ದೆಹಲಿಗೆ ಮಹಿಳಾ ಮುಖ್ಯಮಂತ್ರಿ? ರೇಖಾ ಗುಪ್ತಾ ಆಯ್ಕೆ ಸಾಧ್ಯತೆ!

Date:

Advertisements

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 48 ಸ್ಥಾನಗಳನ್ನು ಗೆದ್ದು, ಸರ್ಕಾರ ರಚನೆಗೆ ಸಜ್ಜಾಗಿದೆ. 27 ವರ್ಷಗಳ ಬಳಿಕ ರಾಷ್ಟ್ರ ರಾಜಧಾನಿಯ ಗದ್ದುತೆಯ್ನು ತನ್ನ ವಶಕ್ಕೆ ಪಡೆದಿದೆ. ದೆಹಲಿಯಲ್ಲಿ ಬಿಜೆಪಿಯಿಂದ ಯಾರು ಮುಖ್ಯಮಂತ್ರಿ ಎಂಬ ಚರ್ಚೆಗಳು ನಡೆಯುತ್ತಿವೆ. ಬಿಜೆಪಿ ಜಾತಿ, ಲಿಂಗ ಸಮೀಕರಣದೊಂದಿಗೆ ಮುಖ್ಯಮಂತ್ರಿ ನೇಮಿಸಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ. ಸದ್ಯ, ಬಿಜೆಪಿ ಶಾಸಕಿ ರೇಖಾ ಗುಪ್ತಾ ಅವರ ಹೆಸರು ಮುನ್ನೆಲೆಯಲ್ಲಿದೆ.

ವಿದ್ಯಾರ್ಥಿಯಾಗಿದ್ದಾಗಲೇ ಬಿಜೆಪಿ ಬೆಂಬಲಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿಯಲ್ಲಿ ತೊಡಗಿಸಿಕೊಂಡಿದ್ದ ರೇಖಾ ಗುಪ್ತ ಅವರು ವೈಶ್ಯ ಸಮುದಾಯಕ್ಕೆ ಸೇರಿದವರು. ಅವರು ಸ್ನಾತಕೋತ್ತರ ಪದವಿ ಪಡೆಯುವಾಗ ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷೆಯೂ ಆಗಿದ್ದರು. ಅಲ್ಲದೆ, 2022ರಲ್ಲಿ ದೆಹಲಿ ಮಹಾನಗರ ಪಾಲಿಕೆ ಚುನಾವಣೆ ನಡೆದಾಗ, ರೇಖಾ ಗುಪ್ತಾ ಅವರನ್ನು ಬಿಜೆಪಿ ಮೇಯರ್ ಅಭ್ಯರ್ಥಿಯಾಗಿ ಕಣಕ್ಕಿಳಿಸಿತ್ತು. ಆದರೆ, ಎಎಪಿ ಬಹುಮತ ಪಡೆದು, ಆಡಳಿತ ರಚಿಸಿದ್ದರಿಂದ, ರೇಖಾ ಗುಪ್ತಾ ಅವರಿಗೆ ಮೇಯರ್ ಹುದ್ದೆ ಕೈತಪ್ಪಿತ್ತು.

ಜಾತಿ ಆಧಾರಿತವಾಗಿ ನೋಡದರೂ, ಲಿಂಗ ಆಧಾರತವಾಗಿ ನೋಡಿದರೂ ರೇಖಾ ಗುಪ್ತ ಅವರಿಗೆ ಅವಕಾಶ ದೊರೆಯುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಒಂದು ವೇಳೆ, ಮುಖ್ಯಮಂತ್ರಿ ಹುದ್ದೆ ತಪ್ಪಿದರೂ, ಉಪಮುಖ್ಯಮಂತ್ರಿ ಹುದ್ದೆಯಾದರೂ ದೊರೆಯುವ ಸಾಧ್ಯತೆಗಳಿವೆ ಎಂಬುದು ದೆಹಲಿಯಲ್ಲಿನ ಚರ್ಚೆ.

Advertisements

ಆದಾಗ್ಯೂ, ಜಾಟ್‌ (ಎಸ್‌ಸಿ) ಸಮುದಾಯಕ್ಕೆ ಸೇರಿದ ರಾಜ್‌ ಕುಮಾರ್ ಚೌಹಾಣ್‌ ಅವರ ಹೆಸರು ಕೂಡ ಮುನ್ನೆಲೆಯಲ್ಲಿದೆ. ಸದ್ಯ, ದೆಹಲಿ, ಹರಿಯಾಣ, ಪಂಜಾಬ್ ಹಾಗೂ ಉತ್ತರ ಪ್ರದೇಶದಲ್ಲಿ ಜಾಟ್‌ ಸಮುದಾಯದ ಪ್ರಾಬಲ್ಯ ಹೆಚ್ಚಿರುವ ಕಾರಣ, ಚೌಹಾಣ್ ಅವರನ್ನು ದೆಹಲಿ ಮುಖ್ಯಮಂತ್ರಿ ಮಾಡುವುದು, ಪಕ್ಕದ ರಾಜ್ಯಗಳಲ್ಲಿಯೂ ಬಿಜೆಪಿಗೆ ಹೆಚ್ಚು ನೆರವಾಗುತ್ತದೆ ಎಂದೂ ಹೇಳಲಾಗುತ್ತಿದೆ.

ಸದ್ಯ, ಬಿಜೆಪಿ ನಾಯಕರು ಮುಖ್ಯಮಂತ್ರಿ ಆಯ್ಕೆಗಾಗಿ ಚರ್ಚೆ ನಡೆಸುತ್ತಿದ್ದಾರೆ. ಪ್ರಧಾನಿ ಮೋದಿ ಅವರು ವಿದೇಶಿ ಪ್ರವಾಸದಲ್ಲಿದ್ದು, ಅವರು ಭಾರತಕ್ಕೆ ಮರಳಿದ ಬಳಿಕ ದೆಹಲಿಯಲ್ಲಿ ಸರ್ಕಾರ ರಚನೆ ಮಾಡುವ ಸಾಧ್ಯತೆಗಳಿವೆ. ಆ ವೇಳೆಗೆ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಬಿಜೆಪಿ ಹೈಕಮಾಂಡ್‌ ಫೈನಲ್‌ ಮಾಡಲಿದೆ ಎಂದು ವರದಿಯಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X