿಸಿದ್ದರು ಎನ್ನುವುದು ಇಲ್ಲಿಯವರೆಗೂ ಯಾರಿಗೂ ಗೊತ್ತಿಲ್ಲ ಎಂದು ಜೆಡಿಎಸ್ ಸದಸ್ಯ ಜಿಟಿ ದೇವೇಗೌಡ ಹೇಳಿದರು.

- Advertisement -

ವಿಧಾನಮಂಡಲ ಅಧಿವೇಶನದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಸಿಎಂ ಆಗಿದ್ದ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದ ಲಕ್ಷ್ಮಣ್ ಸವದಿ ಅವರಿಗೆ ಗೊತ್ತಿದ್ದರೆ ಹೇಳಬೇಕು ಎಂದು ಲಕ್ಷ್ಮಣ್ ಸವದಿಯವರ ಕಾಲೆಳೆದ ಅವರು, ಯಡಿಯೂರಪ್ಪ ಅವರನ್ನು ಕೆಳಗಿಸಲು ಏನು ಕಾರಣ ಎಂಬುದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಬಿಟ್ಟರೆ ಇನ್ನು ಯಾರಿಗೂ ಗೊತ್ತಿಲ್ಲ ಎಂದು ಕುಟುಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಾಡಿ ಶೇಮಿಂಗ್ ತಮಾಷೆಯಲ್ಲ; ಮಾನಸಿಕ ಆರೋಗ್ಯದ ಮೇಲಾಗುವ ಮಾಯದ...

ದೇಹದ ಬಣ್ಣ, ರೂಪ, ತೂಕ-ಎತ್ತರ, ಮುಖ, ಕೂದಲು ಅಥವಾ ದೈಹಿಕ ವೈಶಿಷ್ಟ್ಯಗಳ ಆಧಾರದ ಮೇಲೆ ಒಬ್ಬ ವ್ಯಕ್ತಿಯನ್ನು ಹಾಸ್ಯ ಮಾಡುವುದು, ಅವಮಾನಿಸುವುದೇ ಬಾಡಿ ಶೇಮಿಂಗ್. ಇದು ಕೇವಲ ಆ ಕ್ಷಣದ ತಮಾಷೆಯ, ಹಾಸ್ಯ...

ನಡು ಮುರಿದ ಕಾಂಗ್ರೆಸ್ಸನ್ನು ಮತ್ತೆ ಕಟ್ಟಬಲ್ಲರೇ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ ಪಂಗಡದ ಮೀನುಗಾರ ಸಂಕುಲ, ಕೋಮಾರ ಪಂಥ, ಕೊಂಕಣ ಮರಾಠರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಈ ಓಬಿಸಿಗಳ ಬೆಂಬಲ ಕ್ರೋಡೀಕರಿಸುವ ಚಾಕಚಕ್ಯತೆ ಹೊಸ...

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

ಭಾರತೀಯ ಜನತಾ ಪಕ್ಷದಲ್ಲಿ ಅಧಿಕೃತ ವಿರೋಧ ಪಕ್ಷದ ನಾಯಕರಿಲ್ಲ. ಹಾಗೆಯೇ ಲೋಕಸಭೆಯಲ್ಲಿ ಕಾಂಗ್ರೆಸ್‌ಗೆ ವಿರೋಧ ಪಕ್ಷದ ನಾಯಕನಿಲ್ಲ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಲಕ್ಷ್ಮಣ ಸವದಿ, ವಿರೋಧ ಪಕ್ಷದ ನಾಯಕ ಯಾಕಿಲ್ಲ ಎನ್ನುವುದು ನನಗಿಂತ ನಿಮಗೇ ಚೆನ್ನಾಗಿ ಗೊತ್ತಿದೆ. ಆದರೆ, ನೀವು ಹೇಳುತ್ತಿಲ್ಲ ಅಷ್ಟೆ. ವಿರೋಧ ಪಕ್ಷದ ನಾಯಕ ಇನ್ನು ಆಯ್ಕೆ ಆಗಿಲ್ಲ ಎಂದು ಹೇಳುತ್ತಿದ್ದೀರಾ, ಕಾದು ನೋಡಿ ಅದು ನಿಮ್ಮ ಬಾಗಿಲಿಗೆ ಬರಲಿದೆ. ಆ ಕಾರಣಕ್ಕಾಗಿಯೇ ಎರಡನೇ ಸೀಟ್‌ನಲ್ಲಿ ಯಾರು ಕೂರುತ್ತಿಲ್ಲ.

ಮೇಲಿನವರು ನನಗೆ ಅನೇಕರು ಹಳೆ ಪರಿಚಯಸ್ಥರು ಇದ್ದಾರಲಾ ಅವ್ರು ಹೇಳ್ತಾ ಇರ್ತಾರೆ. ವಿರೋಧ ಪಕ್ಷದಲ್ಲಿ ಕುಳಿತು ಯಾರಾದರೂ ಸರಿಯಾಗಿ ಕೆಲಸ ಮಾಡುವವರು ಇದ್ದರೆ ಅದು ಕುಮಾರಸ್ವಾಮಿ. ಅದಕ್ಕಾಗಿ ಕುರ್ಚಿಯನ್ನು ಖಾಲಿ ಬಿಟ್ಟಿದ್ದಾರೆ. ಅಲ್ಲಿವರೆಗೂ ನೀವು ತಾಳ್ಮೆಯಿಂದ ಇರಿ ಎಂದು ಜಿ ಟಿ ದೇವೇಗೌಡರ ಕಾಲೆಳೆದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಆಪರೇಷನ್ ಕಮಲ: ಬಿಜೆಪಿ ಸೇರಲಿದ್ದಾರೆ 17 ಎನ್‌ಸಿಪಿಐ ಸಂಸದರು ಎಂದ ಬಂಡಾಯ ಸಂಸದ

ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು ನ್ಯಾಷನಲಿಸ್ಟ್...

ಉಮರ್ ಖಾಲಿದ್ ಕುರಿತ ‘ಕೈದಿ‌ ನಂ. 626710 ಈಸ್ ಪ್ರೆಸೆಂಟ್’ ಸಾಕ್ಷ್ಯಚಿತ್ರ ಪ್ರದರ್ಶನ ರದ್ದಾಗಿದ್ದು ಯಾಕೆ?

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (NLSIU) ಜವಾಹರಲಾಲ್...

‘ದೇಶದಲ್ಲಿ ಎಲ್ಲವೂ ಸರಿಯಿದೆ ಎನ್ನುತ್ತಾರೆ ಪ್ರಧಾನಿ, ಆದರೆ ಎಲ್ಲವೂ ದುಬಾರಿಯಾಗಿದೆ’

ದೇಶದಲ್ಲಿ ದಿನಬಳಕೆಯ ವಸ್ತುಗಳ ಬೆಲೆಯಲ್ಲಿನ ಗಣನೀಯ ಏರಿಕೆ ಮತ್ತು ಕುಸಿಯುತ್ತಿರುವ ನೈಜ...

ಸಿಎಂ ಯೋಗಿಗೆ ಪ್ರಶ್ನೆ ಕೇಳಿದ್ದಕ್ಕೆ ಕೆಲಸಕ್ಕೆ ಕುತ್ತು; ಆನ್‌ಲೈನ್ ನಿಂದನೆ, ಬುಲ್ಡೋಜರ್ ಬೆದರಿಕೆ: ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್ ಆರೋಪ

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮಾಧ್ಯಮಗೋಷ್ಠಿಯೊಂದರಲ್ಲಿ ಪ್ರಶ್ನೆ ಕೇಳಲು...