ಜಾರ್ಖಂಡ್‌ | ವಿಧವಾ ಪುನರ್ವಿವಾಹ ಯೋಜನೆ ಪ್ರಾರಂಭ; 2 ಲಕ್ಷ ರೂ. ಪ್ರೋತ್ಸಾಹ ಧನ!

Date:

ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೆನ್ ಅವರು ವಿಧವಾ ಪುನರ್ವಿವಾಹ ಪ್ರೋತ್ಸಾಧನ ಯೋಜನೆಗೆ ಬುಧವಾರ ಚಾಲನೆ ನೀಡಿದ್ದಾರೆ. ಈ ಯೋಜನೆ ಅಡಿಯಲ್ಲಿ ಪತಿಯ ಮರಣದ ನಂತರ ಮತ್ತೆ ವಿವಾಹವಾಗಲು ನಿರ್ಧರಿಸುವ ಮಹಿಳೆಯರಿಗೆ ಸರ್ಕಾರದಿಂದ 2 ಲಕ್ಷ ರೂಪಾಯಿಗಳ ಪ್ರೋತ್ಸಾಹ ಧನ ನೀಡಲಾಗುತ್ತದೆ.

ಅಧಿಕಾರಿಗಳ ಪ್ರಕಾರ, ಈ ಯೋಜನೆಯ ಫಲಾನುಭವಿಗಳು ಮರು ವಿವಾಹವಾಗುವ ವಯಸ್ಸಿವರಾಗಿರಬೇಕು. ಹಾಗೆಯೇ ಸರ್ಕಾರಿ ಉದ್ಯೋಗಿ, ಪಿಂಚಣಿದಾರರು ಮತ್ತು ಆದಾಯ ತೆರಿಗೆ ಪಾವತಿದಾರರು ಆಗಿರಬಾರದು. ಈ ಯೋಜನೆಯ ಲಾಭವನ್ನು ಪಡೆಯಲು ಫಲಾನುಭವಿಗಳು ಮರು ವಿವಾಹವಾದ ಒಂದು ವರ್ಷದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಪತಿಯ ಮರಣ ಪ್ರಮಾಣಪತ್ರವನ್ನೂ ಸಲ್ಲಿಸಬೇಕು.

ಮಕ್ಕಳ ಅಭಿವೃದ್ಧಿ ಮತ್ತು ಸಮಾಜ ಕಲ್ಯಾಣಾ ಇಲಾಖೆ ಅಧಿಕಾರಿ ಮನೋಜ್ ಕುಮಾರ್, “ಪತಿಯ ಮರಣದ ಬಳಿಕ ಸಮಾಜದಲ್ಲಿ ಒಬ್ಬಂಟಿಯಾಗಿ ಜೀವಿಸುವ ಮಹಿಳೆಯು ಅಸಹಾಯಕರಾಗಿರುತ್ತಾರೆ ಮತ್ತು ಆ ಮಹಿಳೆಯರಿಗೆ ಹೊಸ ಜೀವನ ನಡೆಸುವ ಬಯಕೆ ಇರುತ್ತದೆ. ಈ ರೀತಿ ಮರು ವಿವಾಹವಾಗಲು ನಿರ್ಧಾರ ಮಾಡುವ ಮಹಿಳೆಯರಿಗೆ ರಾಜ್ಯ ಸರ್ಕಾರವು ಹಣಕಾಸು ಸಹಾಯ ಮಾಡಲಿದೆ,” ಎಂದು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಮಹಿಳಾ ಸಬಲೀಕರಣ ಮಾಡುವ ನಿಟ್ಟಿನಲ್ಲಿ ಈ ವಿಧವಾ ಪುನರ್ವಿವಾಹ ಪ್ರೋತ್ಸಾಹ ಯೋಜನೆಯನ್ನು ಮುಖ್ಯಮಂತ್ರಿ ಚಂಪೈ ಸೊರೆನ್ ಬುಧವಾರ ಆರಂಭಿಸಿದ್ದಾರೆ. ಈ ಯೋಜನೆಯಡಿಯಲ್ಲಿ ಎರಡು ಲಕ್ಷ ರೂಪಾಯಿ ಪ್ರೋತ್ಸಾಹ ಧನ ನೀಡಲಾಗುತ್ತದೆ. ಈ ಯೋಜನೆಯು ವಿಧವೆಯರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ ಮತ್ತು ಮಹಿಳೆ ಪುನರ್ವಿವಾಹವಾಗುವ ವಿಚಾರದಲ್ಲಿ ಸಮಾಜದಲ್ಲಿರುವ ಅಭಿಪ್ರಾಯವನ್ನು ಬದಲಾಯಿಸುತ್ತದೆ,” ಎಂದು ಹೇಳಿದರು.

ಬುಧವಾರ ರಾಂಚಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಒಟ್ಟು ಏಳು ಫಲಾನುಭವಿಗಳಿಗೆ ತಲಾ ಎರಡು ಲಕ್ಷ ರೂಪಾಯಿಯಂತೆ 14 ಲಕ್ಷ ರೂಪಾಯಿಯನ್ನು ಹಂಚಿಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಇನ್ನು ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಚಂಪೈ ಸೊರೆನ್ ಅಂಗನವಾಡಿ ಕಾರ್ಯಕರ್ತರಿಗೆ 9,500 ರೂಪಾಯಿ ಮತ್ತು ಸಹಾಯಕರಿಗೆ 4750 ರೂಪಾಯಿ ಮಾಸಿಕ ಭತ್ಯೆಯನ್ನು ಘೋಷಿಸಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ವಿಧವಾ ಪುನರ್ವಿವಾಹ ಯೋಜನೆಯಿದ್ದು, ಈ ಯೋಜನೆಯಡಿಯಲ್ಲಿ 25, 000 ರೂಪಾಯಿ ಸಹಾಯಧನ ನೀಡಲಾಗುತ್ತದೆ. ಈ ಪೈಕಿ 10,000 ರೂಪಾಯಿ ವಿವಾಹ ಸಂದರ್ಭ ನೀಡಿದರೆ, 15,000 ರೂಪಾಯಿ ಪತಿ ಪತ್ನಿಯ ಹೆಸರಲ್ಲಿ ಐದು ವರ್ಷಗಳ ಕಾಲಕ್ಕೆ ಎಫ್‌ಡಿ ಮಾಡಲಾಗುತ್ತದೆ.

ತಮಿಳುನಾಡಿನಲ್ಲಿ ವಿಧವಾ ಪುನರ್ವಿವಾಹ ಯೋಜನೆಯಡಿಯಲ್ಲಿ ಮರು ವಿವಾಹವಾದ ಮಹಿಳೆಯರಿಗೆ 25,000 ರೂಪಾಯಿ ಸಹಾಯಧನ ನೀಡಲಾಗುತ್ತದೆ. ಈ ಪೈಕಿ 15,000 ರೂಪಾಯಿ ನೇರವಾಗಿ ವರ್ಗಾಯಿಸಿದರೆ, ಉಳಿದ 10,000 ರೂಪಾಯಿಯ ಮೊತ್ತವನ್ನು ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರ (ಎನ್‌ಎಸ್‌ಸಿ) ಹೂಡಿಕೆ ಖಾತೆ ಮಾಡಿಸಿಕೊಡಲಾಗುತ್ತದೆ. ಜೊತೆಗೆ ನಾಲ್ಕು ಗ್ರಾಂ ಚಿನ್ನವನ್ನು ನೀಡಲಾಗುತ್ತದೆ.

ಕೇರಳದಲ್ಲಿ 18ರಿಂದ 50 ವರ್ಷದೊಳಗಿನ ವಿಧವೆ ಅಥವಾ ವಿಚ್ಛೇದನ ಪಡೆದ ಮಹಿಳೆ ಮರು ವಿವಾಹವಾದರೆ 25000 ರೂಪಾಯಿ ಪ್ರೋತ್ಸಾಹಧನ ನೀಡಲಾಗುತ್ತದೆ. ಆದರೆ ಜಾರ್ಖಂಡ್‌ನಲ್ಲಿ ಎರಡು ಲಕ್ಷ ರೂಪಾಯಿಯನ್ನು ಪ್ರೋತ್ಸಾಹ ಧನವಾಗಿ ನೀಡಲಾಗುತ್ತಿದ್ದು, ದೇಶದಲ್ಲೇ ಅಧಿಕ ಮೊತ್ತ ಪ್ರೋತ್ಸಾಹ ಧನವಾಗಿ ನೀಡುವ ದೇಶ ಎಂದು ಹೇಳಬಹುದು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ಪೆನ್‌ಡ್ರೈವ್‌ | ಪ್ರಜ್ವಲ್ ರೇವಣ್ಣ ದೇಶಬಿಟ್ಟು ಓಡಿ ಹೋಗಲು ಮೋದಿ ಸಹಾಯ ಮಾಡಿದರಾ?; ರಾಷ್ಟ್ರಮಟ್ಟದಲ್ಲಿ ಆಕ್ರೋಶ

ಹಾಸನ ಪೆನ್‌ಡ್ರೈವ್‌ ಪ್ರಕರಣವು ರಾಜ್ಯದಲ್ಲಿ ಆತಂಕ ಸೃಷ್ಟಿಸಿದೆ. ಪ್ರಕರಣವನ್ನು ಎಸ್‌ಐಟಿ ತನಿಖೆಗೆ...

ಮೋದಿ ಹೇಳಿಕೆ ಟೀಕಿಸಿದ ಬಿಜೆಪಿಯ ಬಿಕಾನೇರ್ ಅಲ್ಪಸಂಖ್ಯಾತ ವಿಭಾಗದ ಮಾಜಿ ಅಧ್ಯಕ್ಷರ ಬಂಧನ!

ರಾಜಸ್ಥಾನದ ಬನ್ಸ್ವಾರಾದಲ್ಲಿ ನಡೆದ ರ್‍ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮುಸ್ಲಿಮರ...

ಮೀಸಲಾತಿ ರದ್ದು ಮಾಡುವುದೇ ಬಿಜೆಪಿ ಗುರಿ; ಅದರ ನಾಯಕರ ಹೇಳಿಕೆಗಳಿಂದಲೇ ಸ್ಪಷ್ಟ: ರಾಹುಲ್ ಗಾಂಧಿ

ಸಂವಿಧಾನವನ್ನು ಬದಲಿಸುವ ಮೂಲಕ ಪ್ರಜಾಪ್ರಭುತ್ವವನ್ನು ನಾಶಪಡಿಸುವುದು ಮತ್ತು ದಲಿತರು, ಹಿಂದುಳಿದ ವರ್ಗಗಳು...

‘ಪ್ರಧಾನಿ ಮೋದಿಗೆ ಗುಜರಾತ್‌ನಲ್ಲಿ ಮುಸ್ಲಿಂ ಒಬಿಸಿ ಮೀಸಲಾತಿ ಓಕೆ, ಇತರೆಡೆ ಮಾತ್ರ ಬೇಡ’

ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮುಸ್ಲಿಂ ಒಬಿಸಿ ಮೀಸಲಾತಿ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ....