ತಪ್ಪೇ ಮಾಡದ ಮೇಲೆ ಭಜರಂಗದಳಕ್ಕೆ ನಿಷೇಧದ ಆತಂಕ ಏಕೆ: ಗೃಹ ಸಚಿವ ಪರಮೇಶ್ವರ್ ಪ್ರಶ್ನೆ

Date:

  • ಭಜರಂಗದಳ ನಿಷೇಧದ ಬಗ್ಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಗೃಹಸಚಿವ
  • ಕಾನೂನುಭಂಗ ಮಾಡುವ ಸಂಘಟನೆಗಳ ನಿಷೇಧ ಖಾತರಿ ಎಂದ ಸಚಿವರು

ರಾಜ್ಯದಲ್ಲಿ ಕಾನೂನು ಭಂಗ ಮಾಡುವ ಹಾಗೂ ಸಮಾಜದ ಶಾಂತಿ ಕದಡುವ ಸಂಘಟನೆಗಳ ನಿಷೇಧ ಮಾಡುವುದರಲ್ಲಿ ಎರಡು ಮಾತಿಲ್ಲ, ಈ ಮಾತು ಭಜರಂಗದಳಕ್ಕೂ ಅನ್ವಯಿಸುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದರು.

ವಿಧಾನಸೌಧದಲ್ಲಿ ತಮ್ಮ ಕೊಠಡಿ ಪೂಜೆ ನೆರವೇರಿಸಿ, ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಜರಂಗದಳದವರಿಗೆ ತಮ್ಮ ಸಂಘಟನೆ ನಿಷೇಧದ ಬಗ್ಗೆ ಅಷ್ಟೇಕೆ ಆತಂಕ ಎಂದರು.

ನಾನು ನಮ್ಮ ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಿರುವ ವಿಚಾರವನ್ನು ಅವರು ಸರಿಯಾಗಿ ನೋಡಿ, ಓದಿ ತಿಳಿದುಕೊಳ್ಳಬೇಕು. ನಾವೆಲ್ಲೂ ಆ ಸಂಘಟನೆಯನ್ನು ಬ್ಯಾನ್ ಮಾಡುವುದಾಗಿ ಹೇಳಿಲ್ಲ.

ಯಾರು ಸಮಾಜದ ಶಾಂತಿಯನ್ನ ಕದಡುತ್ತಾರೆ, ಅವರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದೇವೆ. ಹೀಗಿರುವಾಗ ಅವರು ಆ ಕಾರ್ಯ ಮಾಡುವುದಿಲ್ಲ ಎಂದಾದ ಮೇಲೆ ಅವರಿಗೆ ನಿಷೇಧದ ಬಗ್ಗೆ ಚಿಂತೆ ಯಾಕೆ ಎಂದ ಅವರು, ಈ ವಿಚಾರ ಅವರಿಗೆ ಅರ್ಥವಾದರೆ ಸಾಕು ಎಂದರು.

ಈ ಮಾತುಕತೆಗೂ ಮುನ್ನ ತಮ್ಮ ಕಚೇರಿ ಪೂಜೆ ವಿಚಾರದಲ್ಲಿನ ಪ್ರಶ್ನೆಗಳಿಗೆ ಉತ್ತರಿಸಿದ ಪರಮೇಶ್ವರ್, ನಮ್ಮ ಕಚೇರಿಯ ಪೂಜೆ ಮಾಡಿದ್ದೇವೆ, ಅನೇಕ ಜನ ಇದಕ್ಕೆ ಟೀಕೆ-ಟಿಪ್ಪಣೆ ಮಾಡಬಹುದು. ದೇವರ ಹೆಸರಲ್ಲಿ ಪ್ರಮಾಣ ವಚನ ತೆಗೆದುಕೊಂಡಿದ್ದೇವೆ. ಅದರಂತೆ ದೇವರನ್ನ ನೆನೆಸಿಕೊಂಡು ಕಚೇರಿ ಪೂಜೆ ಮಾಡಿದ್ದೇವೆ, ಇದು ನಮ್ಮೆಲ್ಲರಿಗೂ ಶಕ್ತಿ ಕೊಡುವಂತಹ ವಿಚಾರ ಎಂದರು.

ಈ ಸುದ್ದಿ ಓದಿದ್ದೀರಾ?:‌ ಖಾತೆ ಮರು ಹಂಚಿಕೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ತಮ್ಮ ಇಲಾಖೆ ಮತ್ತು ಜವಾಬ್ದಾರಿ ಕುರಿತು ಅಭಿಪ್ರಾಯ ಹಂಚಿಕೊಂಡ ಗೃಹ ಸಚಿವರು, ಪೊಲೀಸ್ ಇಲಾಖೆ ಶಿಸ್ತಿನ ಇಲಾಖೆ,‌ ಪೊಲೀಸ್ ಇಲಾಖೆಯಲ್ಲಿ ಸಲ್ಯೂಟ್ ಸಿಗುತ್ತದೆ, ಒದೆನೂ ಸಿಗುತ್ತದೆ, ಮುಂದುವರಿದು ಗುಂಡು ಹಾರಿಸೋದು ಇರುತ್ತದೆ. ಆದರೆ ಯಾರಿಗೆ ಯಾವುದು ಬೇಕೋ ತೀರ್ಮಾನ ಮಾಡಿ ಎಂದರು.

ಸರ್ಕಾರದ ಮುಖವಾಣಿಯಲ್ಲಿರುವ ಗೃಹ ಖಾತೆ ಬಹಳ ಪ್ರಮುಖ ಖಾತೆ. ಇಲ್ಲಿ ಏನೇ ವಿದ್ಯಮಾನಗಳು ನಡೆದರೂ ಅದು ಜನತೆಯ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಹಾಗಾಗಿ ಇಲ್ಲಿಂದ ಒಳ್ಳೆಯ ಕೆಲಸಗಳಾಗಲಿ ಎಂದು ಆಶಿಸುತ್ತೇನೆ. ಹಾಗೆಯೇ ರಾಜ್ಯದ ಕಾನೂನು ವ್ಯವಸ್ಥೆಯನ್ನ ಮತ್ತಷ್ಟು ಬಲಗೊಳಿಸುವ ಕಾರ್ಯವನ್ನೂ ಮಾಡುತ್ತೇನೆ. ಎಂದು ಹೇಳಿದರು.

ಇನ್ನು ಗ್ಯಾರಂಟಿ ಯೋಜನೆ ಬಗ್ಗೆ ವಿವರ ನೀಡಿದ ಅವರು, ಕ್ಯಾಬಿನೆಟ್ ನಲ್ಲಿ ಗ್ಯಾರಂಟಿ ಯೋಜನೆ ಬಗ್ಗೆ ಬ್ರೀಫ್ ಮಾಡ್ತಿವಿ,‌ ಇನ್ನೆರಡು ದಿನ ಕಾದು ನೋಡಿ ಎಂದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಡಗು | ಚಿರತೆ ದಾಳಿಗೆ ಕುರಿ ಬಲಿ; ವಸತಿ ಶಾಲೆಯ ಮಕ್ಕಳಲ್ಲಿ ಆತಂಕ

ಸುಂಟಿಕೊಪ್ಪ ಕೊಡಗು ಜಿಲ್ಲೆಯ ಸುಂಟಿಕೊಪ್ಪದ ಸಮೀಪದ ಗರಂಗದೂರಿನ ಮೊರಾರ್ಜಿ ದೇಸಾಯಿ ವಸತಿ...

ಬೆಂಗಳೂರು | ಕನ್ನಡಿಗರ ಬಗ್ಗೆ ಅವಹೇಳನಕಾರಿ ಬರಹ; ಪಶ್ಚಿಮ ಬಂಗಾಳ ಮೂಲದ ಯುವಕನ ಬಂಧನ

ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್‌ನಲ್ಲಿ ಬೆಂಗಳೂರು ಹಾಗೂ ಕನ್ನಡಿಗರ ಬಗ್ಗೆ ಅವಹೇಳನಕಾರಿ ಬರಹ...

ನಮ್ಮದು ಜಾತ್ಯತೀತ ಸರ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

ನಮ್ಮದು ಜಾತ್ಯತೀತ ಸರ್ಕಾರ. ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮೀ ಯೋಜನೆಗಳನ್ನು ಜಾತಿ...

ಟರ್ಕಿ ಸಂಸತ್‌ನ ಬಳಿ ಆತ್ಮಹತ್ಯಾ ಬಾಂಬ್ ದಾಳಿ: ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಗಾಯ

ಟರ್ಕಿ ದೇಶದ ಸಂಸತ್‌ 'ಅಂಕಾರ' ಬಳಿ ಇಂದು ಬೆಳಗ್ಗೆ ಆತ್ಮಹತ್ಯಾ ಬಾಂಬ್...