ಅಶೋಕ್ ಹೆಸರಿನ ನಾಮಫಲಕ ಇರೋವರೆಗೂ ವಿಪಕ್ಷ ನಾಯಕನ ಕೊಠಡಿಗೆ ಕಾಲಿಡಲ್ಲ: ಬಿಜೆಪಿ ಶಾಸಕ ವಿಶ್ವನಾಥ್

Date:

Advertisements

ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ಗಂಭೀರ ಚರ್ಚೆಗಳು ನಡೆಯಬೇಕು ಎಂಬ ಆಗ್ರಹ ಸಾರ್ವಜನಿಕರಿಂದ ವ್ಯಕ್ತವಾಗುತ್ತಿದ್ದರೆ, ವಿಪಕ್ಷ ಬಿಜೆಪಿಯೊಳಗಿನ ಭಿನ್ನಮತ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.

ಬಿಜೆಪಿಯ ಭಿನ್ನಮತದ ಮುಂದುವರಿದ ಭಾಗವಾಗಿ ಪ್ರತಿಪಕ್ಷ ನಾಯಕ ಆರ್ ಅಶೋಕ್ ಮತ್ತು ಯಲಹಂಕ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಸ್‌ ಆರ್ ವಿಶ್ವನಾಥ್ ಮಧ್ಯೆ ಅಸಮಾಧಾನ ಭುಗಿಲೆದ್ದಿದೆ. ಪ್ರತಿಪಕ್ಷ ನಾಯಕ ಆರ್.ಅಶೋಕ್ ಕೊಠಡಿಗೆ ಹೋಗಲು ವಿಶ್ವನಾಥ್ ಮತ್ತೆ ನಿರಾಕರಿಸಿದ್ದಾರೆ.

ಸದನದಲ್ಲಿ ಮುಂದಿನ ಕಾರ್ಯತಂತ್ರಗಳ ಬಗ್ಗೆ ಆರ್ ಅಶೋಕ್ ಕಚೇರಿಯಲ್ಲಿ ಮಂಗಳವಾರ ಬೆಳಗ್ಗೆ ‘ಕ್ಲೋಸ್ಡ್ ಡೋರ್ ಮೀಟಿಂಗ್’ ನಡೆಯುತ್ತಿದ್ದ ಸಂದರ್ಭ ಶಾಸಕ ಮುನಿರತ್ನ, ವಿಶ್ವನಾಥ್ ಅವರನ್ನು ಅಶೋಕ್ ಕೊಠಡಿಗೆ ಕರೆದೊಯ್ಯಲು ಕೈ ಹಿಡಿದುಕೊಂಡರು.

ಈ ವೇಳೆ, ವಿಶ್ವನಾಥ್ ಅವರು, “ಅಶೋಕ್ ಹೆಸರಿನ ನಾಮಫಲಕ ಇರುವವರೆಗೂ ನಾನು ಆ ಕೊಠಡಿಗೆ ಕಾಲಿಡುವುದಿಲ್ಲ. ಬೇಕಾದರೆ ನಾಮಫಲಕ ತೆಗೆಯಲಿ, ಆಗ ಹೋಗುತ್ತೇನೆ” ಎಂದು ಕಡ್ಡಿ ಮುರಿದಂತೆ ಹೇಳಿ ಕೊಠಡಿ ಮುಂಭಾಗದ ಮೊಗಸಾಲೆಯಲ್ಲಿ ಕುಳಿತಿದ್ದಾರೆ. ಈ ಎಲ್ಲ ಬೆಳವಣಿಗೆ ಅಲ್ಲಿದ್ದ ಮಾಧ್ಯಮದವರ ಕಣ್ಣಿಗೆ ಬಿದ್ದಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಬಣದಲ್ಲಿ ಗುರುತಿಸಿಕೊಂಡಿರುವ ವಿಶ್ವನಾಥ್, ಬಳಿಕ ವಿಜಯೇಂದ್ರ ಜೊತೆ ಮಾತುಕತೆ ನಡೆಸಿದ್ದಾರೆ.

ವಿಜಯೇಂದ್ರ ಜೊತೆಗಿನ ಮಾತುಕತೆ ವೇಳೆ ವಿಶ್ವನಾಥ್, ಅಶೋಕ್ ಮೇಲಿನ ಬೇಸರವನ್ನು ವ್ಯಕ್ತಪಡಿಸಿರುವುದಾಗಿ ವರದಿಯಾಗಿದೆ. ಆನಂತರ ವಿಜಯೇಂದ್ರ, ಅದನ್ನೆಲ್ಲಾ ಮಾತನಾಡೋದು ಬಿಡಿ ಒಗ್ಗಟ್ಟಾಗಿ ಹೋಗೋಣ ಎಂದು ಮನವೊಲಿಸಿ ಸಂಧಾನ ಮಾಡಿರುವುದಾಗಿ ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜಕೀಯ ವಿಕೃತಿ | ಖರ್ಗೆ ಅವರ ಅನಾರೋಗ್ಯ – ನಂಜು ಕಾರುತ್ತಿರುವ ಬಿಜೆಪಿಗರು

ಖರ್ಗೆ ಅವರು ದಲಿತ ಸಮುದಾಯದಿಂದ ಬಂದವರು. ಆ ಕಾರಣಕ್ಕಾಗಿಯೇ ಬಿಜೆಪಿ ಮತ್ತು...

ಚಿತ್ರದುರ್ಗ | ನಿಗಮ ಮಂಡಳಿಗೆ ಪರಿಗಣಿಸದೇ ಅನ್ಯಾಯ: ಕಾಂಗ್ರೆಸ್ಸಿನ ಆರ್ ಕೆ ಸರ್ದಾರ್ ಬೆಂಬಲಿಗರ ಆಕ್ರೋಶ

ʼʼಕರ್ನಾಟಕ ಪ್ರದೇಶ ಕಾಂಗ್ರೆಸ್ಸಿನ ಹಾಗೂ ಚಿತ್ರದುರ್ಗದ ಹಿರಿಯ ಮುಖಂಡರು ಮುಸ್ಲಿಂ ನಾಯಕರಾದ...

ಮಳೆ ಹಾನಿ ಪ್ರದೇಶಗಳಿಗೆ ಸಚಿವರು, ಅಧಿಕಾರಿಗಳು ಭೇಟಿ ನೀಡುತ್ತಿಲ್ಲ: ಪ್ರತಿಪಕ್ಷ ನಾಯಕ ಆರ್‌ ಅಶೋಕ

ಮಳೆ ಹಾನಿ ಪ್ರದೇಶಗಳಿಗೆ ಸಚಿವರು, ಅಧಿಕಾರಿಗಳು ಭೇಟಿ ನೀಡುತ್ತಿಲ್ಲ. ಎಲ್ಲರೂ ಜಾತಿ...

ಈದಿನ ಗ್ರೌಂಡ್‌ ರಿಪೋರ್ಟ್‌ | ಪ್ರವಾಹ ಇಳಿದುಹೋದ ಮೇಲೆ… ಬದುಕೆಲ್ಲ ಬರಿದಾಗಿದೆ!

ಕಲಬುರಗಿ ಜಿಲ್ಲೆಯಲ್ಲಿ ಭೀಮಾ ನದಿಯ ಪ್ರವಾಹ ತಗ್ಗಿದೆ. ಇಷ್ಟು ದಿನ ಆರ್ಭಟಿಸಿದ...

Download Eedina App Android / iOS

X