ಕೋಮು ಹಿಂಸಾಚಾರ ಬಗ್ಗೆ ಪ್ರಧಾನಿ ಮೋದಿ ಮೌನ ಪ್ರಶ್ನಿಸಿದ ಕಪಿಲ್‌ ಸಿಬಲ್‌

Date:

Advertisements
  • ಹಿಂಸಾಚಾರದ ಬಗ್ಗೆ ಎಲ್ಲ ಪಕ್ಷಗಳು ಮಾತನಾಡಬೇಕು ಎಂದ ಕಪಿಲ್ ಸಿಬಲ್
  • ಎರಡು ರಾಜ್ಯಗಳಲ್ಲಿನ ಕೋಮು ಹಿಂಸಾಚಾರ ಸಂಬಂಧಿ 45 ಮಂದಿ ಬಂಧನ

ಹಿರಿಯ ನ್ಯಾಯವಾದಿ ಹಾಗೂ ರಾಜ್ಯಸಭಾ ಸದಸ್ಯ ಕಪಿಲ್‌ ಸಿಬಲ್‌ ಅವರು ಬಿಹಾರ ಹಾಗೂ ಪಶ್ಚಿಮ ಬಂಗಾಳದಲ್ಲಿ ಕೆಲವು ದಿನಗಳ ಹಿಂದೆ ನಡೆದ ಕೋಮು ಹಿಂಸಾಚಾರದ ಬಗ್ಗೆ ಕಿಡಿಕಾರಿದ್ದಾರೆ.

ರಾಮ ನವಮಿ ಸಂದರ್ಭ ಎರಡು ರಾಜ್ಯಗಳಲ್ಲಿ ನಡೆದ ಕೋಮು ಹಿಂಸಾಚಾರದ ಬಗ್ಗೆ ಕ್ರಮ ತೆಗೆದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಏಕೆ ಮೌನ ತಾಳಿದ್ದಾರೆ ಎಂದು ಸಿಬಲ್ ಪ್ರಶ್ನಿಸಿದ್ದಾರೆ.

“ಮುಂಬರುವ 2024ರ ಸಾರ್ವತ್ರಿಕ ಚುನಾವಣೆಯು ಈ ಹಿಂಸಾಚಾರಕ್ಕೆ ಕಾರಣವಾಗದಿರಲಿ” ಎಂದು ಮಾಧ್ಯಮವೊಂದಕ್ಕೆ ನೀಡಿದ್ದ ಹೇಳಿಕೆಯೊಂದರಲ್ಲಿ ಸಿಬಲ್ ತಿಳಿಸಿದ್ದಾರೆ.

Advertisements

“ಉದ್ರಿಕ್ತ ಜನರು ಪಶ್ಚಿಮ ಬಂಗಾಳ ಮತ್ತು ಬಿಹಾರದಲ್ಲಿ ಬೆಂಕಿ ಹಚ್ಚುವುದನ್ನು ನಿಲ್ಲಿಸಬೇಕು. ಕೋಮು ದ್ವೇಷದ ವಿಷ ಬೀಜವನ್ನು ಬಿತ್ತುವ ಕೆಲಸ ಮಾಡಬಾರದು. ಇದರಲ್ಲಿ ಸಾಮಾನ್ಯ ವ್ಯಕ್ತಿ ಬಲಿಪಶುವಾಗುತ್ತಾನೆ. ಇದು ರಾಜಕಾರಣಿಗಳಿಗೆ ಅವರ ಕಾರ್ಯತಂತ್ರ ರೂಪಿಸಿಕೊಳ್ಳಲು ಸಹಕಾರಿಯಾಗುತ್ತವೆ” ಎಂದು ಕಪಿಲ್ ಸಿಬಲ್ ಸಲಹೆ ನೀಡಿದ್ದಾರೆ.

“ಈ ಹಿಂಸಾಚಾರ ವಿಷಯದ ಬಗ್ಗೆ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಮಾತನಾಡಬೇಕು. ಇದನ್ನು ಖಂಡಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಆದರೆ ಈ ಹಿಂಸಾಚಾರದ ಬಗ್ಗೆ ಇಬ್ಬರೂ ಮಾತನಾಡದಿರುವುದು ದುರದೃಷ್ಟವಾಗಿದೆ. ಈ ವಿಚಾರ ಒಂದು ಪಕ್ಷಕ್ಕೆ ಸಂಬಂಧಿಸಿಲ್ಲ. ಈ ಹಿಂಸಾತ್ಮಕ ಪರಿಸರದಿಂದ ದೂರ ಉಳಿದು ದೇಶದ ಅಭಿವೃದ್ಧಿಯತ್ತ ಗಮನ ಹರಿಸಬೇಕಿದೆ” ಎಂದು ಸಿಬಲ್ ತಿಳಿಸಿದರು.

ಗೃಹ ಸಚಿವ ಅಮಿತ್ ಶಾ ಅವರು ಎರಡು ರಾಜ್ಯಗಳ ಹಿಂಸಾಚಾರದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ರಾಜ್ಯಪಾಲರಾದ ರಾಜೇಂದ್ರ ವಿಶ್ವನಾಥ ಅರ್ಲೇಕರ್ ಅವರಿಗೆ ಸೂಚಿಸಿದ್ದಾರೆ. ಆದರೆ ಇಂತಹ ಕಾಳಜಿ ಮಾತ್ರ ಸಾಲುವುದಿಲ್ಲ ಎಂದು ಕಪಿಲ್‌ ಸಿಬಲ್ ಹೇಳಿದರು.

ಈ ಸುದ್ದಿ ಓದಿದ್ದೀರಾ? ‌ವಿಪಕ್ಷಗಳ ಒಗ್ಗೂಡಿಸಲು ʻಸಾಮಾಜಿಕ ನ್ಯಾಯ ಸಮ್ಮೇಳನʼ; ಸ್ಟಾಲಿನ್ ನೇತೃತ್ವ

ಬಿಹಾರದ ಬಿಹಾರ್ ಶರೀಫ್ ಮತ್ತು ಸಸಾರಾಮ್ ನಗರಗಳಲ್ಲಿ ರಾಮ ನವಮಿ ಉತ್ಸವದ ಆಚರಣೆ ವೇಳೆ ನಡೆದ ಕೋಮು ಹಿಂಸಾಚಾರ ಸಂಬಂಧ ಪೊಲೀಸರು ಇದುವರೆಗೆ 45 ಜನರನ್ನು ಬಂಧಿಸಿದ್ದಾರೆ. ಅಪಾರ ಹಾನಿ ಉಂಟಾಗಿತ್ತು. ಅಪಾರ ಪ್ರಮಾಣದ ಹಾನಿ ಉಂಟಾಗಿತ್ತು. ಅನೇಕರು ಗಾಯಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೀರತ್ ಗಡಿಯಾರ ಗೋಪುರ ಹತ್ತಿ ವಿಡಿಯೋ ಮಾಡುವ ಸಾಹಸ ಮಾಡಿದ ‘ಸ್ಪೈಡರ್‌ಮ್ಯಾನ್’ ಬಂಧನ!

'ಸ್ಪೈಡರ್‌ಮ್ಯಾನ್' ವೇಷಭೂಷಣವನ್ನು ಧರಿಸಿ ಮೀರತ್‌ನ ಐತಿಹಾಸಿಕ ಗಡಿಯಾರ ಗೋಪುರವನ್ನು ಹತ್ತಿ ಅಪಾಯಕಾರಿ...

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

Download Eedina App Android / iOS

X