ಜಿ 20 ಶೃಂಗಸಭೆ ಮುಗಿದಿದೆ, ಮೋದಿ ಸರ್ಕಾರ ದೇಶೀಯ ಸಮಸ್ಯೆಗಳತ್ತ ಗಮನ ಹರಿಸಬೇಕು: ಮಲ್ಲಿಕಾರ್ಜುನ ಖರ್ಗೆ

Date:

ಜಿ20 ಶೃಂಗಸಭೆ ಈಗ ಮುಗಿದಿದ್ದು, ಮೋದಿ ಸರಕಾರವು ಹಣದುಬ್ಬರ, ನಿರುದ್ಯೋಗ ಮತ್ತು ಮಣಿಪುರ ಹಿಂಸಾಚಾರದಂತಹ ದೇಶೀಯ ಸಮಸ್ಯೆಗಳತ್ತ ಗಮನ ಹರಿಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ (ಸೆಪ್ಟೆಂಬರ್‌ 11) ಹೇಳಿದ್ದಾರೆ.

- Advertisement -

ಈ ಬಗ್ಗೆ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ನಿರುದ್ಯೋಗದ ಹೆಚ್ಚಳ ಕುರಿತು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಖರ್ಗೆ ಪಟ್ಟಿ ಮಾಡಿರುವ ವಿಷಯಗಳು

ಹಣದುಬ್ಬರ: ಸಾಮಾನ್ಯ ಒಂದು ಪ್ಲೇಟ್‌ ಊಟದ ಬೆಲೆ ಆಗಸ್ಟ್‌ನಲ್ಲಿ ಶೇ. 24 ರಷ್ಟು ಹೆಚ್ಚಾಗಿದೆ

ನಿರುದ್ಯೋಗ: ದೇಶದಲ್ಲಿ ನಿರುದ್ಯೋಗ ದರ ಶೇ.8 ರಷ್ಟಿದ್ದು, ಯುವಕರ ಭವಿಷ್ಯ ಮಂಕಾಗಿದೆ

ಹಗರಣಗಳು: ಮೋದಿ ಸರ್ಕಾರದ ದುರಾಡಳಿತ ಭ್ರಷ್ಟಾಚಾರಕ್ಕೆ ಕಾರಣವಾಗಿದೆ. ಸಿಎಜಿ ಹಲವಾರು ವರದಿಗಳಲ್ಲಿ ಬಿಜೆಪಿ ಸರ್ಕಾರದ ಹಗರಣಗಳನ್ನು ಬಹಿರಂಗಪಡಿಸಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ 13000 ಕೋಟಿ ರೂ. ಜಲ ಜೀವನ್ ಹಗರಣ ಬೆಳಕಿಗೆ ಬಂದಿದೆ. ಇದರಲ್ಲಿ ದಲಿತ ಐಎಎಸ್ ಅಧಿಕಾರಿಯೊಬ್ಬರು ಭ್ರಷ್ಟಾಚಾರವನ್ನು ಬಯಲಿಗೆಳೆದ ಕಾರಣ ಅವರಿಗೆ ಚಿತ್ರಹಿಂಸೆ ನೀಡಲಾಗಿದೆ.

ಲೂಟಿ: ಪ್ರಧಾನಿ ಆತ್ಮೀಯ ಗೆಳೆಯನ ಲೂಟಿ ಇತ್ತೀಚೆಗೆ ಮತ್ತೆ ಬೆಳಕಿಗೆ ಬಂದಿದೆ. 2019 ರ ಚುನಾವಣೆಗೆ ಮುನ್ನ ಆರ್‌ಬಿಐ ಖಜಾನೆಯಿಂದ ಮೋದಿ ಸರ್ಕಾರಕ್ಕೆ 3 ಲಕ್ಷ ಕೋಟಿ ರೂಪಾಯಿ ವರ್ಗಾಯಿಸುವಂತೆ ಸರ್ಕಾರದ ಒತ್ತಡವನ್ನು ಆರ್‌ಬಿಐ ಮಾಜಿ ಡೆಪ್ಯೂಟಿ ಗವರ್ನರ್ ವಿರಳ್ ಆಚಾರ್ಯ ವಿರೋಧಿಸಿದ್ದರು ಎಂಬುದು ಈಗ ಬಹಿರಂಗವಾಗಿದೆ.

ದುರಂತ: ಕಳೆದ ಕೆಲ ದಿನಗಳಿಂದ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಹೆಚ್ಚಾಗುತ್ತಿದೆ. ಹಿಮಾಚಲ ಪ್ರದೇಶದಲ್ಲಿ ವಿಪತ್ತು ಸಂಭವಿಸಿದ್ದು, ಆದರೆ ದುರಹಂಕಾರಿ ಮೋದಿ ಸರ್ಕಾರ ಇದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವುದನ್ನು ತಪ್ಪಿಸುತ್ತಿದೆ. ಇದೆಲ್ಲದರ ನಡುವೆ ಮೋದಿಯವರು ಸತ್ಯವನ್ನು ಮರೆಮಾಚಲು ಪ್ರಯತ್ನಿಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? 5 ರಾಜ್ಯಗಳ ಚುನಾವಣೆಯನ್ನು ಮುಂದೂಡುವುದೇ ‘ಒಂದು ರಾಷ್ಟ್ರ ಒಂದು ಚುನಾವಣೆ’ ಗುರಿ: ಪ್ರಶಾಂತ್ ಭೂಷಣ್

ಆದರೆ ಸಾರ್ವಜನಿಕರು ಮೋದಿ ಸರ್ಕಾರದ ಗಮನ ಬೇರೆಡೆ ಸೆಳೆಯುವ ಸಮಸ್ಯೆಗಳ ಬದಲಿಗೆ ಸತ್ಯವನ್ನು ತಿಳಿದುಕೊಳ್ಳಲು ಬಯಸುತ್ತಾರೆ.

ಅಲ್ಲದೆ 2024 ರಲ್ಲಿ ನಿಮ್ಮ ನಿರ್ಗಮನಕ್ಕೆ ದೇಶದ ನಾಗರಿಕರು ದಾರಿ ಮಾಡಿಕೊಡಲು ಪ್ರಾರಂಭಿಸಿದ್ದಾರೆ ಎಂಬುದನ್ನು ಮೋದಿ ಸರ್ಕಾರ ಎಚ್ಚರಿಕೆಯಿಂದ ಆಲಿಸಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶೇಖ್‌ ಹಸೀನಾ ಪಕ್ಷದ 7 ನಾಯಕರಿಗೆ ಮರಣದಂಡನೆ

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್‌ ಹಸೀನಾ ಅವರ ಅವಾಮಿ ಲೀಗ್‌ ಪಕ್ಷದ...

ಪತಂಜಲಿ ಪ್ರಕರಣ: ಕಣ್ಣುಮುಚ್ಚಿಕೊಂಡು ಆದೇಶ ಹೊರಡಿಸಿದ ‘ಐಟಿಎಟಿ’ಗೆ ದೆಹಲಿ ಹೈಕೋರ್ಟ್ ತರಾಟೆ, 7 ಆದೇಶಗಳು ರದ್ದು

ಪತಂಜಲಿ ಆಯುರ್ವೇದ ಲಿಮಿಟೆಡ್‌ಗೆ ಸಂಬಂಧಿಸಿದಂತೆ 'ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧೀಕರಣ' (ITAT)...

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ ವಿಮಾನಗಳ ವಿಳಂಬ: ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರತಿಭಟನೆ

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ನ ಎರಡು ವಿಮಾನಗಳು ಪದೇಪದೇ ವಿಳಂಬಗೊಂಡ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ...

ಸಿಜೆಪಿ ಪ್ರತಿಭಟನೆಯ ಹಲ್ಲೆ ಆರೋಪಿ ಸಂಘಿ ಭಾರದ್ವಾಜ್‌ಗೆ 3 ವಾರ ಮಧ್ಯಂತರ ಜಾಮೀನು

ಜಂತರ್‌ ಮಂತರ್‌ನಲ್ಲಿ ನಡೆದ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ಪ್ರತಿಭಟನೆ ವೇಳೆ...