ಚುನಾವಣೆ ಒಳಒಪ್ಪಂದ ತನಿಖೆ ಮಾಡಿಸಿ; ಎಚ್ ಡಿ ಕುಮಾರಸ್ವಾಮಿ

Date:

Advertisements

ಕಳೆದ ವಿಧಾನಸಭೆ ಚುನಾವಣೆಯಲ್ಲಿ ʻಅಡ್ಜಸ್ಟ್ ಮೆಂಟ್ ರಾಜಕೀಯʼದ ಬಗ್ಗೆ ಸ್ವತಃ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅವರೇ ಮಾತನಾಡಿದ್ದು, ಈ ಕುರಿತು ನೂತನ ಕಾಂಗ್ರೆಸ್ ಸರ್ಕಾರ ತನಿಖೆ ನಡೆಸಲಿದೆಯೇ? ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಜಡಿಎಸ್‌ ಕಚೇರಿಯಲ್ಲಿ ಸುದ್ದಿ ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್‌ಡಿಕೆ, “ಹಿಂದಿನ ಸರ್ಕಾರದ ಎಲ್ಲ ನಿರ್ಧಾರಗಳನ್ನು ಈಗಿನ ಸರಕಾರ ತನಿಖೆ ನಡೆಸುವುದಾಗಿ ಹೇಳುತ್ತಿದೆ. ಹಾಗಾದರೆ, ಚುನಾವಣಾ ಒಳಒಪ್ಪಂದದ ಬಗ್ಗೆಯೂ ತನಿಖೆ ಮಾಡಿಸಬೇಕಲ್ಲವೇ” ಎಂದು ಪ್ರಶ್ನಿಸಿದ್ದಾರೆ.

“ಸಿ ಟಿ ರವಿ ಒಂದು ಹೇಳಿಕೆ ಗಮನಿಸಿದ್ದೇನೆ. ಕಾಂಗ್ರೆಸ್ ಮತ್ತು ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ. ನಾನು ಕಾಂಗ್ರೆಸ್ ನಾಯಕರನ್ನು ಕೇಳುತ್ತೇನೆ ಯಾವ ಜತೆ ಒಪ್ಪಂದ ಮಾಡಿಕೊಂಡಿದ್ದಿರಿ, ನಮ್ಮನ್ನು ಬಿಜೆಪಿ ಬೀ ಟೀಮ್ ಎಂದು ಹೇಳುತ್ತಿದ್ದವರು ನೀವು. ಹಿಂದೆಯೇ ನಾನು ಈ ಬಗ್ಗೆ ಹೇಳಿದ್ದೆ. ಅದು ಸತ್ಯವಾಗಿದೆ. ಈಗ ಹೇಳಿ ನೀವು ಯಾವ ಟೀಮ್? ನೀವು ಇದನ್ನು ತನಿಖೆ ಮಾಡಿಸುತ್ತೀರಾ?” ಎಂದು ಕುಮಾರಸ್ವಾಮಿ ಕೇಳಿದರು.

Advertisements

ನಾವು ಯಾವ ಪಕ್ಷದ ಜತೆಯೂ ಒಪ್ಪಂದ ಮಾಡಿಕೊಳ್ಳದೆ 20 ಕ್ಷೇತ್ರಗಳಲ್ಲಿ ಗೆದ್ದಿದ್ದೇವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರವಾಗಿ ಹೇಳಿದರು.

ಬೆಂಗಳೂರು ಘಟಕದ ಸಭೆ:

ಪಕ್ಷದ ಸಂಘಟನೆ ದೃಷ್ಟಿಯಿಂದ ಬೆಂಗಳೂರು ಮಹಾನಗರದ ಮುಖಂಡರ ಸಭೆ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಶನಿವಾರ ನಡೆಯಿತು.

ʻಸಂಘಟನೆಯನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಯುವಕರಿಗೆ ಶಕ್ತಿ ತುಂಬು ಕೆಲಸ ಮಾಡುತ್ತಿದ್ದೇನೆ. ಪಕ್ಷ ಸಂಘಟನೆಯಲ್ಲಿ ಭಾಗಿಯಾಗದವರನ್ನು ಪಕ್ಷದಿಂದ ತೆಗೆಯುತ್ತೇವೆ. ಅರ್ಹತೆ ಆಧಾರ ಮತ್ತು ಸಮುದಾಯದ ಆಧಾರದ ಮೇಲೆ ನಾನು ಅಧಿಕಾರ ಹೊಣೆಗಾರಿಕೆ ಕೊಡುತ್ತೇವೆʼ ಎಂದು ಎಚ್‌ಡಿಕೆ ಹೇಳಿದ್ದಾರೆ.

ಮುಂದಿನ ಬಿಬಿಎಂಪಿ ಚುನಾವಣೆಗೆ ಪಕ್ಷವನ್ನು ಸಜ್ಜು ಮಾಡಲಾಗುತ್ತಿದೆ. ಆ ನಿಟ್ಟಿನಲ್ಲಿ ಮುಖಂಡರ ಜತೆ ಸುದೀರ್ಘ ಸಮಾಲೋಚನೆ ನಡೆಸಲಾಗಿದೆ ಎಂದು ಅವರು ಹೇಳಿದರು.

ಮಾಜಿ ಸಚಿವ ಬಂಡೆಪ್ಪ ಕಾಶೇಂಪೂರ್, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಎಚ್ ಎಂ ರಮೇಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ, ಯಶವಂತಪುರದ ಅಭ್ಯರ್ಥಿ ಜವರಾಯಿ ಗೌಡ ಸೇರಿದಂತೆ ಬೆಂಗಳೂರು ನಗರದ ಅನೇಕ ಮುಖಂಡರು ಸಭೆಯಲ್ಲಿ ಭಾಗಿಯಾಗಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X