ಯಡಿಯೂರಪ್ಪರನ್ನು ಯಾರು, ಯಾಕೆ ಕೆಳಗಿಳಿಸಿದರು ಎಂಬುದು ಇದುವರೆಗೂ ಗೊತ್ತಿಲ್ಲ: ಜಿ ಟಿ ದೇವೇಗೌಡ

Date:

Advertisements

ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಅವರನ್ನು ಅಧಿಕಾರದಿಂದ ಯಾಕೆ ಕೆಳಗೆ ಇಳಿಸಿದ್ದರು ಮತ್ತು ಯಾರು ಇಳಿಸಿದ್ದರು ಎನ್ನುವುದು ಇಲ್ಲಿಯವರೆಗೂ ಯಾರಿಗೂ ಗೊತ್ತಿಲ್ಲ ಎಂದು ಜೆಡಿಎಸ್ ಸದಸ್ಯ ಜಿಟಿ ದೇವೇಗೌಡ ಹೇಳಿದರು.

ವಿಧಾನಮಂಡಲ ಅಧಿವೇಶನದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಸಿಎಂ ಆಗಿದ್ದ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದ ಲಕ್ಷ್ಮಣ್ ಸವದಿ ಅವರಿಗೆ ಗೊತ್ತಿದ್ದರೆ ಹೇಳಬೇಕು ಎಂದು ಲಕ್ಷ್ಮಣ್ ಸವದಿಯವರ ಕಾಲೆಳೆದ ಅವರು, ಯಡಿಯೂರಪ್ಪ ಅವರನ್ನು ಕೆಳಗಿಸಲು ಏನು ಕಾರಣ ಎಂಬುದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಬಿಟ್ಟರೆ ಇನ್ನು ಯಾರಿಗೂ ಗೊತ್ತಿಲ್ಲ ಎಂದು ಕುಟುಕಿದರು.

ಭಾರತೀಯ ಜನತಾ ಪಕ್ಷದಲ್ಲಿ ಅಧಿಕೃತ ವಿರೋಧ ಪಕ್ಷದ ನಾಯಕರಿಲ್ಲ. ಹಾಗೆಯೇ ಲೋಕಸಭೆಯಲ್ಲಿ ಕಾಂಗ್ರೆಸ್‌ಗೆ ವಿರೋಧ ಪಕ್ಷದ ನಾಯಕನಿಲ್ಲ ಎಂದರು.

Advertisements

ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಲಕ್ಷ್ಮಣ ಸವದಿ, ವಿರೋಧ ಪಕ್ಷದ ನಾಯಕ ಯಾಕಿಲ್ಲ ಎನ್ನುವುದು ನನಗಿಂತ ನಿಮಗೇ ಚೆನ್ನಾಗಿ ಗೊತ್ತಿದೆ. ಆದರೆ, ನೀವು ಹೇಳುತ್ತಿಲ್ಲ ಅಷ್ಟೆ. ವಿರೋಧ ಪಕ್ಷದ ನಾಯಕ ಇನ್ನು ಆಯ್ಕೆ ಆಗಿಲ್ಲ ಎಂದು ಹೇಳುತ್ತಿದ್ದೀರಾ, ಕಾದು ನೋಡಿ ಅದು ನಿಮ್ಮ ಬಾಗಿಲಿಗೆ ಬರಲಿದೆ. ಆ ಕಾರಣಕ್ಕಾಗಿಯೇ ಎರಡನೇ ಸೀಟ್‌ನಲ್ಲಿ ಯಾರು ಕೂರುತ್ತಿಲ್ಲ.

ಮೇಲಿನವರು ನನಗೆ ಅನೇಕರು ಹಳೆ ಪರಿಚಯಸ್ಥರು ಇದ್ದಾರಲಾ ಅವ್ರು ಹೇಳ್ತಾ ಇರ್ತಾರೆ. ವಿರೋಧ ಪಕ್ಷದಲ್ಲಿ ಕುಳಿತು ಯಾರಾದರೂ ಸರಿಯಾಗಿ ಕೆಲಸ ಮಾಡುವವರು ಇದ್ದರೆ ಅದು ಕುಮಾರಸ್ವಾಮಿ. ಅದಕ್ಕಾಗಿ ಕುರ್ಚಿಯನ್ನು ಖಾಲಿ ಬಿಟ್ಟಿದ್ದಾರೆ. ಅಲ್ಲಿವರೆಗೂ ನೀವು ತಾಳ್ಮೆಯಿಂದ ಇರಿ ಎಂದು ಜಿ ಟಿ ದೇವೇಗೌಡರ ಕಾಲೆಳೆದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

Download Eedina App Android / iOS

X