ಅದಾನಿಯನ್ನು ಬಿಜೆಪಿ, ಅಂಧಭಕ್ತರು ಯಾಕೆ ಸಮರ್ಥಿಸುತ್ತಿದ್ದಾರೆ: ಪ್ರಿಯಾಂಕ್ ಖರ್ಗೆ

Date:

Advertisements

ಅದಾನಿ ವಿರುದ್ಧ ಅಮೆರಿಕ ನ್ಯಾಯಾಲಯ ಭ್ರಷ್ಟಾಚಾರ ಆರೋಪ ಮಾಡಿದೆ. ಆದರೆ, ಈ ವಿಚಾರದಲ್ಲಿ ಬಿಜೆಪಿ ಮತ್ತು ಅದರ ಕಾರ್ಯಕರ್ತರು ಅದಾನಿ ಪರವಾಗಿ ನಿಂತಿದ್ದಾರೆ. ಅದಾನಿ ಗ್ರೂಪ್‌ಅನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಅದಾನಿ ವಿರುದ್ಧದ ಭ್ರಷ್ಟಾಚಾರ ಆರೋಪದಲ್ಲಿ ಬಿಜೆಪಿಯ ನಡೆಯ ಬಗ್ಗೆ ಸಚಿವ ಪ್ರಿಯಾಂಕ್‌ ಖರ್ಗೆ ಲೇವಡಿ ಮಾಡಿದ್ದಾರೆ.

‘ಎಕ್ಸ್‌’ನಲ್ಲಿ ಟ್ವೀಟ್ ಮಾಡಿರುವ ಪ್ರಿಯಾಂಕ್‌ ಖರ್ಗೆ, “ಅದಾನಿ ವಿರುದ್ಧ ಅಮೇರಿಕಾ ನ್ಯಾಯಾಲಯ ಮಾಡಿರುವ ಭ್ರಷ್ಟಾಚಾರದ ಆರೋಪದ ವಿಚಾರದಲ್ಲಿಬಿಜೆಪಿ ಮತ್ತು ಅಂಧಭಕ್ತರು ಯಾಕೆ ಸಂವೇಶದನಾಶೀಲರಂತೆ ವರ್ತಿಸುತ್ತಿದ್ದಾರೆ. ಯಾಕೆ ಅದಾನಿ ಗ್ರೂಪ್‌ಅನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ” ಎಂದು ಪ್ರಶ್ನಿಸಿದ್ದಾರೆ.

ಇದೇ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಚಿವ ಸಂತೋಷ್‌ ಲಾಡ್‌, “ಅದಾನಿಗೂ ಬಿಜೆಪಿಗೂ ಏನು ಸಂಬಂಧ. ಭ್ರಷ್ಟಾಚಾರ ಪ್ರಕರಣದಲ್ಲಿ ಅದಾನಿಯನ್ನು ಅರೆಸ್ಟ್‌ ಮಾಡಲು ಅಮೆರಿಕ ನ್ಯಾಯಾಲಯ ಹೇಳಿದೆ. ಆದರೆ, ಅದಾನಿಯನ್ನು ಬಿಜೆಪಿಗರು ಸಮರ್ಥಿಸಿಕೊಳ್ಳುತ್ತಿದ್ದಾರೆ. ಅದಾನಿ ವಿಚಾರದಲ್ಲಿ ಅಮೆರಿಕದ ಉದ್ಯಮಿಗೆ ಬಿಜೆಪಿಗರು ಯಾಕೆ ಉತ್ತರಿಸುತ್ತಿದ್ದಾರೆ. ಬಿಜೆಪಿ ಸರ್ಕಾರ ಅದಾನಿಗೆ ಗುಂಡಾ ಗುತ್ತಿಗೆ ಕೊಡುತ್ತಿರುವುದರಿಂದಲೇ ಅದಾನಿ ಆ ಮಟ್ಟಿಗೆ ಬೆಳೆಯುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

Advertisements

ನವೆಂಬರ್ 20 ರಂದು ಅಮೆರಿಕದ ನ್ಯೂಯಾರ್ಕ್‌ ಪೂರ್ವ ಜಿಲ್ಲೆಯ ನ್ಯಾಯಾಲಯದಲ್ಲಿ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಸೇರಿ ಏಳು ಮಂದಿ ವಿರುದ್ಧ ಅಂಚ ಮತ್ತು ವಂಚನೆ ಪ್ರಕರಣ ದಾಖಲಾಗಿದೆ. ಸೌರ ವಿದ್ಯುತ್ ಒಪ್ಪಂದಗಳಿಗೆ ಅನುಕೂಲಕರ ಷರತ್ತುಗಳನ್ನು ವಿಧಿಸಲು ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ ಅದಾನಿ 2,019 ಕೋಟಿ ರೂ. ಲಂಚ ನೀಡಿದ್ದಾರೆ. ಈ ಹಣವನ್ನು ಅಮೆರಿಕದ ಹೂಡಿಕೆದಾರರಿಗೆ ಸುಳ್ಳು ಹೇಳಿ ಸಂಗ್ರಹಿಸಿದ್ದಾರೆ. ಸುಳ್ಳು ಹೇಳುವ ಮೂಲಕ ಅಮೆರಿಕ ಉದ್ಯಮಿಗಳಿಗೆ ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಮುಂದಿನ 20 ವರ್ಷಗಳಲ್ಲಿ ಸುಮಾರು 17,000 ಕೋಟಿ ರೂ. ಲಾಭ ದೊರೆಯುವ ಸೌರ ವಿದ್ಯುತ್‌ ಉತ್ಪಾದನಾ ಘಟಕ ಸ್ಥಾಪಿಸಲು ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ ಅದಾನಿ ಲಂಚ ನೀಡಿದ್ದಾರೆ ಎಂದು ಅಮೆರಿಕ ಅರೋಪಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

ಬಿಹಾರದಲ್ಲಿ ಒಂದು ಮತವನ್ನೂ ಕದಿಯಲು ನಾವು ಬಿಡಲ್ಲ: ರಾಹುಲ್ ಗಾಂಧಿ

ಮತಗಳನ್ನು ಕದಿಯಲು ಚುನಾವಣಾ ಆಯೋಗ ಮತ್ತು ಬಿಜೆಪಿ ಪಾಲುದಾರಿಕೆ ಹೊಂದಿದೆ ಎಂದು...

Download Eedina App Android / iOS

X