ಡಿಕೆಶಿ ವಿರುದ್ದದ ಸಿಬಿಐ ತನಿಖೆಗೆ ಅನುಮತಿ ಹಿಂಪಡೆತ: ವಾದ ಮಂಡಿಸಲು ಸರ್ಕಾರಕ್ಕೆ ನಿರ್ದೇಶಿಸಿದ ಹೈಕೋರ್ಟ್‌

Date:

Advertisements

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆಗೆ ಸಿಬಿಐಗೆ ನೀಡಿದ್ದ ಅನುಮತಿ ಹಿಂಪಡೆದಿರುವ ಕಾಂಗ್ರೆಸ್‌ ಸರ್ಕಾರದ ಆದೇಶವನ್ನು ಪ್ರಶ್ನಿಸಿ, ಬಿಜೆಪಿ ಶಾಸಕ ಬಸನಗೌಡ ಯತ್ನಾಳ್‌ ಸಲ್ಲಿಸಿರುವ ಅರ್ಜಿಯ ವಿಚಾರಣೆಯು ಶುಕ್ರವಾರ(ಡಿ.15) ಹೈಕೋರ್ಟ್‌ನಲ್ಲಿ ನಡೆಯಿತು.

ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ, ಅರ್ಜಿಯ ಊರ್ಜಿತತ್ವದ ಬಗ್ಗೆ ಮುಂದಿನ ವಿಚಾರಣೆ ವೇಳೆ ವಾದ ಮಂಡಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತು.

ಅರ್ಜಿ ವಿಚಾರಣೆಯ ಆರಂಭದಲ್ಲಿ ಪೀಠವು ಅರ್ಜಿದಾರರು ಹೇಗೆ ಇದರಿಂದ ಬಾಧಿತರು ಎಂದು ಅರ್ಜಿದಾರರ ಪರ ವಕೀಲರನ್ನು ಪ್ರಶ್ನಿಸಿತು. ಇದಕ್ಕೆ ಅರ್ಜಿದಾರರ ಪರವಾಗಿ ವಾದಿಸಿದ ವಕೀಲ ವೆಂಕಟೇಶ್ ದಳವಾಯಿ, “ವೈಯಕ್ತಿಕವಾಗಿ ಬಾಧಿತರಾಗದಿದ್ದರೂ ಯಾರು ಬೇಕಾದರೂ ಕ್ರಿಮಿನಲ್‌ ಕಾನೂನಿಗೆ ಚಾಲನೆ ನೀಡಬಹುದು” ಎಂದರು. ಇದಕ್ಕೆ ಪೀಠವು ಸಹಮತಿಸಿತು.

Advertisements

ಅಂತಿಮವಾಗಿ ಪೀಠವು, “ದಳವಾಯಿ ಅವರು ಕೆಲ ಪ್ರಕರಣಗಳನ್ನು ಉಲ್ಲೇಖಿಸಿದ್ದಾರೆ. ಈ ಎಲ್ಲ ತೀರ್ಪುಗಳನ್ನು ಅಧ್ಯಯನ ಮಾಡಿ ಉತ್ತರಿಸಲು ಅಡ್ವೊಕೇಟ್‌ ಜನರಲ್‌ ಅವರು ಸಮಯ ಕೋರಿದ್ದಾರೆ. ಹೀಗಾಗಿ, 2024ರ ಜನವರಿ 5ರಂದು ಎಜಿ ಅವರು ಅರ್ಜಿಯ ಊರ್ಜಿತತ್ವಕ್ಕೆ ಸಂಬಂಧಿಸಿದಂತೆ ವಿಸ್ತೃತವಾಗಿ ಉತ್ತರಿಸಬೇಕು” ಎಂದು ಹೇಳಿ ವಿಚಾರಣೆಯನ್ನು ಮುಂದೂಡಿತು.

ಏನಿದು ಪ್ರಕರಣ?

2019ರಲ್ಲಿ ಬಿಜೆಪಿ ಸರ್ಕಾರವು ಡಿ ಕೆ ಶಿವಕುಮಾರ್‌ ವಿರುದ್ಧ ಅಕ್ರಮ ಹಣ ಗಳಿಕೆ ಪ್ರಕರಣದ ತನಿಖೆಗೆ ಸಿಬಿಐಗೆ ಅನುಮತಿಸಿತ್ತು. ಇದನ್ನು ಪ್ರಶ್ನಿಸಿ ಡಿ ಕೆ ಶಿವಕುಮಾರ್‌ ಸಲ್ಲಿಸಿದ್ದ ಅರ್ಜಿಯನ್ನು ಏಕಸದಸ್ಯ ಪೀಠ ವಜಾ ಮಾಡಿತ್ತು. ಆನಂತರ ಇದನ್ನು ಪ್ರಶ್ನಿಸಿ ಡಿ ಕೆ ಶಿವಕುಮಾರ್‌ ವಿಭಾಗೀಯ ಪೀಠದ ಮುಂದೆ ಮೇಲ್ಮನವಿ ಸಲ್ಲಿಸಿದ್ದರು.

ಈ ನಡುವೆ, ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರ್ಕಾರವು ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ನವೆಂಬರ್‌ 28ರಂದು ಹಿಂಪಡೆದಿತ್ತು. ಈ ಹಿನ್ನೆಲೆಯಲ್ಲಿ ಡಿ ಕೆ ಶಿವಕುಮಾರ್‌ ಮೇಲ್ಮನವಿ ಹಿಂಪಡೆದಿದ್ದರು. ಹೀಗಾಗಿ, ವಿಭಾಗೀಯ ಪೀಠವು ಅರ್ಜಿ ಇತ್ಯರ್ಥಪಡಿಸಿತ್ತು. ಇದನ್ನು ಆಕ್ಷೇಪಿಸಿ ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಅವರು ಸಿಬಿಐಗೆ ನೀಡಿದ್ದ ಅನುಮತಿ ಹಿಂಪಡೆದಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಕಳವಳ ವ್ಯಕ್ತಪಡಿಸಿದ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆ(SIR) ಬಗ್ಗೆ ನೊಬೆಲ್ ಪ್ರಶಸ್ತಿ ವಿಜೇತ...

ಕರಾವಳಿಯಲ್ಲಿ ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ: ಡಿಸಿಎಂ ಡಿ ಕೆ ಶಿವಕುಮಾರ್

"ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ...

ಚಿತ್ರದುರ್ಗ | ಚಳ್ಳಕೆರೆ ನಗರದಲ್ಲಿ ರಸ್ತೆ ಗುಂಡಿಗಳ ಪೂಜೆ; ಕರ್ನಾಟಕ ರಾಷ್ಟ್ರ ಸಮಿತಿಯಿಂದ ವಿನೂತನ ಪ್ರತಿಭಟನೆ

ಚಳ್ಳಕೆರೆ ನಗರದ ಬಹುತೇಕ ವಾರ್ಡುಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ, ಅಲ್ಲದೆ ತಾಲೂಕಿನ...

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

Download Eedina App Android / iOS

X