ಚನ್ನಪಟ್ಟಣ ಕ್ಷೇತ್ರ | ಸೈನಿಕನ ಮಣಿಸಿ ಮರಳಿ ಕಿಂಗ್ ಆಗುವರೇ ಕುಮಾರಸ್ವಾಮಿ?

Date:

ರಾಜ್ಯದ ಹೈ ವೋಲ್ಟೇಜ್ ಚುನಾವಣಾ ಕಣಗಳ ಸಾಲಿನಲ್ಲಿ ರಾಮನಗರ ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರವೂ ಒಂದು. ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಸಚಿವರ ನಡುವೆ ಪಕ್ಷ ಹಾಗೂ ವೈಯಕ್ತಿಕ ನೆಲೆಗಟ್ಟಿನಲ್ಲಿ ನಡೆಯುತ್ತಿರುವ ಈ ಚುನಾವಣೆ ನೇರ ಹಣಾಹಣಿಯನ್ನು ನಿರೀಕ್ಷಿಸುತ್ತಿದೆ.

- Advertisement -

ವಿ.ವೆಂಕಟಪ್ಪ, ಡಿ.ಟಿ.ರಾಮು, ಬಿ.ಜೆ ಲಿಂಗೇಗೌಡ, ಎಂ ವರದೇಗೌಡ , ಸಾದತ್ ಆಲಿಖಾನ್ ಸೇರಿದಂತೆ ರಾಜಕೀಯ ರಂಗದಲ್ಲಿ ಗುರುತು ಮೂಡಿಸಿರುವ ಈ ಕ್ಷೇತ್ರದಲ್ಲೀಗ ಪ್ರತಿಷ್ಠೆಗಾಗಿಯೇ ಚುನಾವಣೆ ನಡೆಯುತ್ತಿದೆ. ಆ ಮಟ್ಟಿಗೆ ಕ್ಷೇತ್ರವನ್ನು ಹಾಲಿ ಶಾಸಕರಾದ ಎಚ್ ಡಿ ಕುಮಾರಸ್ವಾಮಿ, ಮಾಜಿ ಸಚಿವ ಸಿ ಪಿ ಯೋಗೇಶ್ವರ್ ಬದಲಾಯಿಸಿಬಿಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳ ನೇರ ಹಣಾಹಣಿ ಇರುವ ಈ ಕ್ಷೇತ್ರದೊಳಗೆ ಕಾಂಗ್ರೆಸ್ ಆಟಕ್ಕುಂಟು ಲೆಕ್ಕಕ್ಕಿಲ್ಲದ ರೀತಿಯಲ್ಲಿದೆ. 2013ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಮಾಜಿ ಸಚಿವ ಎಚ್ ಎಂ ರೇವಣ್ಣ ಹೊರತುಪಡಿಸಿ ಇತ್ತೀಚಿನ ಚುನಾವಣೆಗಳಲ್ಲಿ ಕೈ ಪಕ್ಷ ಇಲ್ಲಿ ಸದ್ದನ್ನೇ ಮಾಡಿಲ್ಲ.

ಕುಮಾರಸ್ವಾಮಿಯವರಿಗೆ ಈ ಕ್ಷೇತ್ರ ಅದೃಷ್ಟದ ಕ್ಷೇತ್ರ. ಎರಡನೇ ಬಾರಿ ಮುಖ್ಯಮಂತ್ರಿಯಾಗುವ ಅವಕಾಶ ಕಲ್ಪಿಸಿದ ಕ್ಷೇತ್ರ ಇದೆನ್ನುವ ಕಾರಣಕ್ಕೆ ಚನ್ನಪಟ್ಟಣದ ಮೇಲೆ ಎಲ್ಲಿಲ್ಲದ ಅಕ್ಕರೆ. ಸದ್ಯದ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಲ್ಲಿ ಕುಮಾರಸ್ವಾಮಿಯವರ ಜೆಡಿಎಸ್ ಮೈಲುಗೈ ಸಾಧಿಸಿದೆ.

ಸಿ ಪಿ ಯೋಗೇಶ್ವರ್ ಕೂಡ ಕುಮಾರಸ್ವಾಮಿಯವರಂತೆಯೇ ವೈಯಕ್ತಿಕ ವರ್ಚಸ್ಸಿನ ಮೂಲಕ ಕ್ಷೇತ್ರದಲ್ಲಿ ಹೆಸರು ಗಳಿಸಿಕೊಂಡವರು. ಸಿ ಪಿ ಯೋಗೇಶ್ವರ್ ಮೊದಲ ಚುನಾವಣೆಯಲ್ಲಿ ಪಕ್ಷೇತರರಾಗಿ ಕಣಕ್ಕಿಳಿದು, ಅಲ್ಲಿಂದ ಮುಂದೆ ಪ್ರತಿ ಚುನಾವಣೆಯಲ್ಲೂ ಒಂದೊಂದು ಪಕ್ಷದಿಂದ ಸ್ವರ್ಧಿಸಿ ಒಂದು ಬಾರಿ ಸೋತು, ಮಿಕ್ಕಂತೆ ಗೆಲುವು ಕಂಡವರು. ಬಿಜೆಪಿಯಿಂದ ಗೆದ್ದು ಮಂತ್ರಿ ಆದವರು.

ಚನ್ನಪಟ್ಟಣದಲ್ಲಿ ಇದ್ದೂ ಇಲ್ಲದಂತಿರುವ ಕಾಂಗ್ರೆಸ್ ಪಕ್ಷದಿಂದ ಈ ಬಾರಿ ಎಸ್ ಗಂಗಾಧರ್ ಕಣಕ್ಕಿಳಿದಿದ್ದಾರೆ. ಪಕ್ಷದ ಕಾರ್ಯಕರ್ತರು ಮತ್ತು ಸಾಂಪ್ರದಾಯಿಕ ಮತಬ್ಯಾಂಕ್ ಹೊಂದಿದ್ದರೂ ಗೆಲುವಿನ ದಡ ಸೇರಿಸುವುದು ಕಷ್ಟ ಎಂಬ ಮಾತಿದೆ.

ಜಂಪಿಂಗ್ ಸ್ಟಾರ್ ಎನ್ನುವ ಅನ್ವರ್ಥ ನಾಮ ಹೊಂದಿರುವ ಸಿ ಪಿ ಯೋಗೇಶ್ವರ್, ತಾಲೂಕಿನಲ್ಲಿ ಮಾಡಿರುವ ನೀರಾವರಿ ಯೋಜನೆಗಳಿಂದ ಗುರುತಿಸಿಕೊಂಡವರು. ತಮ್ಮದೇ ಅಭಿಮಾನಿ ಬಳಗ ಹಾಗೂ ಸ್ಥಳೀಯ ಮಟ್ಟದ ಕಾರ್ಯಕರ್ತರ ಬಲ ಹೊಂದಿರುವವರು. ಕೆರೆ ಅಭಿವೃದ್ದಿ ಹೊರತುಪಡಿಸಿ ಇನ್ನುಳಿದ ವಿಚಾರಗಳಲ್ಲಿ ಅಂತಹ ಸಾಧನೆ ಮಾಡದ ಕಾರಣ, ಕ್ಷೇತ್ರದ ಜನ ಅವರತ್ತ ಒಲವು ಕಳೆದುಕೊಂಡಿದ್ದಾರೆ. ಜೊತೆಗೆ ವ್ಯಕ್ತಿಗತ ವರ್ಚಸ್ಸಿದ್ದರೂ ಪಕ್ಷನಿಷ್ಠೆ ವಿಚಾರದಲ್ಲಿ ಬದ್ಧತೆ ಇಲ್ಲದಿರುವುದು ಅವರಿಗೆ ಹಿನ್ನೆಡೆಯಾಗಬಹುದೆಂದು ಅಂದಾಜಿಸಲಾಗಿದೆ.

ಇನ್ನು ಎಚ್ ಡಿ ಕುಮಾರಸ್ವಾಮಿ, ತಮ್ಮ 20 ತಿಂಗಳ ಅಧಿಕಾರಾವಧಿಯಲ್ಲಿ ರಾಜ್ಯದಲ್ಲಿ ಮಾಡಿದ ಕೆಲಸ, ಜೊತೆಗೆ ಕ್ಷೇತ್ರಕ್ಕೂ ಭರಪೂರ ಕೊಡುಗೆಗಳನ್ನು ಕೊಟ್ಟು ಕಾರಣದಿಂದಾಗಿ ಜನಮನ್ನಣೆ ಗಳಿಸಿಕೊಂಡಿದ್ದಾರೆ.ಜೊತೆಗೆ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎನ್ನುವ ವಿಶೇಷತೆ ಕ್ಷೇತ್ರದೊಳಗೂ ಸದ್ದು ಮಾಡುತ್ತಿದೆ.

ಈ ಬೆಳವಣಿಗೆಗಳು ಈ ಬಾರಿ ಕುಮಾರಸ್ವಾಮಿಯ ಗೆಲುವನ್ನು ನಿರಾಯಾಸವಾಗಿಸಲಿದೆ ಎನ್ನಲಾಗುತ್ತಿದೆ. ಕುಟುಂಬ ರಾಜಕಾರಣದಲ್ಲಿ ಕೆಲವೊಮ್ಮೆ ಕ್ಷೇತ್ರ ಮರೆಯುತ್ತಾರೆನ್ನುವ ಆರೋಪ ಬಿಟ್ಟರೆ ಇವರನ್ನು ಕಟ್ಟಿಹಾಕುವ ಬಲವಾದ ನೆಗಟಿವ್ ಕಾರಣಗಳಿಲ್ಲ.

ಹಿಂದಿನ ಚುನಾವಣೆಯಂತೆ ಈ ಬಾರಿಯೂ ಇಲ್ಲಿ ಜೆಡಿಎಸ್–ಬಿಜೆಪಿ ನಡುವೆ ನೇರ ಹಣಾಹಣಿ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಎಸ್ ಗಂಗಾಧರಯ್ಯನವರು ಗೆಲುವಿಗಿಂತ ಅಸ್ತಿತ್ವ ಉಳಿಸಿಕೊಳ್ಳುವುದಕ್ಕೆ ಹೋರಾಡಬೇಕಾಗಿದೆ.

ಕ್ಷೇತ್ರದ ಬಹುಪಾಲು ಜನ ಕುಮಾರಸ್ವಾಮಿ ಪರವೇ ಒಲವು ವ್ಯಕ್ತಪಡಿಸಿದ್ದಾರೆ. ಸಿಎಂ ಆಗಿದ್ದಾಗ ‘ಕ್ಷೇತ್ರಕ್ಕೆ ಕೋಟಿ, ಕೋಟಿ ಅನುದಾನ ತಂದು ಕೆಲಸ ಮಾಡಿಸಿದ್ದಾರೆ. ಇವರ ಸಮಯದಲ್ಲಿ ನನೆಗುದಿಗೆ ಬಿದ್ದಿದ್ದ ಕೆಲಸಗಳೂ ಆಗಿವೆ.

ಅವರು ರಾಜ್ಯದ ನಾಯಕರು. ಮುಖ್ಯಮಂತ್ರಿ ಅಭ್ಯರ್ಥಿ. ಹೀಗಾಗಿ ಕ್ಷೇತ್ರಕ್ಕೆ ಬರದಿದ್ದರೆ ಏನಂತೆ, ನಾವೇ ಅವರನ್ನು ಮತ್ತೆ ಗೆಲ್ಲಿಸಿಕೊಡುತ್ತೇವೆ’ ಎನ್ನುವುದು ಅವರ ಅಭಿಮಾನಿ ವಿನಯ್ ಅವರನ್ನೂ ಒಳಗೊಂಡಂತೆ ಹಲವರ ಮಾತು.

ಇನ್ನು ಹಲವರದು ಯೋಗೇಶ್ವರ್ ಕೆಲಸ ಶೈಲಿ ಕ್ಷೇತ್ರ ಬೆಳೆಸಲು ಸಹಕಾರಿಯಾಗತ್ತದೆ ಎನ್ನುವ ವಿಶ್ವಾಸ. ಅದಕ್ಕೆ ತಕ್ಕಂತೆ, ಅವರು ನಮ್ಮೂರಿನವರು, ಬೇಕಾದಾಗ ಕೈಗೆ ಸಿಗುತ್ತಾರೆ. ಅವರಿಂದ ನಾವು ಕೆಲಸ ಮಾಡಿಸಿಕೊಳ್ಳಬಹುದು. ಅದಕ್ಕಾಗಿ ಅವರನ್ನೇ ಗೆಲ್ಲಿಸಿಕೊಳ್ಳಬೇಕು ಎನ್ನುವ ವಾದವೂ ಇದೆ.

ಈ ಸುದ್ದಿ ಓದಿದ್ದೀರಾ? : ದೇವೇಗೌಡರ ಅದೃಷ್ಟದ ನೆಲ ರಾಮನಗದಲ್ಲಿ ಚಿಗುರೊಡೆಯುವುದೇ ನಿಖಿಲ್‌ ಕುಮಾರಸ್ವಾಮಿ ರಾಜಕೀಯ?

ಒಟ್ಟು 2.2 ಲಕ್ಷ ಮತದಾರರನ್ನು ಹೊಂದಿಕೊಂಡಿರುವ ಚನ್ನಪಟ್ಟಣ ಕ್ಷೇತ್ರದಲ್ಲಿ ಒಕ್ಕಲಿಗ ಸಮುದಾಯವೇ ನಿರ್ಣಾಯಕ. ಸಮುದಾಯದ ಒಲವು ಗಳಿಸಿದವರಿಗೆ ಗೆಲುವು ಸುಲಭ.

ಇದರ ಜೊತೆಗೆ ಉಳಿದ ಸಮುದಾಯಗಳ ಬೆಂಬಲ ಯಾರಿಗೆ ಎನ್ನುವುದರ ಮೇಲೆ, ಗೆಲುವು ನಿಶ್ಚಯವಾಗಲಿದೆ. ಅದರಲ್ಲೂ, ಮುಸ್ಲಿಂ ಹಾಗೂ ದಲಿತ ಮತದಾರರು ಸೋಲು-ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ.

ಅಂಕಿ ಸಂಖ್ಯೆಗಳ ಲೆಕ್ಕದಲ್ಲಿ ನೋಡುವುದಾದರೆ, ಒಕ್ಕಲಿಗರು 1,05,000, ಪರಿಶಿಷ್ಟ ಜಾತಿಯ 40,000, ಮುಸ್ಲಿಂ ಸಮುದಾಯದ 35,000, ಲಿಂಗಾಯತರ 11,000 ಹಾಗೂ ಕುರುಬರು 8,000 ಇದ್ದರೆ, ಇತರೆ ವರ್ಗದ 31,000 ಮತಗಳಿವೆ. ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚಿರುವುದು ಈ ಕ್ಷೇತ್ರದ ವೈಶಿಷ್ಟ್ಯ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜಸ್ಥಾನ | ಬಿಜೆಪಿಗೆ ಮುಖಭಂಗ; ಮಾಜಿ ಸಿಎಂ ಭದ್ರಕೋಟೆ ಭೇದಿಸಿದ ಕಾಂಗ್ರೆಸ್

ರಾಜಸ್ಥಾನದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ...

ಭಾರತದ ಇತರ ಭಾಷೆಗಳನ್ನು ಗೌರವಿಸಿ, ರಕ್ಷಿಸಿದಾಗ ಮಾತ್ರ ಹಿಂದಿಯ ಪ್ರಗತಿಗೆ ಅರ್ಥ: ಅಮಿತ್ ಶಾ

ಭಾರತೀಯ ಇತರ ಭಾಷೆಗಳ ಗೌರವ, ಪ್ರಚಾರ ಮತ್ತು ರಕ್ಷಣೆಯನ್ನು ಖಚಿತಪಡಿಸಿಕೊಳ್ಳುವ ಮೂಲಕ...

ಬಂಗಾಳದ 252 ಮದರಸಾಗಳು ಬಂದ್; ಭಯೋತ್ಪಾದಕರ ಆಶ್ರಯತಾಣ ಎಂದ ಸಚಿವ: ಬಿಜೆಪಿ ಸರ್ಕಾರಕ್ಕೆ ಮುಸ್ಲಿಮರೇ ಗುರಿಯೇ?

ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರವು ರಾಜ್ಯಾದ್ಯಂತ ಕಾರ್ಯಾಚರಣೆ ನಡೆಸುತ್ತಿರುವ ಮದರಸಾಗಳ...

ಬಿಜೆಪಿಯಲ್ಲಿ ಆಂತರಿಕ ಕುಸ್ತಿ; ಪ್ರತಾಪ್ ಸಿಂಹ – ನಾಗೇಂದ್ರ‌ ಬೀದಿ ಕಾಳಗ

ಮೈಸೂರು ಜಿಲ್ಲೆಯ ಟಿ. ನರಸೀಪುರ ಗಣೇಶೋತ್ಸವ ಮೆರವಣಿಗೆ ವಿಚಾರವಾಗಿ ಇನ್ಸ್‌ಪೆಕ್ಟರ್ ಧನಂಜಯ್‌...